ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹಬ್ಬಕ್ಕೆ ಈಗಲೇ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿ ತಂದೆ- ಮಗ ಧಾರುಣ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿರುವ ಮುತ್ಯಾಲಮ್ಮ ದೇವಾಲಯ ಸಮೀಪ ವಾಸವಿದ್ದ ಪುಟ್ಟರಾಜು(45), ಕೇಶವ( 16) ಮೃತಪಟ್ಟ ದುರ್ದೈವಿಗಳು.
ನಗರದ ಜ್ಞಾನಗಂಗಾ ಶಾಲೆಯಲ್ಲಿ ಎಸ್ಎಸ್ಎಲ್ ಸಿ ಓದುತ್ತಿದ್ದ ಬಾಲಕ ಕೇಶವ ಬುಧವಾರ ತಂದೆಯೊಂದಿಗೆ ಹುಲುಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿದ್ದರು.
ಬಾಲಕ ಕೇಶವ ತಾವರೆ ಹೂವು ಕೀಳಲು ನೀರಿಗಿಳಿದಾಗ ಕಾಲು ಜಾರಿ ಹಾಳಕ್ಕೆ ಹೋಗಿ ಮುಳುಗುತ್ತಿದ್ದ. ಈ ವೇಳೆ ಮಗನ ರಕ್ಷಣೆಗೆ ಧಾವಿಸಿದ ತಂದೆ ಪುಟ್ಟರಾಜು ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ತಂದೆ-ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರ ಆಕ್ರಂಧನ ಮುಗಿಲುಮುಟ್ಟಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಇನ್ಸ್ ಪೆಕ್ಟರ್ ಹರೀಶ್ ದೌಡಾಯಿಸಿ ಪರಿಶೀಲನೆ ನಡೆಸಿದರು.
ಕತ್ತಲಾದ ಆದ ಕಾರಣ ಮೃತದೇಹಗಳನ್ನು ನಾಳೆ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಹೊರತೆಗೆಯಲಿದ್ದಾರೆ.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…