ಕೆರೆ ಬಳಕೆದಾರರ ಸಂಘಗಳನ್ನು ಬಲಿಷ್ಠಗೊಳಿಸಿ- ಸಿಎಂ ಸಿದ್ದರಾಮಯ್ಯ

ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಡಿ, 2018ರಲ್ಲಿ ಬಾಕಿ ಬಿಲ್‌ 440 ಕೋಟಿ ರೂ.ನಷ್ಟಿತ್ತು. ಸೆಪ್ಟೆಂಬರ್‌ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಗಳಷ್ಟಾಗಿದೆ. ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಬಿಲ್‌ ಮೊತ್ತ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿ‌ ಮಾತನಾಡಿದ ಅವರು, 2023ರ ಏಪ್ರಿಲ್‌ 1ರ ವೇಳೆಗೆ ಇಲಾಖೆಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕೈಗೊಳ್ಳಬೇಕಾದ ಮೊತ್ತ- 22,304 ಕೋಟಿ ರೂ. ಇದ್ದು, ಅದರಲ್ಲಿ 31-3-2023ರ ವರೆಗೆ 9602 ಕೋಟಿ ರೂ. ವೆಚ್ಚವಾಗಿದೆ. 2023-24ನೇ ಸಾಲಿಗೆ ಬಾಕಿ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ 12,696 ಕೋಟಿ ರೂ. ಆಗಿದೆ. ಇಲಾಖೆಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ನಿರ್ವಹಿಸಲು ಬೇಕಾಗುವ ಬಾಕಿ ಮೊತ್ತ 11,904 ಕೋಟಿ ರೂ. ನಷ್ಟಿದೆ. ಕಾಮಗಾರಿ ಪ್ರಾರಂಭವಾಗಿದ್ದರೆ ಅಂತಹ ಯೋಜನೆಗಳನ್ನು ಮುಂದುವರೆಸಿ, ಪ್ರಾರಂಭವಾಗದ ಕಾಮಗಾರಿಗಳನ್ನು ಕೈಬಿಡಿ ಎಂದು ಸೂಚಿಸಿದರು.

ರಾಜ್ಯದಲ್ಲಿ ವಿವಿಧ ಇಲಾಖೆಗಳಡಿ ಇರುವ 34 ಸಾವಿರಕ್ಕೂ ಹೆಚ್ಚು ಕೆರೆಗಳ ಸಮಗ್ರ ನಿರ್ವಹಣೆಗೆ ಕೆರೆ ಅಭಿವೃದ್ಧಿ ಪ್ರಾಧಿಕಾರದಡಿ ಕೆರೆ ಬಳಕೆದಾರರ ಸಂಘಗಳನ್ನು ಬಲಿಷ್ಠಗೊಳಿಸಬೇಕು. ಅಧಿಕಾರೇತರ ಸದಸ್ಯರ ನೇಮಕ ಮಾಡುವ ಸಂದರ್ಭದಲ್ಲಿ ಕೆರೆಗಳ ಸಂರಕ್ಷಣೆಯ ಪರಿಣತರು ಹಾಗೂ ಕಾಳಜಿ ಉಳ್ಳವರನ್ನು ಆಯ್ಕೆ ಮಾಡಬೇಕು. ಸಣ್ಣ ನೀರಾವರಿ ಇಲಾಖೆ ಹಾಗೂ ಭಾರಿ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕೆರೆಗಳಲ್ಲಿ ಮೀನುಗಾರಿಕೆ ಗುತ್ತಿಗೆ ನೀಡುವ ಮೂಲಕ ಸಂಪನ್ಮೂಲ ಕ್ರೋಢೀಕರಿಸುವ ಬಗ್ಗೆ ಪರಿಶೀಲಿಸಬೇಕು ಎಂದರು.

ಶಿರಸಿ, ಬೆಳಗಾವಿ, ಹಾಸನ, ಚಾಮರಾಜನಗರ, ಮಡಿಕೇರಿ ಮತ್ತು ಗದಗ ನಗರಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾಮಗಾರಿ ಭೂಮಿಯ ಲಭ್ಯತೆಯ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಭೂಮಿ ಲಭ್ಯವಾಗಿರುವುದರಿಂದ ಕಾಮಗಾರಿ ಶೀಘ್ರವೇ ಪ್ರಾರಂಭಿಸಬೇಕು. ಮೈಸೂರು ನಗರದಲ್ಲಿ ಸ್ಥಳ ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳಿಗೆ ದೂರವಾಣಿ ಸೂಚನೆ ನೀಡಿದ್ದೇನೆ. ವಿಜ್ಞಾನ ನಗರಿ ನಿರ್ಮಿಸಲು ಭಾರತ ಸರ್ಕಾರ ಅನುಮೋದನೆ ನೀಡಿದ್ದು, 100 ಕೋಟಿಯ ಈ ಯೋಜನೆಗೆ ಬೆಂಗಳೂರು ನಗರದ ಹೊರ ವಲಯದಲ್ಲಿ 25 ಎಕರೆ ಜಾಗ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

Ramesh Babu

Journalist

Recent Posts

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

22 minutes ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

10 hours ago

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

14 hours ago

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

22 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

1 day ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

1 day ago