ಕೆಳಗಿನನಾಯಕರಾಂಡಹಳ್ಳಿಗೆ ದೌಡಾಯಿಸಿದ ಚುನಾವಣಾಧಿಕಾರಿ ತೇಜಸ್ ಕುಮಾರ್: ಮತದಾನ ಬಹಿಷ್ಕಾರ ಹಿಂಪಡೆಯುವಂತೆ ಮನವಿ

ದೊಡ್ಡಬಳ್ಳಾಪುರ: ಅರಣ್ಯ ಇಲಾಖೆ ಕಿರುಕುಳ ವಿರೋಧಿಸಿ 2023ರ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದ ತಾಲೂಕಿನ ತೂಬಗೆರೆ ಹೋಬಳಿ ಕೆಳಗಿನನಾಯಕರಾಂಡಹಳ್ಳಿ ಗ್ರಾಮಸ್ಥರು, ಅಧಿಕಾರಿಗಳ‌ ಸಂಧಾನದ ಬಳಿಕ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.

ಭಾನುವಾರ ರಾತ್ರಿ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಉಪವಿಭಾಗಾಧಿಕಾರಿಯೂ ಆಗಿರುವ ಚುನಾವಣಾಧಿಕಾರಿ ಎನ್.ತೇಜಸ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಸ್ಥರ ಅಹವಾಲು ಆಲಿಸಿತು.

ಗ್ರಾಮದ ಸರ್ವೇ ನಂ.8 ರಲ್ಲಿ‌ ಅರಣ್ಯ ಇಲಾಖೆ ಹೊರತುಪಡಿಸಿ ಜಾಗದಲ್ಲಿ 50ಕ್ಕೂ ಹೆಚ್ಚು ಮಂದಿ ಉಳುಮೆ‌ ಮಾಡಿಕೊಂಡಿದ್ದಾರೆ. ಕಂದಾಯ ಇಲಾಖೆ ನೀಡಿರುವ ಸಾಗುವಳಿ ಚೀಟಿಯೂ ಇದೆ.‌ ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಭೂಮಿ ನೀಡಲು ಸಾಧ್ಯವಾಗದಿದ್ದರೆ ಗ್ರಾಮದ ಎಲ್ಲರಿಗೂ ದಯಾಮರಣಕ್ಕೆ ಅವಕಾಶ ನೀಡಿ ಎಂದು ಮುಖಂಡರಾದ ಕೃಷ್ಣನಾಯಕ, ಎನ್.ಪ್ರಸಾದ್, ರಾಜಾರಾಮನಾಯಕ, ಎಸ್.ಎಸ್.ಘಾಟಿ‌‌ ಗ್ರಾ.ಪಂ. ಅಧ್ಯಕ್ಷ ಭಾರತಿಬಾಯಿ ಅಲವತ್ತುಕೊಂಡರು.

ಆಗ ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ಅವರು ರೈತರ‌ ದೂರಿಗೆ ಸಂಬಂಧಿಸಿ ಅರಣ್ಯ ಇಲಾಖೆ ಅಧಿಕಾರಿಗಳ ಪ್ರತಿಕ್ರಿಯೆ ಪಡೆದರು.

ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿರುವ ಪ್ರಕರಣ ಜೂನ್ ತಿಂಗಳಲ್ಲಿ ವಿಚಾರಣೆಗೆ ಬರಲಿದೆ. ಚುನಾವಣೆ ಮುಗಿದ ಬಳಿಕ ಕಂದಾಯ ಹಾಗೂ ಅರಣ್ಯ ಇಲಾಖೆ ನೇತೃತ್ವದಲ್ಲಿ ಜಂಟಿ‌ಸರ್ವೇ ನಡೆಸಬೇಕು. ಅಲ್ಲಿಯವರೆಗೆ ಯಾವ ಅಧಿಕಾರಿಗಳು ಕೂಡ ರೈತರಿಗೆ ತೊಂದರೆ ನೀಡಬಾರದು. ವಿವಾದವನ್ನು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸಿ ಇತ್ಯರ್ಥ ಮಾಡಲಾಗುವುದು ಎಂದು ಭರವಸೆ ನೀಡಿದರು.

ಉಪವಿಭಾಗಾಧಿಕಾರಿಗಳ ಭರವಸೆಗೆ ಒಪ್ಪಿ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಹಿಂಪಡೆದರು.

ಗ್ರಾಮದ ಮುಖಂಡ ಎನ್.ಪ್ರಸಾದ್ ಮಾತನಾಡಿ, ಉಪವಿಭಾಗಾಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಅವರ ಮಾತಿಗೆ ಒಪ್ಪಿ ಬಹಿಷ್ಕಾರ ಹಿಂಪಡೆದಿದ್ದೇವೆ. ಒಂದು ವೇಳೆ ಭರವಸೆ ಈಡೇರಿಸದಿದ್ದರೆ ಉಗ್ರ ಹೋರಾಟ‌ ನಡೆಸಲಾಗುವುದು. ಜೊತೆಗೆ ಮುಂದಿನ ಲೋಕಸಭೆ‌ ವೇಳೆ ಮತ್ತೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು‌ ಹೇಳಿದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನಕುಮಾರಿ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ವಲಯ ಅರಣ್ಯಾಧಿಕಾರಿ ಮುನಿರಾಜು, ಎಎಸ್ಐ ಕೃಷ್ಣಪ್ಪ, ಕಂದಾಯ ನಿರೀಕ್ಷಕಿ‌ ಲಕ್ಷ್ಮಮ್ಮ, ಗ್ರಾಮ ಲೆಕ್ಕಾಧಿಕಾರಿ ರಾಜಶೇಖರ್ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago