2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಹೊರರಾಜ್ಯಗಳ ಗಣ್ಯರಿಗೆ ಆತಿಥ್ಯ ನೀಡಲು ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿರಲಿಲ್ಲವೆ ಎಂದು ಕೆಲವರು ಪ್ರಶ್ನಿಸಿದ್ದಾರೆ!, ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಜೀವಂತ ಸಾಕ್ಷಿ ಎಂದು ಕಾಂಗ್ರೆಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸ್ವತಃ ಮುಖ್ಯಮಂತ್ರಿಗಳು, ಸಂಸದೀಯ ಸಚಿವರು, ಇನ್ನೂ ಕೆಲ ಮಂತ್ರಿಗಳು ಸದನವನ್ನೇ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಆಗ ನಾನು ಕೇವಲ ನಿಯೋಜಿತ ಮುಖ್ಯಮಂತ್ರಿ. ರಾಜಭವನದ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆ ಮಾಡಿರುತ್ತದೆ ಎಂಬುದು ಇವರಿಗೆ ತಿಳಿಯದೆ?ಪ್ರಮಾಣವನ್ನೇ ಸ್ವೀಕರಿಸದ ನಿಯೋಜಿತ ಮುಖ್ಯಮಂತ್ರಿ ಯಾವುದಾದರೂ ಆದೇಶ ನೀಡಲು ಸಾಧ್ಯವೇ? ಇಷ್ಟಕ್ಕೂ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭಕ್ಕೂ, ಪಕ್ಷದ ಕಾರ್ಯಕ್ರಮಕ್ಕೂ ಹೋಲಿಕೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಇಷ್ಟು ಸಾಮಾನ್ಯ ತಿಳಿವಳಿಕೆ ಸ್ವತಃ ಮುಖ್ಯಮಂತ್ರಿ ಹಾಗೂ ಸಂಸದೀಯ ಸಚಿವರಿಗೆ ಇಲ್ಲ ಎಂದರೆ ಏನು ಹೇಳುವುದು? ಇಂಡಿಯಾ ಒಕ್ಕೂಟದ ಸಭೆಗೆ ಬಂದ ಹೊರರಾಜ್ಯಗಳ ನಾಯಕರಿಗೆ ಐಎಎಸ್ ಅಧಿಕಾರಿಗಳನ್ನು ಚಾಕರಿಗೆ ಬಿಟ್ಟಿದ್ದು ತಪ್ಪು ಎಂಬುದು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಗಿಳಿಪಾಠ ಒಪ್ಪಿಸುವ ಸ್ವಯಂಘೋಷಿತ ಸಂವಿಧಾನ ತಜ್ಞರಿಗೆ ಶೋಭೆಯೇ? ಎಂದು ಗುಡುಗಿದ್ದಾರೆ.
ಉಪ ಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್ ತೇಲಿಬಿಟ್ಟಿದೆ ಸರ್ಕಾರ. ದಲಿತರೆನ್ನುವ ಕಾರಣಕ್ಕೆ ಉಪ ಸಭಾಧ್ಯಕ್ಷರ ಮೇಲೆ ಅನುಕಂಪದ ಹೊಳೆ ಹರಿಸುವ ಕಾಂಗ್ರೆಸ್, ಅವರಿಗೆ ಸಚಿವ ಸ್ಥಾನವನ್ನೇ ನೀಡಬಹುದಿತ್ತು. ನೀಡಲಿಲ್ಲ ಯಾಕೆ? ಶಾಸಕ ಪುಟ್ಟರಂಗಶೆಟ್ಟಿ ಅವರು ಬೇಡವೇ ಬೇಡ ಎಂದ ಹುದ್ದೆಯನ್ನು ರುದ್ರಪ್ಪ ಲಮಾಣಿ ಅವರ ತಲೆಗೆ ಕಟ್ಟಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.
ಇಂಥ ಅತಿಯಾದ ಜಾಣತನ, ಭಂಡತನ ಯಾಕೆ? ಸಂಪುಟ ರಚನೆ ವೇಳೆ ರುದ್ರಪ್ಪ ಲಮಾಣಿ ಅವರು ದಲಿತರೆನ್ನುವುದು ಕಾಂಗ್ರೆಸ್’ಗೆ ಗೊತ್ತಿರಲಿಲ್ಲವೇ? ದಲಿತ ಕಾರ್ಡ್ ಬಿಟ್ಟ ಪ್ರಿಯಾಂಕ್ ಖರ್ಗೆ ಅಥವಾ ಕೃಷ್ಣ ಭೈರೇಗೌಡರಿಗೆ ಅಷ್ಟು ದಲಿತಪ್ರೇಮ ಇದ್ದರೆ ಅವರ ಸಚಿವಗಿರಿಯನ್ನು ಲಮಾಣಿ ಅವರಿಗೇ ಬಿಟ್ಟುಕೊಟ್ಟು ಈ ಇಬ್ಬರಲ್ಲಿ ಒಬ್ಬರು ಉಪ ಸಭಾಧ್ಯಕ್ಷರಾಗಲಿ ಎಂದಿದ್ದಾರೆ.
ಅಷ್ಟೇ ಅಲ್ಲ, ದಲಿತ ಮುಖ್ಯಮಂತ್ರಿ ಕೂಗು ಕಾಂಗ್ರೆಸ್ ಪಕ್ಷದಲ್ಲಿ ಬಹಳ ದಿನಗಳಿಂದ ಇದೆ. ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ಕೈ ತಪ್ಪುವಂತೆ ಮಾಡಲಾಗಿತ್ತು. ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ. ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ. ಅಲ್ಲವೇ? ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…