ಕೆರೆಗೆಳ‌ ಸಂರಕ್ಷಣೆಗೆ ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ನದಿ ಮೂಲಗಳು ಇಲ್ಲವಾದ್ದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ನಾಗರಕೆರೆ ನಿರ್ವಹಣೆ ಯೋಜನೆ ಮತ್ತು ಅರ್ಕಾವತಿ ಜಲಾನಯನದ ಸಂರಕ್ಷಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆಗೆ ಜಿಲ್ಲಾಡಳಿತವು ಸದಾ ಕಾರ್ಯಪ್ರವೃತ್ತಿ ಆಗಿರುತ್ತದೆ. ಈ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ನಾಗರಕೆರೆ ನಿರ್ವಹಣಾ ಯೋಜನೆ ಅಡಿ ನಾಗರಕೆರೆಯನ್ನು ಸಂರಕ್ಷಿಸಲು ಜಿಲ್ಲಾಡಳಿತ ವತಿಯಿಂದ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ.

ನಾಗರಕೆರೆಯು 20 ಹೆಕ್ಟೇರ್ ನಷ್ಟು ವಿಸ್ತೀರ್ಣ ಹೊಂದಿದ್ದು ಕೆರೆಯ ಸುತ್ತಲೂ ಸಸಿಗಳನ್ನು ನೆಡಲಾಗಿದೆ. ಇನ್ನುಳಿದ ಭಾಗದಲ್ಲಿ ಮುಂದಿನ ದಿನಗಳಲ್ಲಿ ಸಸಿ ನೆಡಸಲು ಕ್ರಮ ವಹಿಸಲಾಗುವುದು. ಕೆರೆಯ ನೀರು ಕಲುಷಿತವಾಗದಂತೆ ತಡೆಯಲು ಹಾಗೂ ಕೆರೆಗೆ ಕೊಳಚೆ ನೀರನ್ನು ತಲುಪದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಯಲ್ಲಿ ಬೆಳೆದು ನಿಂತಿರುವ ಕಳೆಯನ್ನು ತೆಗೆಯಲು ಅಗತ್ಯ ಕ್ರಮ ವಹಿಸಿ ಕೆರೆ ಸುತ್ತಲೂ ಬೇಲಿ ನಿರ್ಮಿಸಲು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

WWF(WORLD WDE FUND FOR NATURE) ಸಂಸ್ಥೆಯು Building community resilience through nature based solutions ಎಂಬ ಸಂಶೋಧನೆ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗರಕೆರೆಯನ್ನು ಸಂರಕ್ಷಿಸಲು ಯೋಜನೆ ರೂಪಿಸಿದೆ.

ಕೆರೆಯ ನೀರಿನ ಗುಣಮಟ್ಟ ಹಾಗೂ ಕೆರೆಯ ನೀರು ಕಲುಷಿತಗೊಳ್ಳುವುದನ್ನು ತಪ್ಪಿಸಲು ಕೆಲವು ಅಂಶಗಳನ್ನು ಪ್ರಸ್ತಾಪಿಸಿದೆ. ತ್ಯಾಜ್ಯ ನಿರ್ವಹಣೆ, ನೀರಿನ ಹರಿವು ತಿಳಿಯುವ ಬಗೆ, ನೀರಿನ ಗುಣಮಟ್ಟ ಕಾಪಾಡುವಿಕೆಗೆ ಫ್ಲೋಟಿಂಗ್ ಫೌಂಟೇನ್ ಅಳವಡಿಕೆ, ಸ್ಥಳಿಯ ಮರಗಳ ಬೆಳವಣಿಗೆಗೆ ಉತ್ತೇಜನ, ಕೆರೆಯಲ್ಲಿನ ಕಳೆ ನಾಶಪಡಿಸಲು ಕ್ರಮ ಕೈಗೊಳ್ಳುವುದು, ಕೆರೆಗೆ ಬರುವ ನೀರಿನ ಪ್ರಮಾಣ ಹೆಚ್ಚಿಸಲು ರಾಜಕಾಲುವೆಗಳನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಕೆರೆ ಸಂರಕ್ಷಣೆ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಸ್ಥೆಯವರು ತಿಳಿಸಿ ಜಿಲ್ಲಾಡಳಿದ ಸಹಕಾರ ಕೋರಿದರು.

ಇದಕ್ಕೆ ಜಿಲ್ಲಾಧಿಕಾರಿಗಳು ಸಹಮತ ಸೂಚಿಸಿ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದರಲ್ಲದೆ ಸಂಸ್ಥೆಗೆ ಧನ್ಯವಾದ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ಹಿರಿಯ ಭೂ ವಿಜ್ಞಾನಿ ಪಲ್ಲವಿ, ಡಬ್ಲ್ಯೂ.ಡಬ್ಲ್ಯೂ.ಎಫ್ ನ ಕೆರೆ ಸಂರಕ್ಷಣಾ ಸಹಾಯಕ ನಿರ್ದೇಶಕ ಡಾ. ಅಮಿತ್ ದುಬೆ, ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

10 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

13 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago