ದೊಡ್ಡಬಳ್ಳಾಪುರ: ಅರಣ್ಯ ಇಲಾಖೆ ಕಿರುಕುಳ ವಿರೋಧಿಸಿ 2023ರ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದ ತಾಲೂಕಿನ ತೂಬಗೆರೆ ಹೋಬಳಿ ಕೆಳಗಿನನಾಯಕರಾಂಡಹಳ್ಳಿ ಗ್ರಾಮಸ್ಥರು, ಅಧಿಕಾರಿಗಳ ಸಂಧಾನದ ಬಳಿಕ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.
ಭಾನುವಾರ ರಾತ್ರಿ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಉಪವಿಭಾಗಾಧಿಕಾರಿಯೂ ಆಗಿರುವ ಚುನಾವಣಾಧಿಕಾರಿ ಎನ್.ತೇಜಸ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಸ್ಥರ ಅಹವಾಲು ಆಲಿಸಿತು.
ಗ್ರಾಮದ ಸರ್ವೇ ನಂ.8 ರಲ್ಲಿ ಅರಣ್ಯ ಇಲಾಖೆ ಹೊರತುಪಡಿಸಿ ಜಾಗದಲ್ಲಿ 50ಕ್ಕೂ ಹೆಚ್ಚು ಮಂದಿ ಉಳುಮೆ ಮಾಡಿಕೊಂಡಿದ್ದಾರೆ. ಕಂದಾಯ ಇಲಾಖೆ ನೀಡಿರುವ ಸಾಗುವಳಿ ಚೀಟಿಯೂ ಇದೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಭೂಮಿ ನೀಡಲು ಸಾಧ್ಯವಾಗದಿದ್ದರೆ ಗ್ರಾಮದ ಎಲ್ಲರಿಗೂ ದಯಾಮರಣಕ್ಕೆ ಅವಕಾಶ ನೀಡಿ ಎಂದು ಮುಖಂಡರಾದ ಕೃಷ್ಣನಾಯಕ, ಎನ್.ಪ್ರಸಾದ್, ರಾಜಾರಾಮನಾಯಕ, ಎಸ್.ಎಸ್.ಘಾಟಿ ಗ್ರಾ.ಪಂ. ಅಧ್ಯಕ್ಷ ಭಾರತಿಬಾಯಿ ಅಲವತ್ತುಕೊಂಡರು.
ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿರುವ ಪ್ರಕರಣ ಜೂನ್ ತಿಂಗಳಲ್ಲಿ ವಿಚಾರಣೆಗೆ ಬರಲಿದೆ. ಚುನಾವಣೆ ಮುಗಿದ ಬಳಿಕ ಕಂದಾಯ ಹಾಗೂ ಅರಣ್ಯ ಇಲಾಖೆ ನೇತೃತ್ವದಲ್ಲಿ ಜಂಟಿಸರ್ವೇ ನಡೆಸಬೇಕು. ಅಲ್ಲಿಯವರೆಗೆ ಯಾವ ಅಧಿಕಾರಿಗಳು ಕೂಡ ರೈತರಿಗೆ ತೊಂದರೆ ನೀಡಬಾರದು. ವಿವಾದವನ್ನು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸಿ ಇತ್ಯರ್ಥ ಮಾಡಲಾಗುವುದು ಎಂದು ಭರವಸೆ ನೀಡಿದರು.
ಉಪವಿಭಾಗಾಧಿಕಾರಿಗಳ ಭರವಸೆಗೆ ಒಪ್ಪಿ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಹಿಂಪಡೆದರು.
ಗ್ರಾಮದ ಮುಖಂಡ ಎನ್.ಪ್ರಸಾದ್ ಮಾತನಾಡಿ, ಉಪವಿಭಾಗಾಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಅವರ ಮಾತಿಗೆ ಒಪ್ಪಿ ಬಹಿಷ್ಕಾರ ಹಿಂಪಡೆದಿದ್ದೇವೆ. ಒಂದು ವೇಳೆ ಭರವಸೆ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಜೊತೆಗೆ ಮುಂದಿನ ಲೋಕಸಭೆ ವೇಳೆ ಮತ್ತೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಹೇಳಿದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…