ಕೆಲ ವಿಷಪೂರಿತ ಮನಸ್ಸುಗಳು ಮಣಿಪುರದ ಹಿಂಸೆಗೆ ಕಾರಣ- ಬೆಂ. ಉ. ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್

ವಿಷಪೂರಿತ ಮನಸ್ಸುಗಳು ಮಣಿಪುರದಲ್ಲಿ ಹಿಂಸೆಯನ್ನು ಪ್ರಚೋಧಿಸುತ್ತಿವೆ. ಇದರ ವಿರುದ್ಧ ಒಗ್ಗಟ್ಟಿನ ಅಹಿಂಸಾತ್ಮಕ ಹೋರಾಟಗಳ ತುರ್ತು ಅಗತ್ಯವಿದೆ ಎಂದು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್ ಹೇಳಿದರು.

ನಗರದ ಕನ್ನಡ ಜಾಗೃತ ಪರಿಷತ್ ವತಿಯಿಂದ ಸೋಮವಾರ ಜಾಗೃತ ಭವನದಲ್ಲಿ ನಡೆದ ‘ಮಣಿಪುರದಲ್ಲಿ ಹಿಂಸಾಚಾರ: ಅಸಲಿ ವಿಷಯವೇನು?’ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಮಣಿಪುರದಲ್ಲಿ ರಾಜ್ಯ ಸರ್ಕಾರದ ಚಲ್ಲಾಟದಿಂದಾಗಿಯೇ ಹಿಂಸಾಚಾರ ಮಿತಿಮೀರಲು ಕಾರಣವಾಗಿದೆ. ಅಲ್ಲಿನ ಪ್ಲಾಟಿನಂ ಖನಿಜ ಸಂಪತ್ತನ್ನು ಖಾಸಗಿ ಕಂಪನಿಯೊಂದಕ್ಕೆ ನೀಡುವ ಸಲುವಾಗಿ ಮೈತೇಯಿ ಹಾಗೂ ಕುಕ್ಕಿ ಸಮುದಾಯಗಳ ನಡುವೆ ಕೋಮುಗಲಬೆಯನ್ನು ಉಂಟುಮಾಡಲಾಗುತ್ತಿದೆ. ಇದರಿಂದ ಸ್ಥಳೀಯರು ಪ್ಲಾಟಿನಂ ಖನಿಜ ಗಣಿಗಾರಿಕೆಗೆ ವಿರೋಧ ವ್ಯಕ್ತಪಡಿಸದಂತೆ ತಡೆಯುವ ಹುನ್ನಾರವು ಹಿಂಸಾಚಾರದ ಹಿಂದೆ ಹಡಗಿದೆ ಎನ್ನುವುದನ್ನು ಇತ್ತೀಚೆಗೆ ಕೆಲವು ಪತ್ರಿಕೆಗಳಲ್ಲಿ ವರದಿಯಾಗಿವೆ. ತಮ್ಮ ರಾಜಕೀಯ ಹಾಗೂ ಆರ್ಥಿಕ ಚಟುವಟಿಕೆಗಾಗಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಮಹಿಳೆಯನ್ನು ಹೋರಾಟದ ಗುರಾಣಿಯನ್ನಾಗಿ ಮಾಡಿಕೊಂಡಿರುವ ಮಾನವೀಯ ಘಟನೆಯನ್ನು ದೇಶದ ಎಲ್ಲಾ ಪ್ರಜ್ಞಾವಂತರು ಪಕ್ಷ ಬೇಧ ಮರೆತು ಖಂಡಿಸಲೇಬೇಕಿದೆ ಎಂದರು.

ಮಣಿಪುರದಲ್ಲಿನ ಹಿಂಸಾಚಾರವನ್ನು ತಕ್ಷಣ ಕೊನೆಗಾಣಿಸಲು ನಮ್ಮ ಆಡಳಿತಗಾರರು ತಮ್ಮ ದುರಂಹಕಾರವನ್ನು ಬದಿಗೊತ್ತಿ ಕೆಲಸ ಮಾಡಬೇಕು. ರಾಷ್ಟ್ರಪತಿ ಆಡಳಿತವನ್ನು ತುರ್ತಾಗಿ ಜಾರಿಗೆ ತರಬೇಕು ಹಾಗೆಯೇ ಹಿಂಸಾಚಾರ ತಡೆಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಮೂಲಕ ದೇಶದ ನಾಗರೀಕರು ಆಗ್ರಹಿಸಬೇಕು ಎಂದರು.

ಜನವಾದಿ ಮಹಿಳಾ ಸಂಘಟನೆಯ ಪ್ರಭಾ ಬೆಳವಂಗಲ ಮಾತನಾಡಿ, ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಆಡಳಿತಕ್ಕೆ ಬಂದರೆ ಅಭಿವೃದ್ಧಿ ಸಾಧ್ಯ ಎನ್ನುವ ಬಿಜೆಪಿ ಮುಖಂಡರ ಸುಳ್ಳು ಆಶ್ವಾಸನೆಗೆ ಮಣಿಪುರ ರಾಜ್ಯದಲ್ಲಿನ ಹಿಂಸಾಚಾರವೇ ತಾಜಾ ಉದಾಹಣೆಯಾಗಿದೆ. ಡಬಲ್ ಇಂಜಿನ್ ಆಡಳಿತ ಇರುವ ಎಲ್ಲಾ ರಾಜ್ಯಗಳಲ್ಲೂ ಸಹ ಕೋಮುಗಲಬೆಗಳೆ ಹೆಚ್ಚಾಗಿವೆ ಹೊರತು ಅಭಿವೃದ್ಧಿಯಲ್ಲ. ಗುಜರಾತ್, ಬಾಂಬೆ, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮುಗಲಬೆಗಳಿಗೆ ಕಾರಣವಾಗಿರುವವರೆ ಇಂದು ಮಣಿಪುರ ರಾಜ್ಯದಲ್ಲಿನ ಹಿಂಸಾಚಾರಕ್ಕೂ ಕಾರಣವಾಗಿದ್ದಾರೆ ಎಂದು ದೂರಿದರು.

ಕುಕ್ಕಿ ಬಡುಕಟ್ಟು ಸಮುದಾಯವನ್ನೇ ನಾಶ ಮಾಡುವ ತಂತ್ರವನ್ನು ರೂಪಿಸಲಾಗಿದೆ. ಮಣಿಪುರ ಹಿಂಸಾಚಾರವನ್ನು ತಡೆಯುವಲ್ಲಿ ಸುಪ್ರಿಂ ಕೋರ್ಟ್ ಮಧ್ಯಪ್ರವೇಶ ಮಾಡುವವರೆಗೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಿಂಸಾಚಾರವನ್ನು ಕಂಡೂ ಕಾಣದಂತೆ ಇದ್ದವು. ಈ ಹಿಂಸಾಚಾರ ಸರ್ಕಾರಿ ಪ್ರಾಯೋಜಿತವಾಗಿತ್ತು ಎನ್ನುವುದು ಸ್ಪಷ್ಟವಾಗಿದೆ ಎಂದರು.

ಇಡೀ ವಿಶ್ವವೇ ಮಣಿಪುರದಲ್ಲಿನ ಹಿಂಸಾಚಾರವನ್ನು ಕಂಡು ಮರುಗಿದೆ. ಮಹಿಳೆಯರ ಬತ್ತಲೆ ಮೆರಣಿಗೆಯಿಂದಾಗಿ ದೇಶದ ಗೌರವ ಕುಂದಿದೆ. ಇಷ್ಟಾದರು ಸಹ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ವಿರೋಧ ಪಕ್ಷಗಳು ಧ್ವನಿ ಎತ್ತುವವರೆಗೂ ಈ ಬಗ್ಗೆ ಮಾತನಾಡದೇ ಹೋಗಿದ್ದು ದುರಂತದ ಸಂಗತಿ. ಈಶಾನ್ಯ ಭಾರತದ 7 ರಾಜ್ಯಗಳ ಪ್ರಗತಿಗೆ ಎಚ್. ಡಿ. ದೇವೇಗೌಡರು ಪ್ರಧಾನಿಗಳಾಗಿದ್ದಾಗ ವಿಶೇಷವಾದ ಪ್ಯಾಕೇಜ್ ನೀಡಿದ್ದು ಹೊರತು, ಇಲ್ಲಿಯವರೆಗೂ ಯಾರೂ ಸಹ ಈ ರಾಜ್ಯಗಳ ಅಭಿವೃದ್ಧಿಗೆ ಆದ್ಯತೆಯನ್ನೇ ನೀಡಿಲ್ಲ ಎಂದರು.

ವಿಚಾರ ಸಂಕಿರಣದಲ್ಲಿ ಪ್ರಸ್ತಾವಿಕವಾಗಿ ಕನ್ನಡ ಜಾಗೃತ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿದರು.

ಈ ವೇಳೆ ನಗರದ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

9 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

12 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

12 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

18 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

19 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

22 hours ago