ಕೆಳಗಿನನಾಯಕರಾಂಡಹಳ್ಳಿಗೆ ದೌಡಾಯಿಸಿದ ಚುನಾವಣಾಧಿಕಾರಿ ತೇಜಸ್ ಕುಮಾರ್: ಮತದಾನ ಬಹಿಷ್ಕಾರ ಹಿಂಪಡೆಯುವಂತೆ ಮನವಿ

ದೊಡ್ಡಬಳ್ಳಾಪುರ: ಅರಣ್ಯ ಇಲಾಖೆ ಕಿರುಕುಳ ವಿರೋಧಿಸಿ 2023ರ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದ ತಾಲೂಕಿನ ತೂಬಗೆರೆ ಹೋಬಳಿ ಕೆಳಗಿನನಾಯಕರಾಂಡಹಳ್ಳಿ ಗ್ರಾಮಸ್ಥರು, ಅಧಿಕಾರಿಗಳ‌ ಸಂಧಾನದ ಬಳಿಕ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.

ಭಾನುವಾರ ರಾತ್ರಿ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಉಪವಿಭಾಗಾಧಿಕಾರಿಯೂ ಆಗಿರುವ ಚುನಾವಣಾಧಿಕಾರಿ ಎನ್.ತೇಜಸ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಸ್ಥರ ಅಹವಾಲು ಆಲಿಸಿತು.

ಗ್ರಾಮದ ಸರ್ವೇ ನಂ.8 ರಲ್ಲಿ‌ ಅರಣ್ಯ ಇಲಾಖೆ ಹೊರತುಪಡಿಸಿ ಜಾಗದಲ್ಲಿ 50ಕ್ಕೂ ಹೆಚ್ಚು ಮಂದಿ ಉಳುಮೆ‌ ಮಾಡಿಕೊಂಡಿದ್ದಾರೆ. ಕಂದಾಯ ಇಲಾಖೆ ನೀಡಿರುವ ಸಾಗುವಳಿ ಚೀಟಿಯೂ ಇದೆ.‌ ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಭೂಮಿ ನೀಡಲು ಸಾಧ್ಯವಾಗದಿದ್ದರೆ ಗ್ರಾಮದ ಎಲ್ಲರಿಗೂ ದಯಾಮರಣಕ್ಕೆ ಅವಕಾಶ ನೀಡಿ ಎಂದು ಮುಖಂಡರಾದ ಕೃಷ್ಣನಾಯಕ, ಎನ್.ಪ್ರಸಾದ್, ರಾಜಾರಾಮನಾಯಕ, ಎಸ್.ಎಸ್.ಘಾಟಿ‌‌ ಗ್ರಾ.ಪಂ. ಅಧ್ಯಕ್ಷ ಭಾರತಿಬಾಯಿ ಅಲವತ್ತುಕೊಂಡರು.

ಆಗ ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ಅವರು ರೈತರ‌ ದೂರಿಗೆ ಸಂಬಂಧಿಸಿ ಅರಣ್ಯ ಇಲಾಖೆ ಅಧಿಕಾರಿಗಳ ಪ್ರತಿಕ್ರಿಯೆ ಪಡೆದರು.

ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿರುವ ಪ್ರಕರಣ ಜೂನ್ ತಿಂಗಳಲ್ಲಿ ವಿಚಾರಣೆಗೆ ಬರಲಿದೆ. ಚುನಾವಣೆ ಮುಗಿದ ಬಳಿಕ ಕಂದಾಯ ಹಾಗೂ ಅರಣ್ಯ ಇಲಾಖೆ ನೇತೃತ್ವದಲ್ಲಿ ಜಂಟಿ‌ಸರ್ವೇ ನಡೆಸಬೇಕು. ಅಲ್ಲಿಯವರೆಗೆ ಯಾವ ಅಧಿಕಾರಿಗಳು ಕೂಡ ರೈತರಿಗೆ ತೊಂದರೆ ನೀಡಬಾರದು. ವಿವಾದವನ್ನು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸಿ ಇತ್ಯರ್ಥ ಮಾಡಲಾಗುವುದು ಎಂದು ಭರವಸೆ ನೀಡಿದರು.

ಉಪವಿಭಾಗಾಧಿಕಾರಿಗಳ ಭರವಸೆಗೆ ಒಪ್ಪಿ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಹಿಂಪಡೆದರು.

ಗ್ರಾಮದ ಮುಖಂಡ ಎನ್.ಪ್ರಸಾದ್ ಮಾತನಾಡಿ, ಉಪವಿಭಾಗಾಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಅವರ ಮಾತಿಗೆ ಒಪ್ಪಿ ಬಹಿಷ್ಕಾರ ಹಿಂಪಡೆದಿದ್ದೇವೆ. ಒಂದು ವೇಳೆ ಭರವಸೆ ಈಡೇರಿಸದಿದ್ದರೆ ಉಗ್ರ ಹೋರಾಟ‌ ನಡೆಸಲಾಗುವುದು. ಜೊತೆಗೆ ಮುಂದಿನ ಲೋಕಸಭೆ‌ ವೇಳೆ ಮತ್ತೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು‌ ಹೇಳಿದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನಕುಮಾರಿ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ವಲಯ ಅರಣ್ಯಾಧಿಕಾರಿ ಮುನಿರಾಜು, ಎಎಸ್ಐ ಕೃಷ್ಣಪ್ಪ, ಕಂದಾಯ ನಿರೀಕ್ಷಕಿ‌ ಲಕ್ಷ್ಮಮ್ಮ, ಗ್ರಾಮ ಲೆಕ್ಕಾಧಿಕಾರಿ ರಾಜಶೇಖರ್ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

6 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

7 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

12 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

24 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

1 day ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

1 day ago