ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹಬ್ಬಕ್ಕೆ ಈಗಲೇ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿ ತಂದೆ- ಮಗ ಧಾರುಣ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿರುವ ಮುತ್ಯಾಲಮ್ಮ ದೇವಾಲಯ ಸಮೀಪ ವಾಸವಿದ್ದ ಪುಟ್ಟರಾಜು(45), ಕೇಶವ( 16) ಮೃತಪಟ್ಟ ದುರ್ದೈವಿಗಳು.
ನಗರದ ಜ್ಞಾನಗಂಗಾ ಶಾಲೆಯಲ್ಲಿ ಎಸ್ಎಸ್ಎಲ್ ಸಿ ಓದುತ್ತಿದ್ದ ಬಾಲಕ ಕೇಶವ ಬುಧವಾರ ತಂದೆಯೊಂದಿಗೆ ಹುಲುಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿದ್ದರು.
ಬಾಲಕ ಕೇಶವ ತಾವರೆ ಹೂವು ಕೀಳಲು ನೀರಿಗಿಳಿದಾಗ ಕಾಲು ಜಾರಿ ಹಾಳಕ್ಕೆ ಹೋಗಿ ಮುಳುಗುತ್ತಿದ್ದ. ಈ ವೇಳೆ ಮಗನ ರಕ್ಷಣೆಗೆ ಧಾವಿಸಿದ ತಂದೆ ಪುಟ್ಟರಾಜು ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ತಂದೆ-ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರ ಆಕ್ರಂಧನ ಮುಗಿಲುಮುಟ್ಟಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಇನ್ಸ್ ಪೆಕ್ಟರ್ ಹರೀಶ್ ದೌಡಾಯಿಸಿ ಪರಿಶೀಲನೆ ನಡೆಸಿದರು.
ಕತ್ತಲಾದ ಆದ ಕಾರಣ ಮೃತದೇಹಗಳನ್ನು ನಾಳೆ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಹೊರತೆಗೆಯಲಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…