ಕೆರೆ ಬಳಕೆದಾರರ ಸಂಘಗಳನ್ನು ಬಲಿಷ್ಠಗೊಳಿಸಿ- ಸಿಎಂ ಸಿದ್ದರಾಮಯ್ಯ

ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಡಿ, 2018ರಲ್ಲಿ ಬಾಕಿ ಬಿಲ್‌ 440 ಕೋಟಿ ರೂ.ನಷ್ಟಿತ್ತು. ಸೆಪ್ಟೆಂಬರ್‌ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಗಳಷ್ಟಾಗಿದೆ. ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಬಿಲ್‌ ಮೊತ್ತ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿ‌ ಮಾತನಾಡಿದ ಅವರು, 2023ರ ಏಪ್ರಿಲ್‌ 1ರ ವೇಳೆಗೆ ಇಲಾಖೆಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕೈಗೊಳ್ಳಬೇಕಾದ ಮೊತ್ತ- 22,304 ಕೋಟಿ ರೂ. ಇದ್ದು, ಅದರಲ್ಲಿ 31-3-2023ರ ವರೆಗೆ 9602 ಕೋಟಿ ರೂ. ವೆಚ್ಚವಾಗಿದೆ. 2023-24ನೇ ಸಾಲಿಗೆ ಬಾಕಿ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ 12,696 ಕೋಟಿ ರೂ. ಆಗಿದೆ. ಇಲಾಖೆಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ನಿರ್ವಹಿಸಲು ಬೇಕಾಗುವ ಬಾಕಿ ಮೊತ್ತ 11,904 ಕೋಟಿ ರೂ. ನಷ್ಟಿದೆ. ಕಾಮಗಾರಿ ಪ್ರಾರಂಭವಾಗಿದ್ದರೆ ಅಂತಹ ಯೋಜನೆಗಳನ್ನು ಮುಂದುವರೆಸಿ, ಪ್ರಾರಂಭವಾಗದ ಕಾಮಗಾರಿಗಳನ್ನು ಕೈಬಿಡಿ ಎಂದು ಸೂಚಿಸಿದರು.

ರಾಜ್ಯದಲ್ಲಿ ವಿವಿಧ ಇಲಾಖೆಗಳಡಿ ಇರುವ 34 ಸಾವಿರಕ್ಕೂ ಹೆಚ್ಚು ಕೆರೆಗಳ ಸಮಗ್ರ ನಿರ್ವಹಣೆಗೆ ಕೆರೆ ಅಭಿವೃದ್ಧಿ ಪ್ರಾಧಿಕಾರದಡಿ ಕೆರೆ ಬಳಕೆದಾರರ ಸಂಘಗಳನ್ನು ಬಲಿಷ್ಠಗೊಳಿಸಬೇಕು. ಅಧಿಕಾರೇತರ ಸದಸ್ಯರ ನೇಮಕ ಮಾಡುವ ಸಂದರ್ಭದಲ್ಲಿ ಕೆರೆಗಳ ಸಂರಕ್ಷಣೆಯ ಪರಿಣತರು ಹಾಗೂ ಕಾಳಜಿ ಉಳ್ಳವರನ್ನು ಆಯ್ಕೆ ಮಾಡಬೇಕು. ಸಣ್ಣ ನೀರಾವರಿ ಇಲಾಖೆ ಹಾಗೂ ಭಾರಿ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕೆರೆಗಳಲ್ಲಿ ಮೀನುಗಾರಿಕೆ ಗುತ್ತಿಗೆ ನೀಡುವ ಮೂಲಕ ಸಂಪನ್ಮೂಲ ಕ್ರೋಢೀಕರಿಸುವ ಬಗ್ಗೆ ಪರಿಶೀಲಿಸಬೇಕು ಎಂದರು.

ಶಿರಸಿ, ಬೆಳಗಾವಿ, ಹಾಸನ, ಚಾಮರಾಜನಗರ, ಮಡಿಕೇರಿ ಮತ್ತು ಗದಗ ನಗರಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾಮಗಾರಿ ಭೂಮಿಯ ಲಭ್ಯತೆಯ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಭೂಮಿ ಲಭ್ಯವಾಗಿರುವುದರಿಂದ ಕಾಮಗಾರಿ ಶೀಘ್ರವೇ ಪ್ರಾರಂಭಿಸಬೇಕು. ಮೈಸೂರು ನಗರದಲ್ಲಿ ಸ್ಥಳ ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳಿಗೆ ದೂರವಾಣಿ ಸೂಚನೆ ನೀಡಿದ್ದೇನೆ. ವಿಜ್ಞಾನ ನಗರಿ ನಿರ್ಮಿಸಲು ಭಾರತ ಸರ್ಕಾರ ಅನುಮೋದನೆ ನೀಡಿದ್ದು, 100 ಕೋಟಿಯ ಈ ಯೋಜನೆಗೆ ಬೆಂಗಳೂರು ನಗರದ ಹೊರ ವಲಯದಲ್ಲಿ 25 ಎಕರೆ ಜಾಗ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

Ramesh Babu

Journalist

Recent Posts

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

2 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

13 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

18 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

19 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

21 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

1 day ago