ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಡಿ, 2018ರಲ್ಲಿ ಬಾಕಿ ಬಿಲ್ 440 ಕೋಟಿ ರೂ.ನಷ್ಟಿತ್ತು. ಸೆಪ್ಟೆಂಬರ್ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಗಳಷ್ಟಾಗಿದೆ. ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಬಿಲ್ ಮೊತ್ತ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿ ಮಾತನಾಡಿದ ಅವರು, 2023ರ ಏಪ್ರಿಲ್ 1ರ ವೇಳೆಗೆ ಇಲಾಖೆಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕೈಗೊಳ್ಳಬೇಕಾದ ಮೊತ್ತ- 22,304 ಕೋಟಿ ರೂ. ಇದ್ದು, ಅದರಲ್ಲಿ 31-3-2023ರ ವರೆಗೆ 9602 ಕೋಟಿ ರೂ. ವೆಚ್ಚವಾಗಿದೆ. 2023-24ನೇ ಸಾಲಿಗೆ ಬಾಕಿ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ 12,696 ಕೋಟಿ ರೂ. ಆಗಿದೆ. ಇಲಾಖೆಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ನಿರ್ವಹಿಸಲು ಬೇಕಾಗುವ ಬಾಕಿ ಮೊತ್ತ 11,904 ಕೋಟಿ ರೂ. ನಷ್ಟಿದೆ. ಕಾಮಗಾರಿ ಪ್ರಾರಂಭವಾಗಿದ್ದರೆ ಅಂತಹ ಯೋಜನೆಗಳನ್ನು ಮುಂದುವರೆಸಿ, ಪ್ರಾರಂಭವಾಗದ ಕಾಮಗಾರಿಗಳನ್ನು ಕೈಬಿಡಿ ಎಂದು ಸೂಚಿಸಿದರು.
ಶಿರಸಿ, ಬೆಳಗಾವಿ, ಹಾಸನ, ಚಾಮರಾಜನಗರ, ಮಡಿಕೇರಿ ಮತ್ತು ಗದಗ ನಗರಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾಮಗಾರಿ ಭೂಮಿಯ ಲಭ್ಯತೆಯ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಭೂಮಿ ಲಭ್ಯವಾಗಿರುವುದರಿಂದ ಕಾಮಗಾರಿ ಶೀಘ್ರವೇ ಪ್ರಾರಂಭಿಸಬೇಕು. ಮೈಸೂರು ನಗರದಲ್ಲಿ ಸ್ಥಳ ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳಿಗೆ ದೂರವಾಣಿ ಸೂಚನೆ ನೀಡಿದ್ದೇನೆ. ವಿಜ್ಞಾನ ನಗರಿ ನಿರ್ಮಿಸಲು ಭಾರತ ಸರ್ಕಾರ ಅನುಮೋದನೆ ನೀಡಿದ್ದು, 100 ಕೋಟಿಯ ಈ ಯೋಜನೆಗೆ ಬೆಂಗಳೂರು ನಗರದ ಹೊರ ವಲಯದಲ್ಲಿ 25 ಎಕರೆ ಜಾಗ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…