Categories: ರಾಜ್ಯ

ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಜೀವಂತ ಸಾಕ್ಷಿ-ಮಾಜಿ‌ ಸಿಎಂ ಹೆಚ್.ಡಿ.ಕುಮಾರಸ್ವಾಮಿ‌ ಕಿಡಿ

2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಹೊರರಾಜ್ಯಗಳ ಗಣ್ಯರಿಗೆ ಆತಿಥ್ಯ ನೀಡಲು ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿರಲಿಲ್ಲವೆ ಎಂದು ಕೆಲವರು ಪ್ರಶ್ನಿಸಿದ್ದಾರೆ!, ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಜೀವಂತ ಸಾಕ್ಷಿ ಎಂದು ಕಾಂಗ್ರೆಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸ್ವತಃ ಮುಖ್ಯಮಂತ್ರಿಗಳು, ಸಂಸದೀಯ ಸಚಿವರು, ಇನ್ನೂ ಕೆಲ ಮಂತ್ರಿಗಳು ಸದನವನ್ನೇ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಆಗ ನಾನು ಕೇವಲ ನಿಯೋಜಿತ ಮುಖ್ಯಮಂತ್ರಿ. ರಾಜಭವನದ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆ ಮಾಡಿರುತ್ತದೆ ಎಂಬುದು ಇವರಿಗೆ ತಿಳಿಯದೆ?‌ಪ್ರಮಾಣವನ್ನೇ ಸ್ವೀಕರಿಸದ ನಿಯೋಜಿತ ಮುಖ್ಯಮಂತ್ರಿ ಯಾವುದಾದರೂ ಆದೇಶ ನೀಡಲು ಸಾಧ್ಯವೇ? ಇಷ್ಟಕ್ಕೂ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭಕ್ಕೂ, ಪಕ್ಷದ ಕಾರ್ಯಕ್ರಮಕ್ಕೂ ಹೋಲಿಕೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇಷ್ಟು ಸಾಮಾನ್ಯ ತಿಳಿವಳಿಕೆ ಸ್ವತಃ ಮುಖ್ಯಮಂತ್ರಿ ಹಾಗೂ ಸಂಸದೀಯ ಸಚಿವರಿಗೆ ಇಲ್ಲ ಎಂದರೆ ಏನು ಹೇಳುವುದು? ಇಂಡಿಯಾ ಒಕ್ಕೂಟದ ಸಭೆಗೆ ಬಂದ ಹೊರರಾಜ್ಯಗಳ ನಾಯಕರಿಗೆ ಐಎಎಸ್ ಅಧಿಕಾರಿಗಳನ್ನು ಚಾಕರಿಗೆ ಬಿಟ್ಟಿದ್ದು ತಪ್ಪು ಎಂಬುದು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಗಿಳಿಪಾಠ ಒಪ್ಪಿಸುವ ಸ್ವಯಂಘೋಷಿತ ಸಂವಿಧಾನ ತಜ್ಞರಿಗೆ ಶೋಭೆಯೇ? ಎಂದು ಗುಡುಗಿದ್ದಾರೆ.

ಉಪ ಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್ ತೇಲಿಬಿಟ್ಟಿದೆ ಸರ್ಕಾರ. ದಲಿತರೆನ್ನುವ ಕಾರಣಕ್ಕೆ ಉಪ ಸಭಾಧ್ಯಕ್ಷರ ಮೇಲೆ ಅನುಕಂಪದ ಹೊಳೆ ಹರಿಸುವ ಕಾಂಗ್ರೆಸ್, ಅವರಿಗೆ ಸಚಿವ ಸ್ಥಾನವನ್ನೇ ನೀಡಬಹುದಿತ್ತು. ನೀಡಲಿಲ್ಲ ಯಾಕೆ? ಶಾಸಕ ಪುಟ್ಟರಂಗಶೆಟ್ಟಿ ಅವರು ಬೇಡವೇ ಬೇಡ ಎಂದ ಹುದ್ದೆಯನ್ನು ರುದ್ರಪ್ಪ ಲಮಾಣಿ ಅವರ ತಲೆಗೆ ಕಟ್ಟಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಇಂಥ ಅತಿಯಾದ ಜಾಣತನ, ಭಂಡತನ ಯಾಕೆ? ಸಂಪುಟ ರಚನೆ ವೇಳೆ ರುದ್ರಪ್ಪ ಲಮಾಣಿ ಅವರು ದಲಿತರೆನ್ನುವುದು ಕಾಂಗ್ರೆಸ್’ಗೆ ಗೊತ್ತಿರಲಿಲ್ಲವೇ? ದಲಿತ ಕಾರ್ಡ್ ಬಿಟ್ಟ ಪ್ರಿಯಾಂಕ್ ಖರ್ಗೆ ಅಥವಾ ಕೃಷ್ಣ ಭೈರೇಗೌಡರಿಗೆ ಅಷ್ಟು ದಲಿತಪ್ರೇಮ ಇದ್ದರೆ ಅವರ ಸಚಿವಗಿರಿಯನ್ನು ಲಮಾಣಿ ಅವರಿಗೇ ಬಿಟ್ಟುಕೊಟ್ಟು ಈ ಇಬ್ಬರಲ್ಲಿ ಒಬ್ಬರು ಉಪ ಸಭಾಧ್ಯಕ್ಷರಾಗಲಿ ಎಂದಿದ್ದಾರೆ.

ಅಷ್ಟೇ ಅಲ್ಲ, ದಲಿತ ಮುಖ್ಯಮಂತ್ರಿ ಕೂಗು ಕಾಂಗ್ರೆಸ್ ಪಕ್ಷದಲ್ಲಿ ಬಹಳ ದಿನಗಳಿಂದ ಇದೆ. ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ಕೈ ತಪ್ಪುವಂತೆ ಮಾಡಲಾಗಿತ್ತು. ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ. ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ. ಅಲ್ಲವೇ? ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

3 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

7 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

21 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

21 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

22 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

23 hours ago