ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಕೊಡಗಿನ ಗೋಣಿಕೊಪ್ಪಲು ಸಮೀಪದ ಅತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗೊಲ್ಲಿಯಲ್ಲಿ ನಡೆದಿದೆ.
ಅಲ್ಲಿನ ಕಾಫಿ ಬೆಳೆಗಾರ ಕೆ.ಕೆ. ತಿಮ್ಮಯ್ಯ ಎಂಬುವವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ ಒಂಬತ್ತು ವರ್ಷ ಪ್ರಾಯದ ಪುತ್ರಿಯೇ ಕ್ರೂರ ವಿಧಿಯ ಅಟ್ಟಹಾಸಕ್ಕೆ ಸಿಲುಕಿ ಕೆರೆಗೆ ಹಾರವಾದ ನತದೃಷ್ಟಳಾಗಿದ್ದಾಳೆ.
ತನ್ನ ಸಹಪಾಠಿಗಳೊಂದಿಗೆ ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಈಕೆ ಹಾಗೂ ಇನ್ನಿಬ್ಬರು ಮಕ್ಕಳು ಕೆರೆಗೆ ಹಾರಿದ್ದಾರೆ ಎಂದು ಹೇಳಲಾಗಿದೆ. ಆದರೆ, ಕೆರೆಯಲ್ಲಿ ನೀರು ಬತ್ತಿ ಕೆಸರು ತುಂಬಿದ್ದರಿಂದ ಮೂವರು ಅದರೊಳಗೆ ಸಿಲುಕಿ ಬೊಬ್ಬಿಟ್ಟಿದ್ದಾರೆ. ವಿಷಯ ಅರಿತು ಸ್ಥಳಕ್ಕೆ ಧಾವಿಸಿ ಬಂದ ಕಾರ್ಮಿಕರು ಇಬ್ಬರನ್ನು ರಕ್ಷಿಸಿದ್ದಾರೆ. ಈ ಬಾಲಕಿಯನ್ನು ಕೆಸರಿಂದ ಹೊರಕ್ಕೆ ತರುವ ಪ್ರಯತ್ನ ವಿಫಲವಾದ್ದರಿಂದ ಈಕೆ ಅಸು ನೀಗಿದ್ದಾಳೆ.
ಚೆನ್ನಂಗೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಗಿರುವ ಈಕೆ, ನಾಳೆ ವಾರ್ಷಿಕ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ವಿಧಿಯೊಡ್ಡಿದ ಪರೀಕ್ಷೆಗೆ ಬಲಿಯಾಗಿರುವುದು ಶೋಚನೀಯವಾಗಿದೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…