ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಕೊಡಗಿನ ಗೋಣಿಕೊಪ್ಪಲು ಸಮೀಪದ ಅತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗೊಲ್ಲಿಯಲ್ಲಿ ನಡೆದಿದೆ.
ಅಲ್ಲಿನ ಕಾಫಿ ಬೆಳೆಗಾರ ಕೆ.ಕೆ. ತಿಮ್ಮಯ್ಯ ಎಂಬುವವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ ಒಂಬತ್ತು ವರ್ಷ ಪ್ರಾಯದ ಪುತ್ರಿಯೇ ಕ್ರೂರ ವಿಧಿಯ ಅಟ್ಟಹಾಸಕ್ಕೆ ಸಿಲುಕಿ ಕೆರೆಗೆ ಹಾರವಾದ ನತದೃಷ್ಟಳಾಗಿದ್ದಾಳೆ.
ತನ್ನ ಸಹಪಾಠಿಗಳೊಂದಿಗೆ ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಈಕೆ ಹಾಗೂ ಇನ್ನಿಬ್ಬರು ಮಕ್ಕಳು ಕೆರೆಗೆ ಹಾರಿದ್ದಾರೆ ಎಂದು ಹೇಳಲಾಗಿದೆ. ಆದರೆ, ಕೆರೆಯಲ್ಲಿ ನೀರು ಬತ್ತಿ ಕೆಸರು ತುಂಬಿದ್ದರಿಂದ ಮೂವರು ಅದರೊಳಗೆ ಸಿಲುಕಿ ಬೊಬ್ಬಿಟ್ಟಿದ್ದಾರೆ. ವಿಷಯ ಅರಿತು ಸ್ಥಳಕ್ಕೆ ಧಾವಿಸಿ ಬಂದ ಕಾರ್ಮಿಕರು ಇಬ್ಬರನ್ನು ರಕ್ಷಿಸಿದ್ದಾರೆ. ಈ ಬಾಲಕಿಯನ್ನು ಕೆಸರಿಂದ ಹೊರಕ್ಕೆ ತರುವ ಪ್ರಯತ್ನ ವಿಫಲವಾದ್ದರಿಂದ ಈಕೆ ಅಸು ನೀಗಿದ್ದಾಳೆ.
ಚೆನ್ನಂಗೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಗಿರುವ ಈಕೆ, ನಾಳೆ ವಾರ್ಷಿಕ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ವಿಧಿಯೊಡ್ಡಿದ ಪರೀಕ್ಷೆಗೆ ಬಲಿಯಾಗಿರುವುದು ಶೋಚನೀಯವಾಗಿದೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…