ಸ್ನೇಹಿತರ ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯ…?ವಾಗಿರುವ ಘಟನೆ ತಾಲೂಕಿನ ಹೆಗ್ಗಡಿಹಳ್ಳಿ ಬಳಿ ನಡೆದಿದೆ…
ವಿಜಯಕುಮಾರ್( 30) ಮೃತ ದುರ್ದೈವಿ.
ಗಲಾಟೆ ವೇಳೆ ಮೃತ ವಿಜಯಕುಮಾರ್ ತಲೆಗೆ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಪೂಜಪ್ಪ(45), ಎಂಬಾತ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.
ಮಾಲೂರು ಮೂಲದ ಶ್ರೀನಿವಾಸ, ಮುರುಗೇಶ, ಪೂಜಪ್ಪ, ನಾಗರಾಜ ಜೊತೆ ಮೃತ ವಿಜಯಕುಮಾರ್ ತಾಲೂಕಿನ ಹೆಗ್ಗಡಿಹಳ್ಳಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಪೈಪ್ ಲೈನ್ ಹಾಕಲು ಆಗೆದಿರುವ ಕಾಂಕ್ರಿಟ್ ರಸ್ತೆಯ ಸೈಡ್ ಲೈನ್ ಗೆ ಕಾಂಕ್ರಿಟ್ ಹಾಕುವ ಕೆಲಸಕ್ಕೆ ಬಂದಿದ್ದರು.
ಒಂದೇ ಕೊಠಡಿಯಲ್ಲಿ ಇದ್ದ ಐದು ಜನರ ನಡುವೆ ಜೂ.13ರ ಶುಕ್ರವಾರ ರಾತ್ರಿ ಘಟನೆ ನಡೆದಿದೆ, ಇದರಲ್ಲಿ ವಿಜಯಕುಮಾರ್ ತಲೆಗೆ ತೀವ್ರ ಪೆಟ್ಟಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಸರಕಾರಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ವಿಜಯಕುಮಾರ್ ಸಾವನ್ನಪ್ಪಿರುವ ಮಾಹಿತಿ ಜೂ.14 ಶನಿವಾರದಂದು ಸಂಬಂಧಿಕರಿಗೆ ತಿಳಿದಿದೆ.
ಪೂಜಪ್ಪನೇ ಕೊಲೆ ಮಾಡಿದ್ದಾನೆ ಎಂದು ಸಂಬಂಧಿಕರು ಅನುಮಾನಗೊಂಡು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಆರೋಪಿಯನ್ನು ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…