ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಡಿ, 2018ರಲ್ಲಿ ಬಾಕಿ ಬಿಲ್ 440 ಕೋಟಿ ರೂ.ನಷ್ಟಿತ್ತು. ಸೆಪ್ಟೆಂಬರ್ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಗಳಷ್ಟಾಗಿದೆ. ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಬಿಲ್ ಮೊತ್ತ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿ ಮಾತನಾಡಿದ ಅವರು, 2023ರ ಏಪ್ರಿಲ್ 1ರ ವೇಳೆಗೆ ಇಲಾಖೆಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕೈಗೊಳ್ಳಬೇಕಾದ ಮೊತ್ತ- 22,304 ಕೋಟಿ ರೂ. ಇದ್ದು, ಅದರಲ್ಲಿ 31-3-2023ರ ವರೆಗೆ 9602 ಕೋಟಿ ರೂ. ವೆಚ್ಚವಾಗಿದೆ. 2023-24ನೇ ಸಾಲಿಗೆ ಬಾಕಿ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ 12,696 ಕೋಟಿ ರೂ. ಆಗಿದೆ. ಇಲಾಖೆಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ನಿರ್ವಹಿಸಲು ಬೇಕಾಗುವ ಬಾಕಿ ಮೊತ್ತ 11,904 ಕೋಟಿ ರೂ. ನಷ್ಟಿದೆ. ಕಾಮಗಾರಿ ಪ್ರಾರಂಭವಾಗಿದ್ದರೆ ಅಂತಹ ಯೋಜನೆಗಳನ್ನು ಮುಂದುವರೆಸಿ, ಪ್ರಾರಂಭವಾಗದ ಕಾಮಗಾರಿಗಳನ್ನು ಕೈಬಿಡಿ ಎಂದು ಸೂಚಿಸಿದರು.
ಶಿರಸಿ, ಬೆಳಗಾವಿ, ಹಾಸನ, ಚಾಮರಾಜನಗರ, ಮಡಿಕೇರಿ ಮತ್ತು ಗದಗ ನಗರಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾಮಗಾರಿ ಭೂಮಿಯ ಲಭ್ಯತೆಯ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಭೂಮಿ ಲಭ್ಯವಾಗಿರುವುದರಿಂದ ಕಾಮಗಾರಿ ಶೀಘ್ರವೇ ಪ್ರಾರಂಭಿಸಬೇಕು. ಮೈಸೂರು ನಗರದಲ್ಲಿ ಸ್ಥಳ ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳಿಗೆ ದೂರವಾಣಿ ಸೂಚನೆ ನೀಡಿದ್ದೇನೆ. ವಿಜ್ಞಾನ ನಗರಿ ನಿರ್ಮಿಸಲು ಭಾರತ ಸರ್ಕಾರ ಅನುಮೋದನೆ ನೀಡಿದ್ದು, 100 ಕೋಟಿಯ ಈ ಯೋಜನೆಗೆ ಬೆಂಗಳೂರು ನಗರದ ಹೊರ ವಲಯದಲ್ಲಿ 25 ಎಕರೆ ಜಾಗ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…