ಕೆಲ ವಿಷಪೂರಿತ ಮನಸ್ಸುಗಳು ಮಣಿಪುರದ ಹಿಂಸೆಗೆ ಕಾರಣ- ಬೆಂ. ಉ. ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್

ವಿಷಪೂರಿತ ಮನಸ್ಸುಗಳು ಮಣಿಪುರದಲ್ಲಿ ಹಿಂಸೆಯನ್ನು ಪ್ರಚೋಧಿಸುತ್ತಿವೆ. ಇದರ ವಿರುದ್ಧ ಒಗ್ಗಟ್ಟಿನ ಅಹಿಂಸಾತ್ಮಕ ಹೋರಾಟಗಳ ತುರ್ತು ಅಗತ್ಯವಿದೆ ಎಂದು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್ ಹೇಳಿದರು.

ನಗರದ ಕನ್ನಡ ಜಾಗೃತ ಪರಿಷತ್ ವತಿಯಿಂದ ಸೋಮವಾರ ಜಾಗೃತ ಭವನದಲ್ಲಿ ನಡೆದ ‘ಮಣಿಪುರದಲ್ಲಿ ಹಿಂಸಾಚಾರ: ಅಸಲಿ ವಿಷಯವೇನು?’ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಮಣಿಪುರದಲ್ಲಿ ರಾಜ್ಯ ಸರ್ಕಾರದ ಚಲ್ಲಾಟದಿಂದಾಗಿಯೇ ಹಿಂಸಾಚಾರ ಮಿತಿಮೀರಲು ಕಾರಣವಾಗಿದೆ. ಅಲ್ಲಿನ ಪ್ಲಾಟಿನಂ ಖನಿಜ ಸಂಪತ್ತನ್ನು ಖಾಸಗಿ ಕಂಪನಿಯೊಂದಕ್ಕೆ ನೀಡುವ ಸಲುವಾಗಿ ಮೈತೇಯಿ ಹಾಗೂ ಕುಕ್ಕಿ ಸಮುದಾಯಗಳ ನಡುವೆ ಕೋಮುಗಲಬೆಯನ್ನು ಉಂಟುಮಾಡಲಾಗುತ್ತಿದೆ. ಇದರಿಂದ ಸ್ಥಳೀಯರು ಪ್ಲಾಟಿನಂ ಖನಿಜ ಗಣಿಗಾರಿಕೆಗೆ ವಿರೋಧ ವ್ಯಕ್ತಪಡಿಸದಂತೆ ತಡೆಯುವ ಹುನ್ನಾರವು ಹಿಂಸಾಚಾರದ ಹಿಂದೆ ಹಡಗಿದೆ ಎನ್ನುವುದನ್ನು ಇತ್ತೀಚೆಗೆ ಕೆಲವು ಪತ್ರಿಕೆಗಳಲ್ಲಿ ವರದಿಯಾಗಿವೆ. ತಮ್ಮ ರಾಜಕೀಯ ಹಾಗೂ ಆರ್ಥಿಕ ಚಟುವಟಿಕೆಗಾಗಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಮಹಿಳೆಯನ್ನು ಹೋರಾಟದ ಗುರಾಣಿಯನ್ನಾಗಿ ಮಾಡಿಕೊಂಡಿರುವ ಮಾನವೀಯ ಘಟನೆಯನ್ನು ದೇಶದ ಎಲ್ಲಾ ಪ್ರಜ್ಞಾವಂತರು ಪಕ್ಷ ಬೇಧ ಮರೆತು ಖಂಡಿಸಲೇಬೇಕಿದೆ ಎಂದರು.

ಮಣಿಪುರದಲ್ಲಿನ ಹಿಂಸಾಚಾರವನ್ನು ತಕ್ಷಣ ಕೊನೆಗಾಣಿಸಲು ನಮ್ಮ ಆಡಳಿತಗಾರರು ತಮ್ಮ ದುರಂಹಕಾರವನ್ನು ಬದಿಗೊತ್ತಿ ಕೆಲಸ ಮಾಡಬೇಕು. ರಾಷ್ಟ್ರಪತಿ ಆಡಳಿತವನ್ನು ತುರ್ತಾಗಿ ಜಾರಿಗೆ ತರಬೇಕು ಹಾಗೆಯೇ ಹಿಂಸಾಚಾರ ತಡೆಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಮೂಲಕ ದೇಶದ ನಾಗರೀಕರು ಆಗ್ರಹಿಸಬೇಕು ಎಂದರು.

ಜನವಾದಿ ಮಹಿಳಾ ಸಂಘಟನೆಯ ಪ್ರಭಾ ಬೆಳವಂಗಲ ಮಾತನಾಡಿ, ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಆಡಳಿತಕ್ಕೆ ಬಂದರೆ ಅಭಿವೃದ್ಧಿ ಸಾಧ್ಯ ಎನ್ನುವ ಬಿಜೆಪಿ ಮುಖಂಡರ ಸುಳ್ಳು ಆಶ್ವಾಸನೆಗೆ ಮಣಿಪುರ ರಾಜ್ಯದಲ್ಲಿನ ಹಿಂಸಾಚಾರವೇ ತಾಜಾ ಉದಾಹಣೆಯಾಗಿದೆ. ಡಬಲ್ ಇಂಜಿನ್ ಆಡಳಿತ ಇರುವ ಎಲ್ಲಾ ರಾಜ್ಯಗಳಲ್ಲೂ ಸಹ ಕೋಮುಗಲಬೆಗಳೆ ಹೆಚ್ಚಾಗಿವೆ ಹೊರತು ಅಭಿವೃದ್ಧಿಯಲ್ಲ. ಗುಜರಾತ್, ಬಾಂಬೆ, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮುಗಲಬೆಗಳಿಗೆ ಕಾರಣವಾಗಿರುವವರೆ ಇಂದು ಮಣಿಪುರ ರಾಜ್ಯದಲ್ಲಿನ ಹಿಂಸಾಚಾರಕ್ಕೂ ಕಾರಣವಾಗಿದ್ದಾರೆ ಎಂದು ದೂರಿದರು.

ಕುಕ್ಕಿ ಬಡುಕಟ್ಟು ಸಮುದಾಯವನ್ನೇ ನಾಶ ಮಾಡುವ ತಂತ್ರವನ್ನು ರೂಪಿಸಲಾಗಿದೆ. ಮಣಿಪುರ ಹಿಂಸಾಚಾರವನ್ನು ತಡೆಯುವಲ್ಲಿ ಸುಪ್ರಿಂ ಕೋರ್ಟ್ ಮಧ್ಯಪ್ರವೇಶ ಮಾಡುವವರೆಗೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಿಂಸಾಚಾರವನ್ನು ಕಂಡೂ ಕಾಣದಂತೆ ಇದ್ದವು. ಈ ಹಿಂಸಾಚಾರ ಸರ್ಕಾರಿ ಪ್ರಾಯೋಜಿತವಾಗಿತ್ತು ಎನ್ನುವುದು ಸ್ಪಷ್ಟವಾಗಿದೆ ಎಂದರು.

ಇಡೀ ವಿಶ್ವವೇ ಮಣಿಪುರದಲ್ಲಿನ ಹಿಂಸಾಚಾರವನ್ನು ಕಂಡು ಮರುಗಿದೆ. ಮಹಿಳೆಯರ ಬತ್ತಲೆ ಮೆರಣಿಗೆಯಿಂದಾಗಿ ದೇಶದ ಗೌರವ ಕುಂದಿದೆ. ಇಷ್ಟಾದರು ಸಹ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ವಿರೋಧ ಪಕ್ಷಗಳು ಧ್ವನಿ ಎತ್ತುವವರೆಗೂ ಈ ಬಗ್ಗೆ ಮಾತನಾಡದೇ ಹೋಗಿದ್ದು ದುರಂತದ ಸಂಗತಿ. ಈಶಾನ್ಯ ಭಾರತದ 7 ರಾಜ್ಯಗಳ ಪ್ರಗತಿಗೆ ಎಚ್. ಡಿ. ದೇವೇಗೌಡರು ಪ್ರಧಾನಿಗಳಾಗಿದ್ದಾಗ ವಿಶೇಷವಾದ ಪ್ಯಾಕೇಜ್ ನೀಡಿದ್ದು ಹೊರತು, ಇಲ್ಲಿಯವರೆಗೂ ಯಾರೂ ಸಹ ಈ ರಾಜ್ಯಗಳ ಅಭಿವೃದ್ಧಿಗೆ ಆದ್ಯತೆಯನ್ನೇ ನೀಡಿಲ್ಲ ಎಂದರು.

ವಿಚಾರ ಸಂಕಿರಣದಲ್ಲಿ ಪ್ರಸ್ತಾವಿಕವಾಗಿ ಕನ್ನಡ ಜಾಗೃತ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿದರು.

ಈ ವೇಳೆ ನಗರದ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

13 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago