2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಹೊರರಾಜ್ಯಗಳ ಗಣ್ಯರಿಗೆ ಆತಿಥ್ಯ ನೀಡಲು ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿರಲಿಲ್ಲವೆ ಎಂದು ಕೆಲವರು ಪ್ರಶ್ನಿಸಿದ್ದಾರೆ!, ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಜೀವಂತ ಸಾಕ್ಷಿ ಎಂದು ಕಾಂಗ್ರೆಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸ್ವತಃ ಮುಖ್ಯಮಂತ್ರಿಗಳು, ಸಂಸದೀಯ ಸಚಿವರು, ಇನ್ನೂ ಕೆಲ ಮಂತ್ರಿಗಳು ಸದನವನ್ನೇ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಆಗ ನಾನು ಕೇವಲ ನಿಯೋಜಿತ ಮುಖ್ಯಮಂತ್ರಿ. ರಾಜಭವನದ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆ ಮಾಡಿರುತ್ತದೆ ಎಂಬುದು ಇವರಿಗೆ ತಿಳಿಯದೆ?ಪ್ರಮಾಣವನ್ನೇ ಸ್ವೀಕರಿಸದ ನಿಯೋಜಿತ ಮುಖ್ಯಮಂತ್ರಿ ಯಾವುದಾದರೂ ಆದೇಶ ನೀಡಲು ಸಾಧ್ಯವೇ? ಇಷ್ಟಕ್ಕೂ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭಕ್ಕೂ, ಪಕ್ಷದ ಕಾರ್ಯಕ್ರಮಕ್ಕೂ ಹೋಲಿಕೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಇಷ್ಟು ಸಾಮಾನ್ಯ ತಿಳಿವಳಿಕೆ ಸ್ವತಃ ಮುಖ್ಯಮಂತ್ರಿ ಹಾಗೂ ಸಂಸದೀಯ ಸಚಿವರಿಗೆ ಇಲ್ಲ ಎಂದರೆ ಏನು ಹೇಳುವುದು? ಇಂಡಿಯಾ ಒಕ್ಕೂಟದ ಸಭೆಗೆ ಬಂದ ಹೊರರಾಜ್ಯಗಳ ನಾಯಕರಿಗೆ ಐಎಎಸ್ ಅಧಿಕಾರಿಗಳನ್ನು ಚಾಕರಿಗೆ ಬಿಟ್ಟಿದ್ದು ತಪ್ಪು ಎಂಬುದು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಗಿಳಿಪಾಠ ಒಪ್ಪಿಸುವ ಸ್ವಯಂಘೋಷಿತ ಸಂವಿಧಾನ ತಜ್ಞರಿಗೆ ಶೋಭೆಯೇ? ಎಂದು ಗುಡುಗಿದ್ದಾರೆ.
ಉಪ ಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್ ತೇಲಿಬಿಟ್ಟಿದೆ ಸರ್ಕಾರ. ದಲಿತರೆನ್ನುವ ಕಾರಣಕ್ಕೆ ಉಪ ಸಭಾಧ್ಯಕ್ಷರ ಮೇಲೆ ಅನುಕಂಪದ ಹೊಳೆ ಹರಿಸುವ ಕಾಂಗ್ರೆಸ್, ಅವರಿಗೆ ಸಚಿವ ಸ್ಥಾನವನ್ನೇ ನೀಡಬಹುದಿತ್ತು. ನೀಡಲಿಲ್ಲ ಯಾಕೆ? ಶಾಸಕ ಪುಟ್ಟರಂಗಶೆಟ್ಟಿ ಅವರು ಬೇಡವೇ ಬೇಡ ಎಂದ ಹುದ್ದೆಯನ್ನು ರುದ್ರಪ್ಪ ಲಮಾಣಿ ಅವರ ತಲೆಗೆ ಕಟ್ಟಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.
ಇಂಥ ಅತಿಯಾದ ಜಾಣತನ, ಭಂಡತನ ಯಾಕೆ? ಸಂಪುಟ ರಚನೆ ವೇಳೆ ರುದ್ರಪ್ಪ ಲಮಾಣಿ ಅವರು ದಲಿತರೆನ್ನುವುದು ಕಾಂಗ್ರೆಸ್’ಗೆ ಗೊತ್ತಿರಲಿಲ್ಲವೇ? ದಲಿತ ಕಾರ್ಡ್ ಬಿಟ್ಟ ಪ್ರಿಯಾಂಕ್ ಖರ್ಗೆ ಅಥವಾ ಕೃಷ್ಣ ಭೈರೇಗೌಡರಿಗೆ ಅಷ್ಟು ದಲಿತಪ್ರೇಮ ಇದ್ದರೆ ಅವರ ಸಚಿವಗಿರಿಯನ್ನು ಲಮಾಣಿ ಅವರಿಗೇ ಬಿಟ್ಟುಕೊಟ್ಟು ಈ ಇಬ್ಬರಲ್ಲಿ ಒಬ್ಬರು ಉಪ ಸಭಾಧ್ಯಕ್ಷರಾಗಲಿ ಎಂದಿದ್ದಾರೆ.
ಅಷ್ಟೇ ಅಲ್ಲ, ದಲಿತ ಮುಖ್ಯಮಂತ್ರಿ ಕೂಗು ಕಾಂಗ್ರೆಸ್ ಪಕ್ಷದಲ್ಲಿ ಬಹಳ ದಿನಗಳಿಂದ ಇದೆ. ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ಕೈ ತಪ್ಪುವಂತೆ ಮಾಡಲಾಗಿತ್ತು. ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ. ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ. ಅಲ್ಲವೇ? ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…