Categories: ಕೊಡಗು

ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿ ದುರ್ಮರಣ

ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಕೊಡಗಿನ ಗೋಣಿಕೊಪ್ಪಲು ಸಮೀಪದ ಅತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗೊಲ್ಲಿಯಲ್ಲಿ ನಡೆದಿದೆ.

ಅಲ್ಲಿನ ಕಾಫಿ ಬೆಳೆಗಾರ ಕೆ.ಕೆ. ತಿಮ್ಮಯ್ಯ ಎಂಬುವವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ ಒಂಬತ್ತು ವರ್ಷ ಪ್ರಾಯದ ಪುತ್ರಿಯೇ ಕ್ರೂರ ವಿಧಿಯ ಅಟ್ಟಹಾಸಕ್ಕೆ ಸಿಲುಕಿ ಕೆರೆಗೆ ಹಾರವಾದ ನತದೃಷ್ಟಳಾಗಿದ್ದಾಳೆ.

ತನ್ನ ಸಹಪಾಠಿಗಳೊಂದಿಗೆ ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಈಕೆ ಹಾಗೂ ಇನ್ನಿಬ್ಬರು ಮಕ್ಕಳು ಕೆರೆಗೆ ಹಾರಿದ್ದಾರೆ ಎಂದು ಹೇಳಲಾಗಿದೆ. ಆದರೆ, ಕೆರೆಯಲ್ಲಿ ನೀರು ಬತ್ತಿ ಕೆಸರು ತುಂಬಿದ್ದರಿಂದ ಮೂವರು ಅದರೊಳಗೆ ಸಿಲುಕಿ ಬೊಬ್ಬಿಟ್ಟಿದ್ದಾರೆ. ವಿಷಯ ಅರಿತು ಸ್ಥಳಕ್ಕೆ ಧಾವಿಸಿ ಬಂದ ಕಾರ್ಮಿಕರು ಇಬ್ಬರನ್ನು ರಕ್ಷಿಸಿದ್ದಾರೆ. ಈ ಬಾಲಕಿಯನ್ನು ಕೆಸರಿಂದ ಹೊರಕ್ಕೆ ತರುವ ಪ್ರಯತ್ನ ವಿಫಲವಾದ್ದರಿಂದ ಈಕೆ ಅಸು ನೀಗಿದ್ದಾಳೆ.

ಚೆನ್ನಂಗೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಗಿರುವ ಈಕೆ, ನಾಳೆ ವಾರ್ಷಿಕ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ವಿಧಿಯೊಡ್ಡಿದ ಪರೀಕ್ಷೆಗೆ ಬಲಿಯಾಗಿರುವುದು ಶೋಚನೀಯವಾಗಿದೆ.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

5 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

16 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

17 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago