ಕೆರೆಗೆಳ‌ ಸಂರಕ್ಷಣೆಗೆ ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ನದಿ ಮೂಲಗಳು ಇಲ್ಲವಾದ್ದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ನಾಗರಕೆರೆ ನಿರ್ವಹಣೆ ಯೋಜನೆ ಮತ್ತು ಅರ್ಕಾವತಿ ಜಲಾನಯನದ ಸಂರಕ್ಷಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆಗೆ ಜಿಲ್ಲಾಡಳಿತವು ಸದಾ ಕಾರ್ಯಪ್ರವೃತ್ತಿ ಆಗಿರುತ್ತದೆ. ಈ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ನಾಗರಕೆರೆ ನಿರ್ವಹಣಾ ಯೋಜನೆ ಅಡಿ ನಾಗರಕೆರೆಯನ್ನು ಸಂರಕ್ಷಿಸಲು ಜಿಲ್ಲಾಡಳಿತ ವತಿಯಿಂದ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ.

ನಾಗರಕೆರೆಯು 20 ಹೆಕ್ಟೇರ್ ನಷ್ಟು ವಿಸ್ತೀರ್ಣ ಹೊಂದಿದ್ದು ಕೆರೆಯ ಸುತ್ತಲೂ ಸಸಿಗಳನ್ನು ನೆಡಲಾಗಿದೆ. ಇನ್ನುಳಿದ ಭಾಗದಲ್ಲಿ ಮುಂದಿನ ದಿನಗಳಲ್ಲಿ ಸಸಿ ನೆಡಸಲು ಕ್ರಮ ವಹಿಸಲಾಗುವುದು. ಕೆರೆಯ ನೀರು ಕಲುಷಿತವಾಗದಂತೆ ತಡೆಯಲು ಹಾಗೂ ಕೆರೆಗೆ ಕೊಳಚೆ ನೀರನ್ನು ತಲುಪದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಯಲ್ಲಿ ಬೆಳೆದು ನಿಂತಿರುವ ಕಳೆಯನ್ನು ತೆಗೆಯಲು ಅಗತ್ಯ ಕ್ರಮ ವಹಿಸಿ ಕೆರೆ ಸುತ್ತಲೂ ಬೇಲಿ ನಿರ್ಮಿಸಲು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

WWF(WORLD WDE FUND FOR NATURE) ಸಂಸ್ಥೆಯು Building community resilience through nature based solutions ಎಂಬ ಸಂಶೋಧನೆ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗರಕೆರೆಯನ್ನು ಸಂರಕ್ಷಿಸಲು ಯೋಜನೆ ರೂಪಿಸಿದೆ.

ಕೆರೆಯ ನೀರಿನ ಗುಣಮಟ್ಟ ಹಾಗೂ ಕೆರೆಯ ನೀರು ಕಲುಷಿತಗೊಳ್ಳುವುದನ್ನು ತಪ್ಪಿಸಲು ಕೆಲವು ಅಂಶಗಳನ್ನು ಪ್ರಸ್ತಾಪಿಸಿದೆ. ತ್ಯಾಜ್ಯ ನಿರ್ವಹಣೆ, ನೀರಿನ ಹರಿವು ತಿಳಿಯುವ ಬಗೆ, ನೀರಿನ ಗುಣಮಟ್ಟ ಕಾಪಾಡುವಿಕೆಗೆ ಫ್ಲೋಟಿಂಗ್ ಫೌಂಟೇನ್ ಅಳವಡಿಕೆ, ಸ್ಥಳಿಯ ಮರಗಳ ಬೆಳವಣಿಗೆಗೆ ಉತ್ತೇಜನ, ಕೆರೆಯಲ್ಲಿನ ಕಳೆ ನಾಶಪಡಿಸಲು ಕ್ರಮ ಕೈಗೊಳ್ಳುವುದು, ಕೆರೆಗೆ ಬರುವ ನೀರಿನ ಪ್ರಮಾಣ ಹೆಚ್ಚಿಸಲು ರಾಜಕಾಲುವೆಗಳನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಕೆರೆ ಸಂರಕ್ಷಣೆ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಸ್ಥೆಯವರು ತಿಳಿಸಿ ಜಿಲ್ಲಾಡಳಿದ ಸಹಕಾರ ಕೋರಿದರು.

ಇದಕ್ಕೆ ಜಿಲ್ಲಾಧಿಕಾರಿಗಳು ಸಹಮತ ಸೂಚಿಸಿ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದರಲ್ಲದೆ ಸಂಸ್ಥೆಗೆ ಧನ್ಯವಾದ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ಹಿರಿಯ ಭೂ ವಿಜ್ಞಾನಿ ಪಲ್ಲವಿ, ಡಬ್ಲ್ಯೂ.ಡಬ್ಲ್ಯೂ.ಎಫ್ ನ ಕೆರೆ ಸಂರಕ್ಷಣಾ ಸಹಾಯಕ ನಿರ್ದೇಶಕ ಡಾ. ಅಮಿತ್ ದುಬೆ, ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

3 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

5 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

18 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

18 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

23 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

1 day ago