ಕೆರೆಯಲ್ಲಿ ಮಣ್ಣು ತೆಗೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಪತಿ ವೈಯಕ್ತಿಕ ಕಿರುಕುಳ ಕೊಡುತ್ತಿದ್ದಾರೆ, ಬಲಾಢ್ಯರು ಕೆರೆಯ ಮಣ್ಣು ತೆಗೆಯುವಾಗ ಯಾವುದೇ ಕ್ರಮ ತೆಗೆದುಕೊಳ್ಳದ ಅವರು ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿಯನ್ನ ಟಾರ್ಗೆಟ್ ಮಾಡುತ್ತಿದ್ದಾರೆಂದು ಭಾರ್ಗವ್ ರವರು ಅಧ್ಯಕ್ಷರ ವಿರುದ್ಧ ಆರೋಪವನ್ನ ಮಾಡಿದ್ದಾರೆ.
ದೊಡ್ಡತುಮಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಸಂದ್ರಪಾಳ್ಯ ಗ್ರಾಮದ ಸರ್ವೆ ನಂಬರ್ 106ರಲ್ಲಿರುವ ಸರ್ಕಾರಿ ಕೆರೆಯಲ್ಲಿ ಹೂಳು ತುಂಬಿದೆ, ಅಂತರ್ಜಲ ವೃದ್ಧಿಗಾಗಿ ಗ್ರಾಮಸ್ಥರು ಕೆರೆಯಲ್ಲಿನ ಹೂಳು ತೆಗೆದು ತಮ್ಮ ತೋಟ ಮತ್ತು ಹೊಲಗಳಿಗೆ ಹಾಕುತ್ತಿದ್ದಾರೆ, ಬೈರಸಂದ್ರಪಾಳ್ಯದ ಗ್ರಾಮಸ್ಥರು ಗೌಡಹಳ್ಳಿಯ ಗ್ರಾಮದ ಭಾರ್ಗವ್ ಎಂಬುವರ ಜೆಸಿಬಿ ಮತ್ತು ಟ್ರಾಕ್ಟರ್ ಬಾಡಿಗೆ ಪಡೆದುಕೊಂಡು ಹೊಳು ತೆಗೆಯುತ್ತಿದ್ದಾರೆ. ಕೆರೆಯಲ್ಲಿನ ಹೂಳು ತೆಗೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡತುಮಕೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ, ಈ ಕಾರಣಕ್ಕಾಗಿಯೇ ಪಂಚಾಯಿತಿ ಕಾರ್ಯಾಲಯದ ಮುಂದೆ ಜಮಾಯಿಸಿದ ಗ್ರಾಮಸ್ಥರು ಪಂಚಾಯಿತಿ ಅಧ್ಯಕ್ಷರ ಪತಿ ಮತ್ತು ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ
ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಜೆಸಿಬಿ ಮಾಲೀಕರಾದ ಭಾರ್ಗವ್, ಜೀವನೋಪಯಕ್ಕಾಗಿ ನಾನು ಜೆಸಿಬಿ ಮತ್ತು ಟ್ರ್ಯಾಕ್ಟರ್ ಗಳನ್ನು ಬಾಡಿಗೆ ನೀಡುವೆ, ಕೆರೆಯಲ್ಲಿನ ಹೂಳು ತೆಗೆಯುವ ಕಾರಣಕ್ಕಾಗಿ ಬೈರಸಂದ್ರಪಾಳ್ಯದ ಗ್ರಾಮಸ್ಥರು ಜೆಸಿಬಿ ಮತ್ತು ಟ್ರ್ಯಾಕ್ಟರ್ ಬಾಡಿಗೆ ತೆಗೆದುಕೊಂಡು ಹೋಗಿದ್ದಾರೆ, ಗ್ರಾಮದ ಅಭಿವೃದ್ಧಿಗಾಗಿ ಕೆರೆಯಲ್ಲಿನ ಹೂಳು ತೆಗೆಯುತ್ತಿದ್ದಾರೆ ಎಂದರು.
ಪಂಚಾಯಿತಿ ಅಧ್ಯಕ್ಷರಾದ ಸರೋಜ,ವಿ ಯವರ ಪತಿ ಮಂಜುನಾಥ್ ವೈಯಕ್ತಿಕವಾಗಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ, ಫೆಬ್ರವರಿ 6 ರಂದು ತೋಟಕ್ಕೆ ಮಣ್ಣು ಹೊಡೆಯಲು ಕೆರೆಯಲ್ಲಿ ಹೂಳು ತೆಗೆಯಲು ಅನುಮತಿಗಾಗಿ ಪಂಚಾಯಿತಿ ಮನವಿ ಸಲ್ಲಿಸಿದೆ, ಪಂಚಾಯಿತಿ ಅಧಿಕಾರಿಗಳು ಕೆರೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆಯುವಂತೆ ಹಿಂಬರಹ ಕೊಟ್ಟಿದ್ದರು, ಅದೇ ದಿನ ಕೆರೆಯಲ್ಲಿ ಹೂಳು ತೆಗೆಯುತ್ತಿರುವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದ್ದಾರೆ, 10-09-2024ರಂದು ಕೆರೆಯಲ್ಲಿ ಮಣ್ಣು ತೆಗೆಯುತ್ತಿರುವುದರ ವಿರುದ್ಧ ದೂರು ನೀಡಿದರು, ಬಲಾಢ್ಯರೆಂಬ ಕಾರಣಕ್ಕೆ ಸುಮ್ಮನಿದ್ದ ಅಧ್ಯಕ್ಷರು ಇವತ್ತು ಹಿಂದುಳಿದ ವರ್ಗಕ್ಕೆ ಸೇರಿದವನೆಂಬ ಕಾರಣಕ್ಕೆ ಕಿರುಕುಳ ಕೊಡುತ್ತಿದ್ದಾರೆಂದು ಆರೋಪ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…