ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ತಂದೆ-ಮಗ ಸಾವು: ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ಘಟನೆ

ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹಬ್ಬಕ್ಕೆ ಈಗಲೇ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿ ತಂದೆ- ಮಗ ಧಾರುಣ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿರುವ ಮುತ್ಯಾಲಮ್ಮ ದೇವಾಲಯ ಸಮೀಪ ವಾಸವಿದ್ದ ಪುಟ್ಟರಾಜು(45), ಕೇಶವ( 16) ಮೃತಪಟ್ಟ ದುರ್ದೈವಿಗಳು.

ನಗರದ ಜ್ಞಾನಗಂಗಾ ಶಾಲೆಯಲ್ಲಿ ಎಸ್ಎಸ್ಎಲ್ ಸಿ ಓದುತ್ತಿದ್ದ ಬಾಲಕ‌ ಕೇಶವ ಬುಧವಾರ ತಂದೆಯೊಂದಿಗೆ ಹುಲುಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿದ್ದರು.

ಬಾಲಕ ಕೇಶವ ತಾವರೆ ಹೂವು ಕೀಳಲು ನೀರಿಗಿಳಿದಾಗ ಕಾಲು ಜಾರಿ ಹಾಳಕ್ಕೆ ಹೋಗಿ ಮುಳುಗುತ್ತಿದ್ದ. ಈ ವೇಳೆ‌ ಮಗನ ರಕ್ಷಣೆಗೆ ಧಾವಿಸಿದ ತಂದೆ ಪುಟ್ಟರಾಜು ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತ ಪುಟ್ಟರಾಜು ಅವರು ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ‌ ಮಾಡುತ್ತಿದ್ದರು. ಮೂಲತಃ ಸಕ್ಕರೆ ಗೊಲ್ಲಹಳ್ಳಿ ಸಮೀಪ ತಂಬೇನಹಳ್ಳಿ ಗ್ರಾಮದ ನಿವಾಸಿಯಾದ ಪುಟ್ಟರಾಜು ಅವರು ದೊಡ್ಡಬಳ್ಳಾಪುರದಲ್ಲೇ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪುಟ್ಟರಾಜು ಅವರಿಗೆ ಇಬ್ಬರು ಮಕ್ಕಳಿದ್ದರು. ಪತ್ನಿ ಜಗದಾಂಬ ಅವರು ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದರು.

ತಂದೆ-ಮಗನ‌ ಸಾವಿನ‌ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರ ಆಕ್ರಂಧನ‌ ಮುಗಿಲು‌ಮುಟ್ಟಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಇನ್ಸ್ ಪೆಕ್ಟರ್ ಹರೀಶ್ ದೌಡಾಯಿಸಿ ಪರಿಶೀಲನೆ ನಡೆಸಿದರು.

ಕತ್ತಲಾದ ಆದ ಕಾರಣ ಮೃತದೇಹಗಳನ್ನು ನಾಳೆ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಹೊರತೆಗೆಯಲಿದ್ದಾರೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago