ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ ನಡೆದಿದೆ.

ಬೆಂಗಳೂರು ಮೂಲದ ಕಿಶೋರ್ ಹಾಗೂ ಗಿರೀಶ್ ಮೃತ ದುರ್ದೈವಿಗಳು.

ಎರಡು ಕಾರುಗಳಲ್ಲಿ 8 ಜನ ಸ್ನೇಹಿತರೊಂದಿಗೆ ರಾಮಸಮುದ್ರ ಕೆರೆಗೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ.

ಜಾತ್ರೆ ಪ್ರಯುಕ್ತ ಗಡಮಿಂಚೇನಹಳ್ಳಿ ಗ್ರಾಮದ ಸ್ನೇಹಿತನ ಮನೆಗೆ 8 ಜನ ಆಗಮಿಸಿದ್ದರು.

ಬಿರು ಬೇಸಿಗೆ ತಾಳಲಾರದೆ ರಾಮಸಮುದ್ರ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಕಿಶೋರ್ ಹಾಗೂ ಗಿರೀಶ್ ಇಬ್ಬರು ಸ್ನೇಹಿತರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮೃತರಿಬ್ಬರೂ ಕ್ಯಾಬ್ ಚಾಲಕರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೆರೇಸಂದ್ರ ಹಾಗೂ ದಿಬ್ಬೂರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!