ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ತಂದೆ-ಮಗ ಸಾವು: ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ಘಟನೆ

ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹಬ್ಬಕ್ಕೆ ಈಗಲೇ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿ ತಂದೆ- ಮಗ ಧಾರುಣ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿರುವ ಮುತ್ಯಾಲಮ್ಮ ದೇವಾಲಯ ಸಮೀಪ ವಾಸವಿದ್ದ ಪುಟ್ಟರಾಜು(45), ಕೇಶವ( 16) ಮೃತಪಟ್ಟ ದುರ್ದೈವಿಗಳು.

ನಗರದ ಜ್ಞಾನಗಂಗಾ ಶಾಲೆಯಲ್ಲಿ ಎಸ್ಎಸ್ಎಲ್ ಸಿ ಓದುತ್ತಿದ್ದ ಬಾಲಕ‌ ಕೇಶವ ಬುಧವಾರ ತಂದೆಯೊಂದಿಗೆ ಹುಲುಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿದ್ದರು.

ಬಾಲಕ ಕೇಶವ ತಾವರೆ ಹೂವು ಕೀಳಲು ನೀರಿಗಿಳಿದಾಗ ಕಾಲು ಜಾರಿ ಹಾಳಕ್ಕೆ ಹೋಗಿ ಮುಳುಗುತ್ತಿದ್ದ. ಈ ವೇಳೆ‌ ಮಗನ ರಕ್ಷಣೆಗೆ ಧಾವಿಸಿದ ತಂದೆ ಪುಟ್ಟರಾಜು ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತ ಪುಟ್ಟರಾಜು ಅವರು ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ‌ ಮಾಡುತ್ತಿದ್ದರು. ಮೂಲತಃ ಸಕ್ಕರೆ ಗೊಲ್ಲಹಳ್ಳಿ ಸಮೀಪ ತಂಬೇನಹಳ್ಳಿ ಗ್ರಾಮದ ನಿವಾಸಿಯಾದ ಪುಟ್ಟರಾಜು ಅವರು ದೊಡ್ಡಬಳ್ಳಾಪುರದಲ್ಲೇ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪುಟ್ಟರಾಜು ಅವರಿಗೆ ಇಬ್ಬರು ಮಕ್ಕಳಿದ್ದರು. ಪತ್ನಿ ಜಗದಾಂಬ ಅವರು ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದರು.

ತಂದೆ-ಮಗನ‌ ಸಾವಿನ‌ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರ ಆಕ್ರಂಧನ‌ ಮುಗಿಲು‌ಮುಟ್ಟಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಇನ್ಸ್ ಪೆಕ್ಟರ್ ಹರೀಶ್ ದೌಡಾಯಿಸಿ ಪರಿಶೀಲನೆ ನಡೆಸಿದರು.

ಕತ್ತಲಾದ ಆದ ಕಾರಣ ಮೃತದೇಹಗಳನ್ನು ನಾಳೆ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಹೊರತೆಗೆಯಲಿದ್ದಾರೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 hour ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

2 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

9 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

9 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

15 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago