ಕೆಲ ವಿಷಪೂರಿತ ಮನಸ್ಸುಗಳು ಮಣಿಪುರದ ಹಿಂಸೆಗೆ ಕಾರಣ- ಬೆಂ. ಉ. ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್

ವಿಷಪೂರಿತ ಮನಸ್ಸುಗಳು ಮಣಿಪುರದಲ್ಲಿ ಹಿಂಸೆಯನ್ನು ಪ್ರಚೋಧಿಸುತ್ತಿವೆ. ಇದರ ವಿರುದ್ಧ ಒಗ್ಗಟ್ಟಿನ ಅಹಿಂಸಾತ್ಮಕ ಹೋರಾಟಗಳ ತುರ್ತು ಅಗತ್ಯವಿದೆ ಎಂದು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್ ಹೇಳಿದರು.

ನಗರದ ಕನ್ನಡ ಜಾಗೃತ ಪರಿಷತ್ ವತಿಯಿಂದ ಸೋಮವಾರ ಜಾಗೃತ ಭವನದಲ್ಲಿ ನಡೆದ ‘ಮಣಿಪುರದಲ್ಲಿ ಹಿಂಸಾಚಾರ: ಅಸಲಿ ವಿಷಯವೇನು?’ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಮಣಿಪುರದಲ್ಲಿ ರಾಜ್ಯ ಸರ್ಕಾರದ ಚಲ್ಲಾಟದಿಂದಾಗಿಯೇ ಹಿಂಸಾಚಾರ ಮಿತಿಮೀರಲು ಕಾರಣವಾಗಿದೆ. ಅಲ್ಲಿನ ಪ್ಲಾಟಿನಂ ಖನಿಜ ಸಂಪತ್ತನ್ನು ಖಾಸಗಿ ಕಂಪನಿಯೊಂದಕ್ಕೆ ನೀಡುವ ಸಲುವಾಗಿ ಮೈತೇಯಿ ಹಾಗೂ ಕುಕ್ಕಿ ಸಮುದಾಯಗಳ ನಡುವೆ ಕೋಮುಗಲಬೆಯನ್ನು ಉಂಟುಮಾಡಲಾಗುತ್ತಿದೆ. ಇದರಿಂದ ಸ್ಥಳೀಯರು ಪ್ಲಾಟಿನಂ ಖನಿಜ ಗಣಿಗಾರಿಕೆಗೆ ವಿರೋಧ ವ್ಯಕ್ತಪಡಿಸದಂತೆ ತಡೆಯುವ ಹುನ್ನಾರವು ಹಿಂಸಾಚಾರದ ಹಿಂದೆ ಹಡಗಿದೆ ಎನ್ನುವುದನ್ನು ಇತ್ತೀಚೆಗೆ ಕೆಲವು ಪತ್ರಿಕೆಗಳಲ್ಲಿ ವರದಿಯಾಗಿವೆ. ತಮ್ಮ ರಾಜಕೀಯ ಹಾಗೂ ಆರ್ಥಿಕ ಚಟುವಟಿಕೆಗಾಗಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಮಹಿಳೆಯನ್ನು ಹೋರಾಟದ ಗುರಾಣಿಯನ್ನಾಗಿ ಮಾಡಿಕೊಂಡಿರುವ ಮಾನವೀಯ ಘಟನೆಯನ್ನು ದೇಶದ ಎಲ್ಲಾ ಪ್ರಜ್ಞಾವಂತರು ಪಕ್ಷ ಬೇಧ ಮರೆತು ಖಂಡಿಸಲೇಬೇಕಿದೆ ಎಂದರು.

ಮಣಿಪುರದಲ್ಲಿನ ಹಿಂಸಾಚಾರವನ್ನು ತಕ್ಷಣ ಕೊನೆಗಾಣಿಸಲು ನಮ್ಮ ಆಡಳಿತಗಾರರು ತಮ್ಮ ದುರಂಹಕಾರವನ್ನು ಬದಿಗೊತ್ತಿ ಕೆಲಸ ಮಾಡಬೇಕು. ರಾಷ್ಟ್ರಪತಿ ಆಡಳಿತವನ್ನು ತುರ್ತಾಗಿ ಜಾರಿಗೆ ತರಬೇಕು ಹಾಗೆಯೇ ಹಿಂಸಾಚಾರ ತಡೆಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಮೂಲಕ ದೇಶದ ನಾಗರೀಕರು ಆಗ್ರಹಿಸಬೇಕು ಎಂದರು.

ಜನವಾದಿ ಮಹಿಳಾ ಸಂಘಟನೆಯ ಪ್ರಭಾ ಬೆಳವಂಗಲ ಮಾತನಾಡಿ, ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಆಡಳಿತಕ್ಕೆ ಬಂದರೆ ಅಭಿವೃದ್ಧಿ ಸಾಧ್ಯ ಎನ್ನುವ ಬಿಜೆಪಿ ಮುಖಂಡರ ಸುಳ್ಳು ಆಶ್ವಾಸನೆಗೆ ಮಣಿಪುರ ರಾಜ್ಯದಲ್ಲಿನ ಹಿಂಸಾಚಾರವೇ ತಾಜಾ ಉದಾಹಣೆಯಾಗಿದೆ. ಡಬಲ್ ಇಂಜಿನ್ ಆಡಳಿತ ಇರುವ ಎಲ್ಲಾ ರಾಜ್ಯಗಳಲ್ಲೂ ಸಹ ಕೋಮುಗಲಬೆಗಳೆ ಹೆಚ್ಚಾಗಿವೆ ಹೊರತು ಅಭಿವೃದ್ಧಿಯಲ್ಲ. ಗುಜರಾತ್, ಬಾಂಬೆ, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮುಗಲಬೆಗಳಿಗೆ ಕಾರಣವಾಗಿರುವವರೆ ಇಂದು ಮಣಿಪುರ ರಾಜ್ಯದಲ್ಲಿನ ಹಿಂಸಾಚಾರಕ್ಕೂ ಕಾರಣವಾಗಿದ್ದಾರೆ ಎಂದು ದೂರಿದರು.

ಕುಕ್ಕಿ ಬಡುಕಟ್ಟು ಸಮುದಾಯವನ್ನೇ ನಾಶ ಮಾಡುವ ತಂತ್ರವನ್ನು ರೂಪಿಸಲಾಗಿದೆ. ಮಣಿಪುರ ಹಿಂಸಾಚಾರವನ್ನು ತಡೆಯುವಲ್ಲಿ ಸುಪ್ರಿಂ ಕೋರ್ಟ್ ಮಧ್ಯಪ್ರವೇಶ ಮಾಡುವವರೆಗೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಿಂಸಾಚಾರವನ್ನು ಕಂಡೂ ಕಾಣದಂತೆ ಇದ್ದವು. ಈ ಹಿಂಸಾಚಾರ ಸರ್ಕಾರಿ ಪ್ರಾಯೋಜಿತವಾಗಿತ್ತು ಎನ್ನುವುದು ಸ್ಪಷ್ಟವಾಗಿದೆ ಎಂದರು.

ಇಡೀ ವಿಶ್ವವೇ ಮಣಿಪುರದಲ್ಲಿನ ಹಿಂಸಾಚಾರವನ್ನು ಕಂಡು ಮರುಗಿದೆ. ಮಹಿಳೆಯರ ಬತ್ತಲೆ ಮೆರಣಿಗೆಯಿಂದಾಗಿ ದೇಶದ ಗೌರವ ಕುಂದಿದೆ. ಇಷ್ಟಾದರು ಸಹ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ವಿರೋಧ ಪಕ್ಷಗಳು ಧ್ವನಿ ಎತ್ತುವವರೆಗೂ ಈ ಬಗ್ಗೆ ಮಾತನಾಡದೇ ಹೋಗಿದ್ದು ದುರಂತದ ಸಂಗತಿ. ಈಶಾನ್ಯ ಭಾರತದ 7 ರಾಜ್ಯಗಳ ಪ್ರಗತಿಗೆ ಎಚ್. ಡಿ. ದೇವೇಗೌಡರು ಪ್ರಧಾನಿಗಳಾಗಿದ್ದಾಗ ವಿಶೇಷವಾದ ಪ್ಯಾಕೇಜ್ ನೀಡಿದ್ದು ಹೊರತು, ಇಲ್ಲಿಯವರೆಗೂ ಯಾರೂ ಸಹ ಈ ರಾಜ್ಯಗಳ ಅಭಿವೃದ್ಧಿಗೆ ಆದ್ಯತೆಯನ್ನೇ ನೀಡಿಲ್ಲ ಎಂದರು.

ವಿಚಾರ ಸಂಕಿರಣದಲ್ಲಿ ಪ್ರಸ್ತಾವಿಕವಾಗಿ ಕನ್ನಡ ಜಾಗೃತ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿದರು.

ಈ ವೇಳೆ ನಗರದ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago