ಕೆರೆ ಬಳಕೆದಾರರ ಸಂಘಗಳನ್ನು ಬಲಿಷ್ಠಗೊಳಿಸಿ- ಸಿಎಂ ಸಿದ್ದರಾಮಯ್ಯ

ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಡಿ, 2018ರಲ್ಲಿ ಬಾಕಿ ಬಿಲ್‌ 440 ಕೋಟಿ ರೂ.ನಷ್ಟಿತ್ತು. ಸೆಪ್ಟೆಂಬರ್‌ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಗಳಷ್ಟಾಗಿದೆ. ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಬಿಲ್‌ ಮೊತ್ತ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿ‌ ಮಾತನಾಡಿದ ಅವರು, 2023ರ ಏಪ್ರಿಲ್‌ 1ರ ವೇಳೆಗೆ ಇಲಾಖೆಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕೈಗೊಳ್ಳಬೇಕಾದ ಮೊತ್ತ- 22,304 ಕೋಟಿ ರೂ. ಇದ್ದು, ಅದರಲ್ಲಿ 31-3-2023ರ ವರೆಗೆ 9602 ಕೋಟಿ ರೂ. ವೆಚ್ಚವಾಗಿದೆ. 2023-24ನೇ ಸಾಲಿಗೆ ಬಾಕಿ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ 12,696 ಕೋಟಿ ರೂ. ಆಗಿದೆ. ಇಲಾಖೆಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ನಿರ್ವಹಿಸಲು ಬೇಕಾಗುವ ಬಾಕಿ ಮೊತ್ತ 11,904 ಕೋಟಿ ರೂ. ನಷ್ಟಿದೆ. ಕಾಮಗಾರಿ ಪ್ರಾರಂಭವಾಗಿದ್ದರೆ ಅಂತಹ ಯೋಜನೆಗಳನ್ನು ಮುಂದುವರೆಸಿ, ಪ್ರಾರಂಭವಾಗದ ಕಾಮಗಾರಿಗಳನ್ನು ಕೈಬಿಡಿ ಎಂದು ಸೂಚಿಸಿದರು.

ರಾಜ್ಯದಲ್ಲಿ ವಿವಿಧ ಇಲಾಖೆಗಳಡಿ ಇರುವ 34 ಸಾವಿರಕ್ಕೂ ಹೆಚ್ಚು ಕೆರೆಗಳ ಸಮಗ್ರ ನಿರ್ವಹಣೆಗೆ ಕೆರೆ ಅಭಿವೃದ್ಧಿ ಪ್ರಾಧಿಕಾರದಡಿ ಕೆರೆ ಬಳಕೆದಾರರ ಸಂಘಗಳನ್ನು ಬಲಿಷ್ಠಗೊಳಿಸಬೇಕು. ಅಧಿಕಾರೇತರ ಸದಸ್ಯರ ನೇಮಕ ಮಾಡುವ ಸಂದರ್ಭದಲ್ಲಿ ಕೆರೆಗಳ ಸಂರಕ್ಷಣೆಯ ಪರಿಣತರು ಹಾಗೂ ಕಾಳಜಿ ಉಳ್ಳವರನ್ನು ಆಯ್ಕೆ ಮಾಡಬೇಕು. ಸಣ್ಣ ನೀರಾವರಿ ಇಲಾಖೆ ಹಾಗೂ ಭಾರಿ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕೆರೆಗಳಲ್ಲಿ ಮೀನುಗಾರಿಕೆ ಗುತ್ತಿಗೆ ನೀಡುವ ಮೂಲಕ ಸಂಪನ್ಮೂಲ ಕ್ರೋಢೀಕರಿಸುವ ಬಗ್ಗೆ ಪರಿಶೀಲಿಸಬೇಕು ಎಂದರು.

ಶಿರಸಿ, ಬೆಳಗಾವಿ, ಹಾಸನ, ಚಾಮರಾಜನಗರ, ಮಡಿಕೇರಿ ಮತ್ತು ಗದಗ ನಗರಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾಮಗಾರಿ ಭೂಮಿಯ ಲಭ್ಯತೆಯ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಭೂಮಿ ಲಭ್ಯವಾಗಿರುವುದರಿಂದ ಕಾಮಗಾರಿ ಶೀಘ್ರವೇ ಪ್ರಾರಂಭಿಸಬೇಕು. ಮೈಸೂರು ನಗರದಲ್ಲಿ ಸ್ಥಳ ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳಿಗೆ ದೂರವಾಣಿ ಸೂಚನೆ ನೀಡಿದ್ದೇನೆ. ವಿಜ್ಞಾನ ನಗರಿ ನಿರ್ಮಿಸಲು ಭಾರತ ಸರ್ಕಾರ ಅನುಮೋದನೆ ನೀಡಿದ್ದು, 100 ಕೋಟಿಯ ಈ ಯೋಜನೆಗೆ ಬೆಂಗಳೂರು ನಗರದ ಹೊರ ವಲಯದಲ್ಲಿ 25 ಎಕರೆ ಜಾಗ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

9 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago