ಕೆಲಸಕ್ಕೆಂದು ಬಂದು ಸ್ನೇಹಿತರ ನಡುವೆ ಗಲಾಟೆ, ಕೊಲೆಯಲ್ಲಿ ಅಂತ್ಯ…?

ಸ್ನೇಹಿತರ ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯ…?ವಾಗಿರುವ ಘಟನೆ ತಾಲೂಕಿನ ಹೆಗ್ಗಡಿಹಳ್ಳಿ ಬಳಿ ನಡೆದಿದೆ…

ವಿಜಯಕುಮಾರ್( 30) ಮೃತ ದುರ್ದೈವಿ.

ಗಲಾಟೆ ವೇಳೆ ಮೃತ ವಿಜಯಕುಮಾರ್ ತಲೆಗೆ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಪೂಜಪ್ಪ(45), ಎಂಬಾತ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.

ಮಾಲೂರು ಮೂಲದ ಶ್ರೀನಿವಾಸ, ಮುರುಗೇಶ, ಪೂಜಪ್ಪ,  ನಾಗರಾಜ ಜೊತೆ ಮೃತ ವಿಜಯಕುಮಾರ್ ತಾಲೂಕಿನ ಹೆಗ್ಗಡಿಹಳ್ಳಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಪೈಪ್ ಲೈನ್ ಹಾಕಲು ಆಗೆದಿರುವ ಕಾಂಕ್ರಿಟ್ ರಸ್ತೆಯ ಸೈಡ್ ಲೈನ್ ಗೆ ಕಾಂಕ್ರಿಟ್ ಹಾಕುವ ಕೆಲಸಕ್ಕೆ ಬಂದಿದ್ದರು.

ಒಂದೇ ಕೊಠಡಿಯಲ್ಲಿ ಇದ್ದ ಐದು ಜನರ ನಡುವೆ ಜೂ.13ರ ಶುಕ್ರವಾರ ರಾತ್ರಿ ಘಟನೆ ನಡೆದಿದೆ, ಇದರಲ್ಲಿ ವಿಜಯಕುಮಾರ್ ತಲೆಗೆ ತೀವ್ರ ಪೆಟ್ಟಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಸರಕಾರಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ವಿಜಯಕುಮಾರ್ ಸಾವನ್ನಪ್ಪಿರುವ ಮಾಹಿತಿ ಜೂ.14 ಶನಿವಾರದಂದು ಸಂಬಂಧಿಕರಿಗೆ ತಿಳಿದಿದೆ.

ಪೂಜಪ್ಪನೇ ಕೊಲೆ ಮಾಡಿದ್ದಾನೆ ಎಂದು ಸಂಬಂಧಿಕರು ಅನುಮಾನಗೊಂಡು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸದ್ಯ ಆರೋಪಿಯನ್ನು ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

3 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

5 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

6 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

20 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

23 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago