ಕೆರೆಗೆಳ‌ ಸಂರಕ್ಷಣೆಗೆ ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ನದಿ ಮೂಲಗಳು ಇಲ್ಲವಾದ್ದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ನಾಗರಕೆರೆ ನಿರ್ವಹಣೆ ಯೋಜನೆ ಮತ್ತು ಅರ್ಕಾವತಿ ಜಲಾನಯನದ ಸಂರಕ್ಷಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆಗೆ ಜಿಲ್ಲಾಡಳಿತವು ಸದಾ ಕಾರ್ಯಪ್ರವೃತ್ತಿ ಆಗಿರುತ್ತದೆ. ಈ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ನಾಗರಕೆರೆ ನಿರ್ವಹಣಾ ಯೋಜನೆ ಅಡಿ ನಾಗರಕೆರೆಯನ್ನು ಸಂರಕ್ಷಿಸಲು ಜಿಲ್ಲಾಡಳಿತ ವತಿಯಿಂದ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ.

ನಾಗರಕೆರೆಯು 20 ಹೆಕ್ಟೇರ್ ನಷ್ಟು ವಿಸ್ತೀರ್ಣ ಹೊಂದಿದ್ದು ಕೆರೆಯ ಸುತ್ತಲೂ ಸಸಿಗಳನ್ನು ನೆಡಲಾಗಿದೆ. ಇನ್ನುಳಿದ ಭಾಗದಲ್ಲಿ ಮುಂದಿನ ದಿನಗಳಲ್ಲಿ ಸಸಿ ನೆಡಸಲು ಕ್ರಮ ವಹಿಸಲಾಗುವುದು. ಕೆರೆಯ ನೀರು ಕಲುಷಿತವಾಗದಂತೆ ತಡೆಯಲು ಹಾಗೂ ಕೆರೆಗೆ ಕೊಳಚೆ ನೀರನ್ನು ತಲುಪದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಯಲ್ಲಿ ಬೆಳೆದು ನಿಂತಿರುವ ಕಳೆಯನ್ನು ತೆಗೆಯಲು ಅಗತ್ಯ ಕ್ರಮ ವಹಿಸಿ ಕೆರೆ ಸುತ್ತಲೂ ಬೇಲಿ ನಿರ್ಮಿಸಲು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

WWF(WORLD WDE FUND FOR NATURE) ಸಂಸ್ಥೆಯು Building community resilience through nature based solutions ಎಂಬ ಸಂಶೋಧನೆ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗರಕೆರೆಯನ್ನು ಸಂರಕ್ಷಿಸಲು ಯೋಜನೆ ರೂಪಿಸಿದೆ.

ಕೆರೆಯ ನೀರಿನ ಗುಣಮಟ್ಟ ಹಾಗೂ ಕೆರೆಯ ನೀರು ಕಲುಷಿತಗೊಳ್ಳುವುದನ್ನು ತಪ್ಪಿಸಲು ಕೆಲವು ಅಂಶಗಳನ್ನು ಪ್ರಸ್ತಾಪಿಸಿದೆ. ತ್ಯಾಜ್ಯ ನಿರ್ವಹಣೆ, ನೀರಿನ ಹರಿವು ತಿಳಿಯುವ ಬಗೆ, ನೀರಿನ ಗುಣಮಟ್ಟ ಕಾಪಾಡುವಿಕೆಗೆ ಫ್ಲೋಟಿಂಗ್ ಫೌಂಟೇನ್ ಅಳವಡಿಕೆ, ಸ್ಥಳಿಯ ಮರಗಳ ಬೆಳವಣಿಗೆಗೆ ಉತ್ತೇಜನ, ಕೆರೆಯಲ್ಲಿನ ಕಳೆ ನಾಶಪಡಿಸಲು ಕ್ರಮ ಕೈಗೊಳ್ಳುವುದು, ಕೆರೆಗೆ ಬರುವ ನೀರಿನ ಪ್ರಮಾಣ ಹೆಚ್ಚಿಸಲು ರಾಜಕಾಲುವೆಗಳನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಕೆರೆ ಸಂರಕ್ಷಣೆ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಸ್ಥೆಯವರು ತಿಳಿಸಿ ಜಿಲ್ಲಾಡಳಿದ ಸಹಕಾರ ಕೋರಿದರು.

ಇದಕ್ಕೆ ಜಿಲ್ಲಾಧಿಕಾರಿಗಳು ಸಹಮತ ಸೂಚಿಸಿ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದರಲ್ಲದೆ ಸಂಸ್ಥೆಗೆ ಧನ್ಯವಾದ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ಹಿರಿಯ ಭೂ ವಿಜ್ಞಾನಿ ಪಲ್ಲವಿ, ಡಬ್ಲ್ಯೂ.ಡಬ್ಲ್ಯೂ.ಎಫ್ ನ ಕೆರೆ ಸಂರಕ್ಷಣಾ ಸಹಾಯಕ ನಿರ್ದೇಶಕ ಡಾ. ಅಮಿತ್ ದುಬೆ, ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

2 hours ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

2 hours ago

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

7 hours ago

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

19 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

20 hours ago