ಸ್ನೇಹಿತರ ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯ…?ವಾಗಿರುವ ಘಟನೆ ತಾಲೂಕಿನ ಹೆಗ್ಗಡಿಹಳ್ಳಿ ಬಳಿ ನಡೆದಿದೆ…
ವಿಜಯಕುಮಾರ್( 30) ಮೃತ ದುರ್ದೈವಿ.
ಗಲಾಟೆ ವೇಳೆ ಮೃತ ವಿಜಯಕುಮಾರ್ ತಲೆಗೆ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಪೂಜಪ್ಪ(45), ಎಂಬಾತ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.
ಮಾಲೂರು ಮೂಲದ ಶ್ರೀನಿವಾಸ, ಮುರುಗೇಶ, ಪೂಜಪ್ಪ, ನಾಗರಾಜ ಜೊತೆ ಮೃತ ವಿಜಯಕುಮಾರ್ ತಾಲೂಕಿನ ಹೆಗ್ಗಡಿಹಳ್ಳಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಪೈಪ್ ಲೈನ್ ಹಾಕಲು ಆಗೆದಿರುವ ಕಾಂಕ್ರಿಟ್ ರಸ್ತೆಯ ಸೈಡ್ ಲೈನ್ ಗೆ ಕಾಂಕ್ರಿಟ್ ಹಾಕುವ ಕೆಲಸಕ್ಕೆ ಬಂದಿದ್ದರು.
ಒಂದೇ ಕೊಠಡಿಯಲ್ಲಿ ಇದ್ದ ಐದು ಜನರ ನಡುವೆ ಜೂ.13ರ ಶುಕ್ರವಾರ ರಾತ್ರಿ ಘಟನೆ ನಡೆದಿದೆ, ಇದರಲ್ಲಿ ವಿಜಯಕುಮಾರ್ ತಲೆಗೆ ತೀವ್ರ ಪೆಟ್ಟಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಸರಕಾರಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ವಿಜಯಕುಮಾರ್ ಸಾವನ್ನಪ್ಪಿರುವ ಮಾಹಿತಿ ಜೂ.14 ಶನಿವಾರದಂದು ಸಂಬಂಧಿಕರಿಗೆ ತಿಳಿದಿದೆ.
ಪೂಜಪ್ಪನೇ ಕೊಲೆ ಮಾಡಿದ್ದಾನೆ ಎಂದು ಸಂಬಂಧಿಕರು ಅನುಮಾನಗೊಂಡು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಆರೋಪಿಯನ್ನು ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…