ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹಬ್ಬಕ್ಕೆ ಈಗಲೇ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿ ತಂದೆ- ಮಗ ಧಾರುಣ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿರುವ ಮುತ್ಯಾಲಮ್ಮ ದೇವಾಲಯ ಸಮೀಪ ವಾಸವಿದ್ದ ಪುಟ್ಟರಾಜು(45), ಕೇಶವ( 16) ಮೃತಪಟ್ಟ ದುರ್ದೈವಿಗಳು.
ನಗರದ ಜ್ಞಾನಗಂಗಾ ಶಾಲೆಯಲ್ಲಿ ಎಸ್ಎಸ್ಎಲ್ ಸಿ ಓದುತ್ತಿದ್ದ ಬಾಲಕ ಕೇಶವ ಬುಧವಾರ ತಂದೆಯೊಂದಿಗೆ ಹುಲುಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿದ್ದರು.
ಬಾಲಕ ಕೇಶವ ತಾವರೆ ಹೂವು ಕೀಳಲು ನೀರಿಗಿಳಿದಾಗ ಕಾಲು ಜಾರಿ ಹಾಳಕ್ಕೆ ಹೋಗಿ ಮುಳುಗುತ್ತಿದ್ದ. ಈ ವೇಳೆ ಮಗನ ರಕ್ಷಣೆಗೆ ಧಾವಿಸಿದ ತಂದೆ ಪುಟ್ಟರಾಜು ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ತಂದೆ-ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರ ಆಕ್ರಂಧನ ಮುಗಿಲುಮುಟ್ಟಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಇನ್ಸ್ ಪೆಕ್ಟರ್ ಹರೀಶ್ ದೌಡಾಯಿಸಿ ಪರಿಶೀಲನೆ ನಡೆಸಿದರು.
ಕತ್ತಲಾದ ಆದ ಕಾರಣ ಮೃತದೇಹಗಳನ್ನು ನಾಳೆ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಹೊರತೆಗೆಯಲಿದ್ದಾರೆ.
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…