ದೊಡ್ಡಬಳ್ಳಾಪುರ: ಅರಣ್ಯ ಇಲಾಖೆ ಕಿರುಕುಳ ವಿರೋಧಿಸಿ 2023ರ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದ ತಾಲೂಕಿನ ತೂಬಗೆರೆ ಹೋಬಳಿ ಕೆಳಗಿನನಾಯಕರಾಂಡಹಳ್ಳಿ ಗ್ರಾಮಸ್ಥರು, ಅಧಿಕಾರಿಗಳ ಸಂಧಾನದ ಬಳಿಕ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.
ಭಾನುವಾರ ರಾತ್ರಿ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಉಪವಿಭಾಗಾಧಿಕಾರಿಯೂ ಆಗಿರುವ ಚುನಾವಣಾಧಿಕಾರಿ ಎನ್.ತೇಜಸ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಸ್ಥರ ಅಹವಾಲು ಆಲಿಸಿತು.
ಗ್ರಾಮದ ಸರ್ವೇ ನಂ.8 ರಲ್ಲಿ ಅರಣ್ಯ ಇಲಾಖೆ ಹೊರತುಪಡಿಸಿ ಜಾಗದಲ್ಲಿ 50ಕ್ಕೂ ಹೆಚ್ಚು ಮಂದಿ ಉಳುಮೆ ಮಾಡಿಕೊಂಡಿದ್ದಾರೆ. ಕಂದಾಯ ಇಲಾಖೆ ನೀಡಿರುವ ಸಾಗುವಳಿ ಚೀಟಿಯೂ ಇದೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಭೂಮಿ ನೀಡಲು ಸಾಧ್ಯವಾಗದಿದ್ದರೆ ಗ್ರಾಮದ ಎಲ್ಲರಿಗೂ ದಯಾಮರಣಕ್ಕೆ ಅವಕಾಶ ನೀಡಿ ಎಂದು ಮುಖಂಡರಾದ ಕೃಷ್ಣನಾಯಕ, ಎನ್.ಪ್ರಸಾದ್, ರಾಜಾರಾಮನಾಯಕ, ಎಸ್.ಎಸ್.ಘಾಟಿ ಗ್ರಾ.ಪಂ. ಅಧ್ಯಕ್ಷ ಭಾರತಿಬಾಯಿ ಅಲವತ್ತುಕೊಂಡರು.
ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿರುವ ಪ್ರಕರಣ ಜೂನ್ ತಿಂಗಳಲ್ಲಿ ವಿಚಾರಣೆಗೆ ಬರಲಿದೆ. ಚುನಾವಣೆ ಮುಗಿದ ಬಳಿಕ ಕಂದಾಯ ಹಾಗೂ ಅರಣ್ಯ ಇಲಾಖೆ ನೇತೃತ್ವದಲ್ಲಿ ಜಂಟಿಸರ್ವೇ ನಡೆಸಬೇಕು. ಅಲ್ಲಿಯವರೆಗೆ ಯಾವ ಅಧಿಕಾರಿಗಳು ಕೂಡ ರೈತರಿಗೆ ತೊಂದರೆ ನೀಡಬಾರದು. ವಿವಾದವನ್ನು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸಿ ಇತ್ಯರ್ಥ ಮಾಡಲಾಗುವುದು ಎಂದು ಭರವಸೆ ನೀಡಿದರು.
ಉಪವಿಭಾಗಾಧಿಕಾರಿಗಳ ಭರವಸೆಗೆ ಒಪ್ಪಿ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಹಿಂಪಡೆದರು.
ಗ್ರಾಮದ ಮುಖಂಡ ಎನ್.ಪ್ರಸಾದ್ ಮಾತನಾಡಿ, ಉಪವಿಭಾಗಾಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಅವರ ಮಾತಿಗೆ ಒಪ್ಪಿ ಬಹಿಷ್ಕಾರ ಹಿಂಪಡೆದಿದ್ದೇವೆ. ಒಂದು ವೇಳೆ ಭರವಸೆ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಜೊತೆಗೆ ಮುಂದಿನ ಲೋಕಸಭೆ ವೇಳೆ ಮತ್ತೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…