ಕೆಲ ವಿಷಪೂರಿತ ಮನಸ್ಸುಗಳು ಮಣಿಪುರದ ಹಿಂಸೆಗೆ ಕಾರಣ- ಬೆಂ. ಉ. ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್

ವಿಷಪೂರಿತ ಮನಸ್ಸುಗಳು ಮಣಿಪುರದಲ್ಲಿ ಹಿಂಸೆಯನ್ನು ಪ್ರಚೋಧಿಸುತ್ತಿವೆ. ಇದರ ವಿರುದ್ಧ ಒಗ್ಗಟ್ಟಿನ ಅಹಿಂಸಾತ್ಮಕ ಹೋರಾಟಗಳ ತುರ್ತು ಅಗತ್ಯವಿದೆ ಎಂದು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್ ಹೇಳಿದರು.

ನಗರದ ಕನ್ನಡ ಜಾಗೃತ ಪರಿಷತ್ ವತಿಯಿಂದ ಸೋಮವಾರ ಜಾಗೃತ ಭವನದಲ್ಲಿ ನಡೆದ ‘ಮಣಿಪುರದಲ್ಲಿ ಹಿಂಸಾಚಾರ: ಅಸಲಿ ವಿಷಯವೇನು?’ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಮಣಿಪುರದಲ್ಲಿ ರಾಜ್ಯ ಸರ್ಕಾರದ ಚಲ್ಲಾಟದಿಂದಾಗಿಯೇ ಹಿಂಸಾಚಾರ ಮಿತಿಮೀರಲು ಕಾರಣವಾಗಿದೆ. ಅಲ್ಲಿನ ಪ್ಲಾಟಿನಂ ಖನಿಜ ಸಂಪತ್ತನ್ನು ಖಾಸಗಿ ಕಂಪನಿಯೊಂದಕ್ಕೆ ನೀಡುವ ಸಲುವಾಗಿ ಮೈತೇಯಿ ಹಾಗೂ ಕುಕ್ಕಿ ಸಮುದಾಯಗಳ ನಡುವೆ ಕೋಮುಗಲಬೆಯನ್ನು ಉಂಟುಮಾಡಲಾಗುತ್ತಿದೆ. ಇದರಿಂದ ಸ್ಥಳೀಯರು ಪ್ಲಾಟಿನಂ ಖನಿಜ ಗಣಿಗಾರಿಕೆಗೆ ವಿರೋಧ ವ್ಯಕ್ತಪಡಿಸದಂತೆ ತಡೆಯುವ ಹುನ್ನಾರವು ಹಿಂಸಾಚಾರದ ಹಿಂದೆ ಹಡಗಿದೆ ಎನ್ನುವುದನ್ನು ಇತ್ತೀಚೆಗೆ ಕೆಲವು ಪತ್ರಿಕೆಗಳಲ್ಲಿ ವರದಿಯಾಗಿವೆ. ತಮ್ಮ ರಾಜಕೀಯ ಹಾಗೂ ಆರ್ಥಿಕ ಚಟುವಟಿಕೆಗಾಗಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಮಹಿಳೆಯನ್ನು ಹೋರಾಟದ ಗುರಾಣಿಯನ್ನಾಗಿ ಮಾಡಿಕೊಂಡಿರುವ ಮಾನವೀಯ ಘಟನೆಯನ್ನು ದೇಶದ ಎಲ್ಲಾ ಪ್ರಜ್ಞಾವಂತರು ಪಕ್ಷ ಬೇಧ ಮರೆತು ಖಂಡಿಸಲೇಬೇಕಿದೆ ಎಂದರು.

ಮಣಿಪುರದಲ್ಲಿನ ಹಿಂಸಾಚಾರವನ್ನು ತಕ್ಷಣ ಕೊನೆಗಾಣಿಸಲು ನಮ್ಮ ಆಡಳಿತಗಾರರು ತಮ್ಮ ದುರಂಹಕಾರವನ್ನು ಬದಿಗೊತ್ತಿ ಕೆಲಸ ಮಾಡಬೇಕು. ರಾಷ್ಟ್ರಪತಿ ಆಡಳಿತವನ್ನು ತುರ್ತಾಗಿ ಜಾರಿಗೆ ತರಬೇಕು ಹಾಗೆಯೇ ಹಿಂಸಾಚಾರ ತಡೆಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಮೂಲಕ ದೇಶದ ನಾಗರೀಕರು ಆಗ್ರಹಿಸಬೇಕು ಎಂದರು.

ಜನವಾದಿ ಮಹಿಳಾ ಸಂಘಟನೆಯ ಪ್ರಭಾ ಬೆಳವಂಗಲ ಮಾತನಾಡಿ, ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಆಡಳಿತಕ್ಕೆ ಬಂದರೆ ಅಭಿವೃದ್ಧಿ ಸಾಧ್ಯ ಎನ್ನುವ ಬಿಜೆಪಿ ಮುಖಂಡರ ಸುಳ್ಳು ಆಶ್ವಾಸನೆಗೆ ಮಣಿಪುರ ರಾಜ್ಯದಲ್ಲಿನ ಹಿಂಸಾಚಾರವೇ ತಾಜಾ ಉದಾಹಣೆಯಾಗಿದೆ. ಡಬಲ್ ಇಂಜಿನ್ ಆಡಳಿತ ಇರುವ ಎಲ್ಲಾ ರಾಜ್ಯಗಳಲ್ಲೂ ಸಹ ಕೋಮುಗಲಬೆಗಳೆ ಹೆಚ್ಚಾಗಿವೆ ಹೊರತು ಅಭಿವೃದ್ಧಿಯಲ್ಲ. ಗುಜರಾತ್, ಬಾಂಬೆ, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮುಗಲಬೆಗಳಿಗೆ ಕಾರಣವಾಗಿರುವವರೆ ಇಂದು ಮಣಿಪುರ ರಾಜ್ಯದಲ್ಲಿನ ಹಿಂಸಾಚಾರಕ್ಕೂ ಕಾರಣವಾಗಿದ್ದಾರೆ ಎಂದು ದೂರಿದರು.

ಕುಕ್ಕಿ ಬಡುಕಟ್ಟು ಸಮುದಾಯವನ್ನೇ ನಾಶ ಮಾಡುವ ತಂತ್ರವನ್ನು ರೂಪಿಸಲಾಗಿದೆ. ಮಣಿಪುರ ಹಿಂಸಾಚಾರವನ್ನು ತಡೆಯುವಲ್ಲಿ ಸುಪ್ರಿಂ ಕೋರ್ಟ್ ಮಧ್ಯಪ್ರವೇಶ ಮಾಡುವವರೆಗೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಿಂಸಾಚಾರವನ್ನು ಕಂಡೂ ಕಾಣದಂತೆ ಇದ್ದವು. ಈ ಹಿಂಸಾಚಾರ ಸರ್ಕಾರಿ ಪ್ರಾಯೋಜಿತವಾಗಿತ್ತು ಎನ್ನುವುದು ಸ್ಪಷ್ಟವಾಗಿದೆ ಎಂದರು.

ಇಡೀ ವಿಶ್ವವೇ ಮಣಿಪುರದಲ್ಲಿನ ಹಿಂಸಾಚಾರವನ್ನು ಕಂಡು ಮರುಗಿದೆ. ಮಹಿಳೆಯರ ಬತ್ತಲೆ ಮೆರಣಿಗೆಯಿಂದಾಗಿ ದೇಶದ ಗೌರವ ಕುಂದಿದೆ. ಇಷ್ಟಾದರು ಸಹ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ವಿರೋಧ ಪಕ್ಷಗಳು ಧ್ವನಿ ಎತ್ತುವವರೆಗೂ ಈ ಬಗ್ಗೆ ಮಾತನಾಡದೇ ಹೋಗಿದ್ದು ದುರಂತದ ಸಂಗತಿ. ಈಶಾನ್ಯ ಭಾರತದ 7 ರಾಜ್ಯಗಳ ಪ್ರಗತಿಗೆ ಎಚ್. ಡಿ. ದೇವೇಗೌಡರು ಪ್ರಧಾನಿಗಳಾಗಿದ್ದಾಗ ವಿಶೇಷವಾದ ಪ್ಯಾಕೇಜ್ ನೀಡಿದ್ದು ಹೊರತು, ಇಲ್ಲಿಯವರೆಗೂ ಯಾರೂ ಸಹ ಈ ರಾಜ್ಯಗಳ ಅಭಿವೃದ್ಧಿಗೆ ಆದ್ಯತೆಯನ್ನೇ ನೀಡಿಲ್ಲ ಎಂದರು.

ವಿಚಾರ ಸಂಕಿರಣದಲ್ಲಿ ಪ್ರಸ್ತಾವಿಕವಾಗಿ ಕನ್ನಡ ಜಾಗೃತ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿದರು.

ಈ ವೇಳೆ ನಗರದ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

2 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

4 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

5 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

9 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

20 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

20 hours ago