ಕೆಲ ವಿಷಪೂರಿತ ಮನಸ್ಸುಗಳು ಮಣಿಪುರದ ಹಿಂಸೆಗೆ ಕಾರಣ- ಬೆಂ. ಉ. ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್

ವಿಷಪೂರಿತ ಮನಸ್ಸುಗಳು ಮಣಿಪುರದಲ್ಲಿ ಹಿಂಸೆಯನ್ನು ಪ್ರಚೋಧಿಸುತ್ತಿವೆ. ಇದರ ವಿರುದ್ಧ ಒಗ್ಗಟ್ಟಿನ ಅಹಿಂಸಾತ್ಮಕ ಹೋರಾಟಗಳ ತುರ್ತು ಅಗತ್ಯವಿದೆ ಎಂದು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್ ಹೇಳಿದರು.

ನಗರದ ಕನ್ನಡ ಜಾಗೃತ ಪರಿಷತ್ ವತಿಯಿಂದ ಸೋಮವಾರ ಜಾಗೃತ ಭವನದಲ್ಲಿ ನಡೆದ ‘ಮಣಿಪುರದಲ್ಲಿ ಹಿಂಸಾಚಾರ: ಅಸಲಿ ವಿಷಯವೇನು?’ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಮಣಿಪುರದಲ್ಲಿ ರಾಜ್ಯ ಸರ್ಕಾರದ ಚಲ್ಲಾಟದಿಂದಾಗಿಯೇ ಹಿಂಸಾಚಾರ ಮಿತಿಮೀರಲು ಕಾರಣವಾಗಿದೆ. ಅಲ್ಲಿನ ಪ್ಲಾಟಿನಂ ಖನಿಜ ಸಂಪತ್ತನ್ನು ಖಾಸಗಿ ಕಂಪನಿಯೊಂದಕ್ಕೆ ನೀಡುವ ಸಲುವಾಗಿ ಮೈತೇಯಿ ಹಾಗೂ ಕುಕ್ಕಿ ಸಮುದಾಯಗಳ ನಡುವೆ ಕೋಮುಗಲಬೆಯನ್ನು ಉಂಟುಮಾಡಲಾಗುತ್ತಿದೆ. ಇದರಿಂದ ಸ್ಥಳೀಯರು ಪ್ಲಾಟಿನಂ ಖನಿಜ ಗಣಿಗಾರಿಕೆಗೆ ವಿರೋಧ ವ್ಯಕ್ತಪಡಿಸದಂತೆ ತಡೆಯುವ ಹುನ್ನಾರವು ಹಿಂಸಾಚಾರದ ಹಿಂದೆ ಹಡಗಿದೆ ಎನ್ನುವುದನ್ನು ಇತ್ತೀಚೆಗೆ ಕೆಲವು ಪತ್ರಿಕೆಗಳಲ್ಲಿ ವರದಿಯಾಗಿವೆ. ತಮ್ಮ ರಾಜಕೀಯ ಹಾಗೂ ಆರ್ಥಿಕ ಚಟುವಟಿಕೆಗಾಗಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಮಹಿಳೆಯನ್ನು ಹೋರಾಟದ ಗುರಾಣಿಯನ್ನಾಗಿ ಮಾಡಿಕೊಂಡಿರುವ ಮಾನವೀಯ ಘಟನೆಯನ್ನು ದೇಶದ ಎಲ್ಲಾ ಪ್ರಜ್ಞಾವಂತರು ಪಕ್ಷ ಬೇಧ ಮರೆತು ಖಂಡಿಸಲೇಬೇಕಿದೆ ಎಂದರು.

ಮಣಿಪುರದಲ್ಲಿನ ಹಿಂಸಾಚಾರವನ್ನು ತಕ್ಷಣ ಕೊನೆಗಾಣಿಸಲು ನಮ್ಮ ಆಡಳಿತಗಾರರು ತಮ್ಮ ದುರಂಹಕಾರವನ್ನು ಬದಿಗೊತ್ತಿ ಕೆಲಸ ಮಾಡಬೇಕು. ರಾಷ್ಟ್ರಪತಿ ಆಡಳಿತವನ್ನು ತುರ್ತಾಗಿ ಜಾರಿಗೆ ತರಬೇಕು ಹಾಗೆಯೇ ಹಿಂಸಾಚಾರ ತಡೆಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಮೂಲಕ ದೇಶದ ನಾಗರೀಕರು ಆಗ್ರಹಿಸಬೇಕು ಎಂದರು.

ಜನವಾದಿ ಮಹಿಳಾ ಸಂಘಟನೆಯ ಪ್ರಭಾ ಬೆಳವಂಗಲ ಮಾತನಾಡಿ, ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಆಡಳಿತಕ್ಕೆ ಬಂದರೆ ಅಭಿವೃದ್ಧಿ ಸಾಧ್ಯ ಎನ್ನುವ ಬಿಜೆಪಿ ಮುಖಂಡರ ಸುಳ್ಳು ಆಶ್ವಾಸನೆಗೆ ಮಣಿಪುರ ರಾಜ್ಯದಲ್ಲಿನ ಹಿಂಸಾಚಾರವೇ ತಾಜಾ ಉದಾಹಣೆಯಾಗಿದೆ. ಡಬಲ್ ಇಂಜಿನ್ ಆಡಳಿತ ಇರುವ ಎಲ್ಲಾ ರಾಜ್ಯಗಳಲ್ಲೂ ಸಹ ಕೋಮುಗಲಬೆಗಳೆ ಹೆಚ್ಚಾಗಿವೆ ಹೊರತು ಅಭಿವೃದ್ಧಿಯಲ್ಲ. ಗುಜರಾತ್, ಬಾಂಬೆ, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮುಗಲಬೆಗಳಿಗೆ ಕಾರಣವಾಗಿರುವವರೆ ಇಂದು ಮಣಿಪುರ ರಾಜ್ಯದಲ್ಲಿನ ಹಿಂಸಾಚಾರಕ್ಕೂ ಕಾರಣವಾಗಿದ್ದಾರೆ ಎಂದು ದೂರಿದರು.

ಕುಕ್ಕಿ ಬಡುಕಟ್ಟು ಸಮುದಾಯವನ್ನೇ ನಾಶ ಮಾಡುವ ತಂತ್ರವನ್ನು ರೂಪಿಸಲಾಗಿದೆ. ಮಣಿಪುರ ಹಿಂಸಾಚಾರವನ್ನು ತಡೆಯುವಲ್ಲಿ ಸುಪ್ರಿಂ ಕೋರ್ಟ್ ಮಧ್ಯಪ್ರವೇಶ ಮಾಡುವವರೆಗೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಿಂಸಾಚಾರವನ್ನು ಕಂಡೂ ಕಾಣದಂತೆ ಇದ್ದವು. ಈ ಹಿಂಸಾಚಾರ ಸರ್ಕಾರಿ ಪ್ರಾಯೋಜಿತವಾಗಿತ್ತು ಎನ್ನುವುದು ಸ್ಪಷ್ಟವಾಗಿದೆ ಎಂದರು.

ಇಡೀ ವಿಶ್ವವೇ ಮಣಿಪುರದಲ್ಲಿನ ಹಿಂಸಾಚಾರವನ್ನು ಕಂಡು ಮರುಗಿದೆ. ಮಹಿಳೆಯರ ಬತ್ತಲೆ ಮೆರಣಿಗೆಯಿಂದಾಗಿ ದೇಶದ ಗೌರವ ಕುಂದಿದೆ. ಇಷ್ಟಾದರು ಸಹ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ವಿರೋಧ ಪಕ್ಷಗಳು ಧ್ವನಿ ಎತ್ತುವವರೆಗೂ ಈ ಬಗ್ಗೆ ಮಾತನಾಡದೇ ಹೋಗಿದ್ದು ದುರಂತದ ಸಂಗತಿ. ಈಶಾನ್ಯ ಭಾರತದ 7 ರಾಜ್ಯಗಳ ಪ್ರಗತಿಗೆ ಎಚ್. ಡಿ. ದೇವೇಗೌಡರು ಪ್ರಧಾನಿಗಳಾಗಿದ್ದಾಗ ವಿಶೇಷವಾದ ಪ್ಯಾಕೇಜ್ ನೀಡಿದ್ದು ಹೊರತು, ಇಲ್ಲಿಯವರೆಗೂ ಯಾರೂ ಸಹ ಈ ರಾಜ್ಯಗಳ ಅಭಿವೃದ್ಧಿಗೆ ಆದ್ಯತೆಯನ್ನೇ ನೀಡಿಲ್ಲ ಎಂದರು.

ವಿಚಾರ ಸಂಕಿರಣದಲ್ಲಿ ಪ್ರಸ್ತಾವಿಕವಾಗಿ ಕನ್ನಡ ಜಾಗೃತ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿದರು.

ಈ ವೇಳೆ ನಗರದ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

2 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

18 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

19 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 days ago