ಕೆಲ ವಿಷಪೂರಿತ ಮನಸ್ಸುಗಳು ಮಣಿಪುರದ ಹಿಂಸೆಗೆ ಕಾರಣ- ಬೆಂ. ಉ. ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್

ವಿಷಪೂರಿತ ಮನಸ್ಸುಗಳು ಮಣಿಪುರದಲ್ಲಿ ಹಿಂಸೆಯನ್ನು ಪ್ರಚೋಧಿಸುತ್ತಿವೆ. ಇದರ ವಿರುದ್ಧ ಒಗ್ಗಟ್ಟಿನ ಅಹಿಂಸಾತ್ಮಕ ಹೋರಾಟಗಳ ತುರ್ತು ಅಗತ್ಯವಿದೆ ಎಂದು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್ ಹೇಳಿದರು.

ನಗರದ ಕನ್ನಡ ಜಾಗೃತ ಪರಿಷತ್ ವತಿಯಿಂದ ಸೋಮವಾರ ಜಾಗೃತ ಭವನದಲ್ಲಿ ನಡೆದ ‘ಮಣಿಪುರದಲ್ಲಿ ಹಿಂಸಾಚಾರ: ಅಸಲಿ ವಿಷಯವೇನು?’ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಮಣಿಪುರದಲ್ಲಿ ರಾಜ್ಯ ಸರ್ಕಾರದ ಚಲ್ಲಾಟದಿಂದಾಗಿಯೇ ಹಿಂಸಾಚಾರ ಮಿತಿಮೀರಲು ಕಾರಣವಾಗಿದೆ. ಅಲ್ಲಿನ ಪ್ಲಾಟಿನಂ ಖನಿಜ ಸಂಪತ್ತನ್ನು ಖಾಸಗಿ ಕಂಪನಿಯೊಂದಕ್ಕೆ ನೀಡುವ ಸಲುವಾಗಿ ಮೈತೇಯಿ ಹಾಗೂ ಕುಕ್ಕಿ ಸಮುದಾಯಗಳ ನಡುವೆ ಕೋಮುಗಲಬೆಯನ್ನು ಉಂಟುಮಾಡಲಾಗುತ್ತಿದೆ. ಇದರಿಂದ ಸ್ಥಳೀಯರು ಪ್ಲಾಟಿನಂ ಖನಿಜ ಗಣಿಗಾರಿಕೆಗೆ ವಿರೋಧ ವ್ಯಕ್ತಪಡಿಸದಂತೆ ತಡೆಯುವ ಹುನ್ನಾರವು ಹಿಂಸಾಚಾರದ ಹಿಂದೆ ಹಡಗಿದೆ ಎನ್ನುವುದನ್ನು ಇತ್ತೀಚೆಗೆ ಕೆಲವು ಪತ್ರಿಕೆಗಳಲ್ಲಿ ವರದಿಯಾಗಿವೆ. ತಮ್ಮ ರಾಜಕೀಯ ಹಾಗೂ ಆರ್ಥಿಕ ಚಟುವಟಿಕೆಗಾಗಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಮಹಿಳೆಯನ್ನು ಹೋರಾಟದ ಗುರಾಣಿಯನ್ನಾಗಿ ಮಾಡಿಕೊಂಡಿರುವ ಮಾನವೀಯ ಘಟನೆಯನ್ನು ದೇಶದ ಎಲ್ಲಾ ಪ್ರಜ್ಞಾವಂತರು ಪಕ್ಷ ಬೇಧ ಮರೆತು ಖಂಡಿಸಲೇಬೇಕಿದೆ ಎಂದರು.

ಮಣಿಪುರದಲ್ಲಿನ ಹಿಂಸಾಚಾರವನ್ನು ತಕ್ಷಣ ಕೊನೆಗಾಣಿಸಲು ನಮ್ಮ ಆಡಳಿತಗಾರರು ತಮ್ಮ ದುರಂಹಕಾರವನ್ನು ಬದಿಗೊತ್ತಿ ಕೆಲಸ ಮಾಡಬೇಕು. ರಾಷ್ಟ್ರಪತಿ ಆಡಳಿತವನ್ನು ತುರ್ತಾಗಿ ಜಾರಿಗೆ ತರಬೇಕು ಹಾಗೆಯೇ ಹಿಂಸಾಚಾರ ತಡೆಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಮೂಲಕ ದೇಶದ ನಾಗರೀಕರು ಆಗ್ರಹಿಸಬೇಕು ಎಂದರು.

ಜನವಾದಿ ಮಹಿಳಾ ಸಂಘಟನೆಯ ಪ್ರಭಾ ಬೆಳವಂಗಲ ಮಾತನಾಡಿ, ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಆಡಳಿತಕ್ಕೆ ಬಂದರೆ ಅಭಿವೃದ್ಧಿ ಸಾಧ್ಯ ಎನ್ನುವ ಬಿಜೆಪಿ ಮುಖಂಡರ ಸುಳ್ಳು ಆಶ್ವಾಸನೆಗೆ ಮಣಿಪುರ ರಾಜ್ಯದಲ್ಲಿನ ಹಿಂಸಾಚಾರವೇ ತಾಜಾ ಉದಾಹಣೆಯಾಗಿದೆ. ಡಬಲ್ ಇಂಜಿನ್ ಆಡಳಿತ ಇರುವ ಎಲ್ಲಾ ರಾಜ್ಯಗಳಲ್ಲೂ ಸಹ ಕೋಮುಗಲಬೆಗಳೆ ಹೆಚ್ಚಾಗಿವೆ ಹೊರತು ಅಭಿವೃದ್ಧಿಯಲ್ಲ. ಗುಜರಾತ್, ಬಾಂಬೆ, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮುಗಲಬೆಗಳಿಗೆ ಕಾರಣವಾಗಿರುವವರೆ ಇಂದು ಮಣಿಪುರ ರಾಜ್ಯದಲ್ಲಿನ ಹಿಂಸಾಚಾರಕ್ಕೂ ಕಾರಣವಾಗಿದ್ದಾರೆ ಎಂದು ದೂರಿದರು.

ಕುಕ್ಕಿ ಬಡುಕಟ್ಟು ಸಮುದಾಯವನ್ನೇ ನಾಶ ಮಾಡುವ ತಂತ್ರವನ್ನು ರೂಪಿಸಲಾಗಿದೆ. ಮಣಿಪುರ ಹಿಂಸಾಚಾರವನ್ನು ತಡೆಯುವಲ್ಲಿ ಸುಪ್ರಿಂ ಕೋರ್ಟ್ ಮಧ್ಯಪ್ರವೇಶ ಮಾಡುವವರೆಗೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಿಂಸಾಚಾರವನ್ನು ಕಂಡೂ ಕಾಣದಂತೆ ಇದ್ದವು. ಈ ಹಿಂಸಾಚಾರ ಸರ್ಕಾರಿ ಪ್ರಾಯೋಜಿತವಾಗಿತ್ತು ಎನ್ನುವುದು ಸ್ಪಷ್ಟವಾಗಿದೆ ಎಂದರು.

ಇಡೀ ವಿಶ್ವವೇ ಮಣಿಪುರದಲ್ಲಿನ ಹಿಂಸಾಚಾರವನ್ನು ಕಂಡು ಮರುಗಿದೆ. ಮಹಿಳೆಯರ ಬತ್ತಲೆ ಮೆರಣಿಗೆಯಿಂದಾಗಿ ದೇಶದ ಗೌರವ ಕುಂದಿದೆ. ಇಷ್ಟಾದರು ಸಹ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ವಿರೋಧ ಪಕ್ಷಗಳು ಧ್ವನಿ ಎತ್ತುವವರೆಗೂ ಈ ಬಗ್ಗೆ ಮಾತನಾಡದೇ ಹೋಗಿದ್ದು ದುರಂತದ ಸಂಗತಿ. ಈಶಾನ್ಯ ಭಾರತದ 7 ರಾಜ್ಯಗಳ ಪ್ರಗತಿಗೆ ಎಚ್. ಡಿ. ದೇವೇಗೌಡರು ಪ್ರಧಾನಿಗಳಾಗಿದ್ದಾಗ ವಿಶೇಷವಾದ ಪ್ಯಾಕೇಜ್ ನೀಡಿದ್ದು ಹೊರತು, ಇಲ್ಲಿಯವರೆಗೂ ಯಾರೂ ಸಹ ಈ ರಾಜ್ಯಗಳ ಅಭಿವೃದ್ಧಿಗೆ ಆದ್ಯತೆಯನ್ನೇ ನೀಡಿಲ್ಲ ಎಂದರು.

ವಿಚಾರ ಸಂಕಿರಣದಲ್ಲಿ ಪ್ರಸ್ತಾವಿಕವಾಗಿ ಕನ್ನಡ ಜಾಗೃತ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿದರು.

ಈ ವೇಳೆ ನಗರದ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

6 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

9 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

10 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

12 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

13 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

14 hours ago