ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಡಿ, 2018ರಲ್ಲಿ ಬಾಕಿ ಬಿಲ್ 440 ಕೋಟಿ ರೂ.ನಷ್ಟಿತ್ತು. ಸೆಪ್ಟೆಂಬರ್ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಗಳಷ್ಟಾಗಿದೆ. ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಬಿಲ್ ಮೊತ್ತ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿ ಮಾತನಾಡಿದ ಅವರು, 2023ರ ಏಪ್ರಿಲ್ 1ರ ವೇಳೆಗೆ ಇಲಾಖೆಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕೈಗೊಳ್ಳಬೇಕಾದ ಮೊತ್ತ- 22,304 ಕೋಟಿ ರೂ. ಇದ್ದು, ಅದರಲ್ಲಿ 31-3-2023ರ ವರೆಗೆ 9602 ಕೋಟಿ ರೂ. ವೆಚ್ಚವಾಗಿದೆ. 2023-24ನೇ ಸಾಲಿಗೆ ಬಾಕಿ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ 12,696 ಕೋಟಿ ರೂ. ಆಗಿದೆ. ಇಲಾಖೆಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ನಿರ್ವಹಿಸಲು ಬೇಕಾಗುವ ಬಾಕಿ ಮೊತ್ತ 11,904 ಕೋಟಿ ರೂ. ನಷ್ಟಿದೆ. ಕಾಮಗಾರಿ ಪ್ರಾರಂಭವಾಗಿದ್ದರೆ ಅಂತಹ ಯೋಜನೆಗಳನ್ನು ಮುಂದುವರೆಸಿ, ಪ್ರಾರಂಭವಾಗದ ಕಾಮಗಾರಿಗಳನ್ನು ಕೈಬಿಡಿ ಎಂದು ಸೂಚಿಸಿದರು.
ಶಿರಸಿ, ಬೆಳಗಾವಿ, ಹಾಸನ, ಚಾಮರಾಜನಗರ, ಮಡಿಕೇರಿ ಮತ್ತು ಗದಗ ನಗರಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾಮಗಾರಿ ಭೂಮಿಯ ಲಭ್ಯತೆಯ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಭೂಮಿ ಲಭ್ಯವಾಗಿರುವುದರಿಂದ ಕಾಮಗಾರಿ ಶೀಘ್ರವೇ ಪ್ರಾರಂಭಿಸಬೇಕು. ಮೈಸೂರು ನಗರದಲ್ಲಿ ಸ್ಥಳ ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳಿಗೆ ದೂರವಾಣಿ ಸೂಚನೆ ನೀಡಿದ್ದೇನೆ. ವಿಜ್ಞಾನ ನಗರಿ ನಿರ್ಮಿಸಲು ಭಾರತ ಸರ್ಕಾರ ಅನುಮೋದನೆ ನೀಡಿದ್ದು, 100 ಕೋಟಿಯ ಈ ಯೋಜನೆಗೆ ಬೆಂಗಳೂರು ನಗರದ ಹೊರ ವಲಯದಲ್ಲಿ 25 ಎಕರೆ ಜಾಗ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…