ಕೆರೆಯ ಸಂರಕ್ಷಣಾ ಮಹತ್ವ ತಿಳಿಸಲು ಕೆರೆ ಬಳಿಯ ಗೋಡೆ ಮೇಲೆ ಪ್ರಾಣಿ, ಪಕ್ಷಿ, ಚಿಟ್ಟೆ ಚಿತ್ತಾರ

ತಾಲ್ಲೂಕಿನ ಕೈಗಾರಿಕಾ ಪ್ರದೇಶದಲ್ಲಿನ ಬಾಶೆಟ್ಟಿಹಳ್ಳಿ ಕೆರೆ ಅಂಚಿನ ಒಂದು ಬದಿಗೆ ಇರುವ ಜವಾಹಾರ್ ನವೋದಯ ವಿದ್ಯಾಲಯದ ಎತ್ತರದ ಗೋಡೆ ಈಗ ಬಣ್ಣದ ಬಣ್ಣದ ಪ್ರಾಣಿ, ಪಕ್ಷಿ, ಚಿಟ್ಟೆ, ಬಗೆಬಗೆ ಹೂವಿನ ಸಸಿಗಳ ಚಿತ್ರಗಳಿಂದ ಅಲಂಕೃತಗೊಂಡು ಎಲ್ಲರನ್ನು ಆಕರ್ಷಿಸುವ ತಾಣವಾಗಿ ರೂಪುಗೊಂಡಿದೆ.

ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ವತಿಯಿಂದ ಬಾಶೆಟ್ಟಿಹಳ್ಳಿ ಕೆರೆಗೆ ಹೊಂದಿಕೊಂಡಿರುವ ಗೋಡೆಯ ಮೇಲೆ ಪರಿಸರ ಮಾಹಿತಿಯ ಚಿತ್ರಗಳನ್ನು ಬಿಡಿಸಲಾಯಿತು.

ಕೆರೆಗೆ ಬರುವವರಿಗೆ ಮತ್ತು ಹಾದು ಹೋಗುವವರಿಗೆ ಕೆರೆಯ ಸಂರಕ್ಷಣಾ ಮಹತ್ವ ತಿಳಿಸುವ ಉದ್ದೇಶದಿಂದ, ಕೆರೆಯ ಜೀವವೈವಿದ್ಯತೆ, ಕೆರೆಗಳ ಮಹತ್ವ, ಕೆರೆಗಳಿಗೆ ಇರುವ ತೊಂದರೆಗಳು ಮತ್ತು ಚಿಟ್ಟೆಗಳ ಬಗ್ಗೆ ಚಿತ್ರಗಳನ್ನು ಬಿಡಿಸಲಾಯಿತು.

ಅದೇ ಆವರಣದಲ್ಲಿ ಚಿಟ್ಟೆ ಉದ್ಯಾನವನ್ನು ಸಹ ಮಾಡಲಾಗುತ್ತಿದೆ.

ಅರ್ಥ್ ಸ್ಟುಡಿಯೋಸ್ನ (eARTh Studios) ಕಲಾವಿದರಾದ ಕೌಶಿಕ್ ಕೆ ಎಸ್, ಸಾಕ್ಷಿ ಕೆ, ಆಶಾ ಎಸ್ ಮಾರ್ಗದರ್ಶನದಲ್ಲಿ ಹೆಚ್ ಎಸ್ ಬಿ ಸಿ ಯ 50 ಉದ್ಯೋಗಿಗಳು ಚಿತ್ರಗಳನ್ನು ಬಿಡಿಸಿದರು.

ಈ ಸಂದರ್ಭದಲ್ಲಿ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ, ಶಶಿಕಲಾ ಐಯ್ಯೇರ್, ಡಾ. ಶಾಂತನು ಗುಪ್ತ, ಕಾರ್ತಿಕ್ ಗೌಡ ನವೋದಯ ಚಾರಿಟೆಬಲ್ ಟ್ರಸ್ಟಿನ ಜನಾರ್ಧನ ಆರ್ ಇದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

9 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

14 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago