ಕೆರೆಗೆ ವೈದ್ಯಕೀಯ ತ್ಯಾಜ್ಯ: ಡಾಕ್ಟರ್ ಮೇಲೆ ಎಫ್.ಐ.ಆರ್. ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆ ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಸೂಚನೆ ಮೇರೆಗೆ ಅಧಿಕಾರಿಗಳು ಕ್ರಮ ವಹಿಸಿದ್ದು, ಖಾಸಗಿ ಕ್ಲಿನಿಕ್ ವೈದ್ಯರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ.

ಯಂಟಗಾನಹಳ್ಳಿ ಗ್ರಾಮಪಂಚಾಯ್ತಿಗೆ ಸಚಿವರು ಹಠಾತ್ ಭೇಟಿ ನೀಡಿದ್ದ ವೇಳೆ ಸಾರ್ವಜನಿಕರು ವೈದ್ಯಕೀಯ ತ್ಯಾಜ್ಯವನ್ನು ಕೆರೆಗೆ ಸುರಿದಿರುವ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸ್ಥಳ ಪರಿಶೀಲಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚಿಸಿದ್ದರು.

ಸಚಿವ ಖಂಡ್ರೆ ಅವರ ಸೂಚನೆಯಂತೆ ಸ್ಥಳ ಪರಿಶೀಲನೆ ನಡೆಸಿದ ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಬಿಂದು, ಸಚಿತ್ರ ಮಾಹಿತಿ ನೀಡಿದ ತರುವಾಯ ತಾಲೂಕು ವೈದ್ಯಾಧಿಕಾರಿ ಡಾ. ಪದ್ಮಿನಿ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಂಚಾಯ್ತಿ ಇಓ ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಬಳಸಿದ ಸಿರೆಂಜ್ ಗಳು ಹಾಗೂ ರಕ್ತಸಿಕ್ತವಾಗಿದ್ದ ಹತ್ತಿ, ಬ್ಯಾಂಡೇಜ್ ಗಳನ್ನು ಸಿಮೆಂಟ್ ಬ್ಯಾಗ್ ಗಳಲ್ಲಿ ತುಂಬಿ ಕೆರೆಗೆ ನೀರು ಹೋಗುವ ಕಾಲುವೆಯಲ್ಲಿ ಎಸೆದಿರುವುದು ಪತ್ತೆಯಾಗಿತ್ತು.

ಜನ, ಜಾನುವಾರು ಈ ಕೆರೆಯ ನೀರು ಬಳಸುವ ಕಾರಣ ರೋಗ ಹರಡುವ ಸಾಧ್ಯತೆಯ ಗಂಭೀರತೆಯನ್ನು ಅರಿತು ಖಾಸಗಿ ಕ್ಲಿನಿಕ್ ವೈದ್ಯ ಡಾ. ಅರುಣ್ ಗಿರೀಶ್ ಸಾಗರ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ವೈದ್ಯರು ಇದು ತಮ್ಮ ಆಸ್ಪತ್ರೆಯ ತ್ಯಾಜ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ಎಫ್.ಐ.ಆರ್.ನಲ್ಲಿ ಉಲ್ಲೇಖಿಸಲಾಗಿದೆ.

ಎಚ್ಚರಿಕೆ ಗಂಟೆ:

ಕುಡಿಯುವ ನೀರಿನ ಮೂಲಗಳಾದ ಕೆರೆ, ಕುಂಟೆ, ಬಾವಿ, ನದಿಗಳಿಗೆ ಅಪಾಯಕಾರಿ ತ್ಯಾಜ್ಯವನ್ನು ಎಸೆದು ಹೋಗುವವರಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

15 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

17 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

18 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

22 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

24 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago