ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ನದಿ ಮೂಲಗಳು ಇಲ್ಲವಾದ್ದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ನಾಗರಕೆರೆ ನಿರ್ವಹಣೆ ಯೋಜನೆ ಮತ್ತು ಅರ್ಕಾವತಿ ಜಲಾನಯನದ ಸಂರಕ್ಷಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆಗೆ ಜಿಲ್ಲಾಡಳಿತವು ಸದಾ ಕಾರ್ಯಪ್ರವೃತ್ತಿ ಆಗಿರುತ್ತದೆ. ಈ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ನಾಗರಕೆರೆ ನಿರ್ವಹಣಾ ಯೋಜನೆ ಅಡಿ ನಾಗರಕೆರೆಯನ್ನು ಸಂರಕ್ಷಿಸಲು ಜಿಲ್ಲಾಡಳಿತ ವತಿಯಿಂದ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ.
ನಾಗರಕೆರೆಯು 20 ಹೆಕ್ಟೇರ್ ನಷ್ಟು ವಿಸ್ತೀರ್ಣ ಹೊಂದಿದ್ದು ಕೆರೆಯ ಸುತ್ತಲೂ ಸಸಿಗಳನ್ನು ನೆಡಲಾಗಿದೆ. ಇನ್ನುಳಿದ ಭಾಗದಲ್ಲಿ ಮುಂದಿನ ದಿನಗಳಲ್ಲಿ ಸಸಿ ನೆಡಸಲು ಕ್ರಮ ವಹಿಸಲಾಗುವುದು. ಕೆರೆಯ ನೀರು ಕಲುಷಿತವಾಗದಂತೆ ತಡೆಯಲು ಹಾಗೂ ಕೆರೆಗೆ ಕೊಳಚೆ ನೀರನ್ನು ತಲುಪದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೆರೆಯಲ್ಲಿ ಬೆಳೆದು ನಿಂತಿರುವ ಕಳೆಯನ್ನು ತೆಗೆಯಲು ಅಗತ್ಯ ಕ್ರಮ ವಹಿಸಿ ಕೆರೆ ಸುತ್ತಲೂ ಬೇಲಿ ನಿರ್ಮಿಸಲು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
WWF(WORLD WDE FUND FOR NATURE) ಸಂಸ್ಥೆಯು Building community resilience through nature based solutions ಎಂಬ ಸಂಶೋಧನೆ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗರಕೆರೆಯನ್ನು ಸಂರಕ್ಷಿಸಲು ಯೋಜನೆ ರೂಪಿಸಿದೆ.
ಕೆರೆಯ ನೀರಿನ ಗುಣಮಟ್ಟ ಹಾಗೂ ಕೆರೆಯ ನೀರು ಕಲುಷಿತಗೊಳ್ಳುವುದನ್ನು ತಪ್ಪಿಸಲು ಕೆಲವು ಅಂಶಗಳನ್ನು ಪ್ರಸ್ತಾಪಿಸಿದೆ. ತ್ಯಾಜ್ಯ ನಿರ್ವಹಣೆ, ನೀರಿನ ಹರಿವು ತಿಳಿಯುವ ಬಗೆ, ನೀರಿನ ಗುಣಮಟ್ಟ ಕಾಪಾಡುವಿಕೆಗೆ ಫ್ಲೋಟಿಂಗ್ ಫೌಂಟೇನ್ ಅಳವಡಿಕೆ, ಸ್ಥಳಿಯ ಮರಗಳ ಬೆಳವಣಿಗೆಗೆ ಉತ್ತೇಜನ, ಕೆರೆಯಲ್ಲಿನ ಕಳೆ ನಾಶಪಡಿಸಲು ಕ್ರಮ ಕೈಗೊಳ್ಳುವುದು, ಕೆರೆಗೆ ಬರುವ ನೀರಿನ ಪ್ರಮಾಣ ಹೆಚ್ಚಿಸಲು ರಾಜಕಾಲುವೆಗಳನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಕೆರೆ ಸಂರಕ್ಷಣೆ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಸ್ಥೆಯವರು ತಿಳಿಸಿ ಜಿಲ್ಲಾಡಳಿದ ಸಹಕಾರ ಕೋರಿದರು.
ಇದಕ್ಕೆ ಜಿಲ್ಲಾಧಿಕಾರಿಗಳು ಸಹಮತ ಸೂಚಿಸಿ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದರಲ್ಲದೆ ಸಂಸ್ಥೆಗೆ ಧನ್ಯವಾದ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ಹಿರಿಯ ಭೂ ವಿಜ್ಞಾನಿ ಪಲ್ಲವಿ, ಡಬ್ಲ್ಯೂ.ಡಬ್ಲ್ಯೂ.ಎಫ್ ನ ಕೆರೆ ಸಂರಕ್ಷಣಾ ಸಹಾಯಕ ನಿರ್ದೇಶಕ ಡಾ. ಅಮಿತ್ ದುಬೆ, ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…