ದೊಡ್ಡಬಳ್ಳಾಪುರ: ಅರಣ್ಯ ಇಲಾಖೆ ಕಿರುಕುಳ ವಿರೋಧಿಸಿ 2023ರ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದ ತಾಲೂಕಿನ ತೂಬಗೆರೆ ಹೋಬಳಿ ಕೆಳಗಿನನಾಯಕರಾಂಡಹಳ್ಳಿ ಗ್ರಾಮಸ್ಥರು, ಅಧಿಕಾರಿಗಳ ಸಂಧಾನದ ಬಳಿಕ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.
ಭಾನುವಾರ ರಾತ್ರಿ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಉಪವಿಭಾಗಾಧಿಕಾರಿಯೂ ಆಗಿರುವ ಚುನಾವಣಾಧಿಕಾರಿ ಎನ್.ತೇಜಸ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಸ್ಥರ ಅಹವಾಲು ಆಲಿಸಿತು.
ಗ್ರಾಮದ ಸರ್ವೇ ನಂ.8 ರಲ್ಲಿ ಅರಣ್ಯ ಇಲಾಖೆ ಹೊರತುಪಡಿಸಿ ಜಾಗದಲ್ಲಿ 50ಕ್ಕೂ ಹೆಚ್ಚು ಮಂದಿ ಉಳುಮೆ ಮಾಡಿಕೊಂಡಿದ್ದಾರೆ. ಕಂದಾಯ ಇಲಾಖೆ ನೀಡಿರುವ ಸಾಗುವಳಿ ಚೀಟಿಯೂ ಇದೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಭೂಮಿ ನೀಡಲು ಸಾಧ್ಯವಾಗದಿದ್ದರೆ ಗ್ರಾಮದ ಎಲ್ಲರಿಗೂ ದಯಾಮರಣಕ್ಕೆ ಅವಕಾಶ ನೀಡಿ ಎಂದು ಮುಖಂಡರಾದ ಕೃಷ್ಣನಾಯಕ, ಎನ್.ಪ್ರಸಾದ್, ರಾಜಾರಾಮನಾಯಕ, ಎಸ್.ಎಸ್.ಘಾಟಿ ಗ್ರಾ.ಪಂ. ಅಧ್ಯಕ್ಷ ಭಾರತಿಬಾಯಿ ಅಲವತ್ತುಕೊಂಡರು.
ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿರುವ ಪ್ರಕರಣ ಜೂನ್ ತಿಂಗಳಲ್ಲಿ ವಿಚಾರಣೆಗೆ ಬರಲಿದೆ. ಚುನಾವಣೆ ಮುಗಿದ ಬಳಿಕ ಕಂದಾಯ ಹಾಗೂ ಅರಣ್ಯ ಇಲಾಖೆ ನೇತೃತ್ವದಲ್ಲಿ ಜಂಟಿಸರ್ವೇ ನಡೆಸಬೇಕು. ಅಲ್ಲಿಯವರೆಗೆ ಯಾವ ಅಧಿಕಾರಿಗಳು ಕೂಡ ರೈತರಿಗೆ ತೊಂದರೆ ನೀಡಬಾರದು. ವಿವಾದವನ್ನು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸಿ ಇತ್ಯರ್ಥ ಮಾಡಲಾಗುವುದು ಎಂದು ಭರವಸೆ ನೀಡಿದರು.
ಉಪವಿಭಾಗಾಧಿಕಾರಿಗಳ ಭರವಸೆಗೆ ಒಪ್ಪಿ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಹಿಂಪಡೆದರು.
ಗ್ರಾಮದ ಮುಖಂಡ ಎನ್.ಪ್ರಸಾದ್ ಮಾತನಾಡಿ, ಉಪವಿಭಾಗಾಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಅವರ ಮಾತಿಗೆ ಒಪ್ಪಿ ಬಹಿಷ್ಕಾರ ಹಿಂಪಡೆದಿದ್ದೇವೆ. ಒಂದು ವೇಳೆ ಭರವಸೆ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಜೊತೆಗೆ ಮುಂದಿನ ಲೋಕಸಭೆ ವೇಳೆ ಮತ್ತೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಹೇಳಿದರು.
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…