ದೊಡ್ಡಬಳ್ಳಾಪುರ: ಅರಣ್ಯ ಇಲಾಖೆ ಕಿರುಕುಳ ವಿರೋಧಿಸಿ 2023ರ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದ ತಾಲೂಕಿನ ತೂಬಗೆರೆ ಹೋಬಳಿ ಕೆಳಗಿನನಾಯಕರಾಂಡಹಳ್ಳಿ ಗ್ರಾಮಸ್ಥರು, ಅಧಿಕಾರಿಗಳ ಸಂಧಾನದ ಬಳಿಕ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.
ಭಾನುವಾರ ರಾತ್ರಿ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಉಪವಿಭಾಗಾಧಿಕಾರಿಯೂ ಆಗಿರುವ ಚುನಾವಣಾಧಿಕಾರಿ ಎನ್.ತೇಜಸ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಸ್ಥರ ಅಹವಾಲು ಆಲಿಸಿತು.
ಗ್ರಾಮದ ಸರ್ವೇ ನಂ.8 ರಲ್ಲಿ ಅರಣ್ಯ ಇಲಾಖೆ ಹೊರತುಪಡಿಸಿ ಜಾಗದಲ್ಲಿ 50ಕ್ಕೂ ಹೆಚ್ಚು ಮಂದಿ ಉಳುಮೆ ಮಾಡಿಕೊಂಡಿದ್ದಾರೆ. ಕಂದಾಯ ಇಲಾಖೆ ನೀಡಿರುವ ಸಾಗುವಳಿ ಚೀಟಿಯೂ ಇದೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಭೂಮಿ ನೀಡಲು ಸಾಧ್ಯವಾಗದಿದ್ದರೆ ಗ್ರಾಮದ ಎಲ್ಲರಿಗೂ ದಯಾಮರಣಕ್ಕೆ ಅವಕಾಶ ನೀಡಿ ಎಂದು ಮುಖಂಡರಾದ ಕೃಷ್ಣನಾಯಕ, ಎನ್.ಪ್ರಸಾದ್, ರಾಜಾರಾಮನಾಯಕ, ಎಸ್.ಎಸ್.ಘಾಟಿ ಗ್ರಾ.ಪಂ. ಅಧ್ಯಕ್ಷ ಭಾರತಿಬಾಯಿ ಅಲವತ್ತುಕೊಂಡರು.
ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿರುವ ಪ್ರಕರಣ ಜೂನ್ ತಿಂಗಳಲ್ಲಿ ವಿಚಾರಣೆಗೆ ಬರಲಿದೆ. ಚುನಾವಣೆ ಮುಗಿದ ಬಳಿಕ ಕಂದಾಯ ಹಾಗೂ ಅರಣ್ಯ ಇಲಾಖೆ ನೇತೃತ್ವದಲ್ಲಿ ಜಂಟಿಸರ್ವೇ ನಡೆಸಬೇಕು. ಅಲ್ಲಿಯವರೆಗೆ ಯಾವ ಅಧಿಕಾರಿಗಳು ಕೂಡ ರೈತರಿಗೆ ತೊಂದರೆ ನೀಡಬಾರದು. ವಿವಾದವನ್ನು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸಿ ಇತ್ಯರ್ಥ ಮಾಡಲಾಗುವುದು ಎಂದು ಭರವಸೆ ನೀಡಿದರು.
ಉಪವಿಭಾಗಾಧಿಕಾರಿಗಳ ಭರವಸೆಗೆ ಒಪ್ಪಿ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಹಿಂಪಡೆದರು.
ಗ್ರಾಮದ ಮುಖಂಡ ಎನ್.ಪ್ರಸಾದ್ ಮಾತನಾಡಿ, ಉಪವಿಭಾಗಾಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಅವರ ಮಾತಿಗೆ ಒಪ್ಪಿ ಬಹಿಷ್ಕಾರ ಹಿಂಪಡೆದಿದ್ದೇವೆ. ಒಂದು ವೇಳೆ ಭರವಸೆ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಜೊತೆಗೆ ಮುಂದಿನ ಲೋಕಸಭೆ ವೇಳೆ ಮತ್ತೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಹೇಳಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…