ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹಬ್ಬಕ್ಕೆ ಈಗಲೇ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿ ತಂದೆ- ಮಗ ಧಾರುಣ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿರುವ ಮುತ್ಯಾಲಮ್ಮ ದೇವಾಲಯ ಸಮೀಪ ವಾಸವಿದ್ದ ಪುಟ್ಟರಾಜು(45), ಕೇಶವ( 16) ಮೃತಪಟ್ಟ ದುರ್ದೈವಿಗಳು.
ನಗರದ ಜ್ಞಾನಗಂಗಾ ಶಾಲೆಯಲ್ಲಿ ಎಸ್ಎಸ್ಎಲ್ ಸಿ ಓದುತ್ತಿದ್ದ ಬಾಲಕ ಕೇಶವ ಬುಧವಾರ ತಂದೆಯೊಂದಿಗೆ ಹುಲುಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿದ್ದರು.
ಬಾಲಕ ಕೇಶವ ತಾವರೆ ಹೂವು ಕೀಳಲು ನೀರಿಗಿಳಿದಾಗ ಕಾಲು ಜಾರಿ ಹಾಳಕ್ಕೆ ಹೋಗಿ ಮುಳುಗುತ್ತಿದ್ದ. ಈ ವೇಳೆ ಮಗನ ರಕ್ಷಣೆಗೆ ಧಾವಿಸಿದ ತಂದೆ ಪುಟ್ಟರಾಜು ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ತಂದೆ-ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರ ಆಕ್ರಂಧನ ಮುಗಿಲುಮುಟ್ಟಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಇನ್ಸ್ ಪೆಕ್ಟರ್ ಹರೀಶ್ ದೌಡಾಯಿಸಿ ಪರಿಶೀಲನೆ ನಡೆಸಿದರು.
ಕತ್ತಲಾದ ಆದ ಕಾರಣ ಮೃತದೇಹಗಳನ್ನು ನಾಳೆ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಹೊರತೆಗೆಯಲಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…