ಬೆಂಗಳೂರು ಗ್ರಾಮಾಂತರ ಜಿಲ್ಲೆ ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಸೂಚನೆ ಮೇರೆಗೆ ಅಧಿಕಾರಿಗಳು ಕ್ರಮ ವಹಿಸಿದ್ದು, ಖಾಸಗಿ ಕ್ಲಿನಿಕ್ ವೈದ್ಯರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ.
ಯಂಟಗಾನಹಳ್ಳಿ ಗ್ರಾಮಪಂಚಾಯ್ತಿಗೆ ಸಚಿವರು ಹಠಾತ್ ಭೇಟಿ ನೀಡಿದ್ದ ವೇಳೆ ಸಾರ್ವಜನಿಕರು ವೈದ್ಯಕೀಯ ತ್ಯಾಜ್ಯವನ್ನು ಕೆರೆಗೆ ಸುರಿದಿರುವ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸ್ಥಳ ಪರಿಶೀಲಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚಿಸಿದ್ದರು.
ಸಚಿವ ಖಂಡ್ರೆ ಅವರ ಸೂಚನೆಯಂತೆ ಸ್ಥಳ ಪರಿಶೀಲನೆ ನಡೆಸಿದ ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಬಿಂದು, ಸಚಿತ್ರ ಮಾಹಿತಿ ನೀಡಿದ ತರುವಾಯ ತಾಲೂಕು ವೈದ್ಯಾಧಿಕಾರಿ ಡಾ. ಪದ್ಮಿನಿ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪಂಚಾಯ್ತಿ ಇಓ ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಬಳಸಿದ ಸಿರೆಂಜ್ ಗಳು ಹಾಗೂ ರಕ್ತಸಿಕ್ತವಾಗಿದ್ದ ಹತ್ತಿ, ಬ್ಯಾಂಡೇಜ್ ಗಳನ್ನು ಸಿಮೆಂಟ್ ಬ್ಯಾಗ್ ಗಳಲ್ಲಿ ತುಂಬಿ ಕೆರೆಗೆ ನೀರು ಹೋಗುವ ಕಾಲುವೆಯಲ್ಲಿ ಎಸೆದಿರುವುದು ಪತ್ತೆಯಾಗಿತ್ತು.
ಜನ, ಜಾನುವಾರು ಈ ಕೆರೆಯ ನೀರು ಬಳಸುವ ಕಾರಣ ರೋಗ ಹರಡುವ ಸಾಧ್ಯತೆಯ ಗಂಭೀರತೆಯನ್ನು ಅರಿತು ಖಾಸಗಿ ಕ್ಲಿನಿಕ್ ವೈದ್ಯ ಡಾ. ಅರುಣ್ ಗಿರೀಶ್ ಸಾಗರ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ವೈದ್ಯರು ಇದು ತಮ್ಮ ಆಸ್ಪತ್ರೆಯ ತ್ಯಾಜ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ಎಫ್.ಐ.ಆರ್.ನಲ್ಲಿ ಉಲ್ಲೇಖಿಸಲಾಗಿದೆ.
ಎಚ್ಚರಿಕೆ ಗಂಟೆ:
ಕುಡಿಯುವ ನೀರಿನ ಮೂಲಗಳಾದ ಕೆರೆ, ಕುಂಟೆ, ಬಾವಿ, ನದಿಗಳಿಗೆ ಅಪಾಯಕಾರಿ ತ್ಯಾಜ್ಯವನ್ನು ಎಸೆದು ಹೋಗುವವರಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…