Categories: ಕೋಲಾರ

ಕೆಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣ ಕಾಲುವೆಗಳ ದುರಸ್ತಿಗೆ ನಾರಾಯಣಗೌಡ ಒತ್ತಾಯ

ಕೋಲಾರ: ಅವಳಿ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕೆ.ಸಿ ವ್ಯಾಲಿ ಯೋಜನೆಯಡಿ ಹರಿಸುತ್ತಿರುವ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಬೇಕು‌ ನೀರು ಹರಿಯುವ ಕಾಲುವೆಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಈ ಭಾಗದಲ್ಲಿ ಯಾವುದೇ ನದಿ ನಾಲೆಗಳು ಇಲ್ಲದೆ, ಶಾಶ್ವತವಾದ ನೀರಾವರಿ ಯೋಜನೆಗಳಿಲ್ಲದೇ ವಂಚಿತವಾದ ಕಾರಣ ಈ ಭಾಗದ ರೈತರು ಕುಡಿಯುವ ನೀರು ಮತ್ತು ಕೃಷಿ ಬಳಕೆಗಾಗಿ ಸುಮಾರು 1500 ರಿಂದ 2000 ಅಡಿ ಆಳದ ಕೊಳವೆಬಾವಿ‌ ಕೊರೆಸುವ ಅನಿವಾರ್ಯತೆಗೆ ಸಿಲುಕಿದ್ದರು ಇದರಿಂದಲೇ ಅಂತರ್ಜಲ ಮಟ್ಟವು ಪಾತಾಳಕ್ಕೆ ಕುಸಿದಿತ್ತು ಕೆಸಿ ವ್ಯಾಲಿ ಯೋಜನೆಯಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಯೋಜನೆಯನ್ನು ರೂಪಿಸಲಾಗಿತ್ತು ಈ ಯೋಜನೆ ಕುಡಿಯಲು ಹಾಗೂ ಕೃಷಿ ಬೆಳೆಗಳನ್ನು ವಿಷಪೂರಿತಗೊಳಿಸುವುದರ ಜತೆಗೆ ಜನರು ಮತ್ತು ಜಾನುವಾರುಗಳನ್ನು ಮಾರಣಾಂತಿಕ ಕಾಯಿಲೆಗಳಿಗೆ ದೂಡುತ್ತಿದೆ ಕೂಡಲೇ ಮೂರನೇ ಹಂತದ ಶುದ್ದೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಬರಪೀಡಿತ ಜಿಲ್ಲೆಗಳಿಗೆ ಶಾಶ್ವತವಾದ ಶುದ್ಧ ಕುಡಿಯುವ ನೀರು ಒದಗಿಸುವ ಅವೈಜ್ಞಾನಿಕ ಎತ್ತಿನಹೊಳೆ ಯೋಜನೆ ಇಲ್ಲಿಯವರೆಗೂ ನೀಡುವಲ್ಲಿ ವಿಫಲವಾಗಿದೆ.ಕೆಸಿ ವ್ಯಾಲಿ ಬೆಂಗಳೂರು ನಗರದಲ್ಲಿ ಎರಡು ಹಂತದಲ್ಲಿ ಮಾತ್ರ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೆರೆಗಳಿಗೆ ಹರಿಸಿ ಅಂತರ್ಜಲವನ್ನು ಪುನರುಜ್ಜೀವನಗೊಳಿಸುವ ಯೋಜನೆಯಾದರು ಇದು ರೈತರಿಗೆ ಜಾನುವಾರುಗಳಿಗೆ ಸಂಕಟ ಉಂಟುಮಾಡಿದೆ. ಕೆಲವು ಕಡೆಯಲ್ಲಿ ಕುಡಿಯುವ ನೀರನ್ನು ಒದಗಿಸಲು ಕೊರೆಸಿರುವ ಕೊಳವೆಬಾವಿಗಳು ಹೊಂದಿರುವ ಕೆರೆಗಳನ್ನು ಎರಡು ಹಂತದಲ್ಲಿ ಸಂಸ್ಕರಿಸಿದ ತ್ಯಾಜ್ಯ ನೀರನ್ನು ತುಂಬಿಸಿ ಅಂತರ್ಜಲವನ್ನು ಕಲುಷಿತಗೊಳಿಸುವುದಲ್ಲದೆ, ಮೀನುಗಳು ಮತ್ತು ಇತರ ಜಲಚರಗಳ ಸಾವಿಗೆ ಕಾರಣವಾಗಿದೆ. ಕೆರೆಗಳ ಜೀವವೈವಿಧ್ಯ ನಾಶಕ್ಕೆ ಕಾರಣವಾಗಿವೆ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಕೆಸಿ ವ್ಯಾಲಿ ಹರಿಯುವ ಕಾಲುವೆಗಳಲ್ಲಿ ಅನವಶ್ಯಕ ಗಿಡಗಂಟಿಗಳಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ ಇದರ ಜೊತೆಗೆ ಹಸಿರು ಸೊಳ್ಳೆಗಳ ಉತ್ಪತ್ತಿಯಿಂದ ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದ್ದು ಕೂಡಲೇ ಕಾಲುವೆಗಳನ್ನು ದುರಸ್ತಿ ಮಾಡಬೇಕು ಬೆಳೆಗಳಿಗೆ ರೋಗದ ಬಗ್ಗೆ ತಜ್ಞರ ಸಮಿತಿಯಿಂದ ತನಿಖೆ ಮಾಡಿ ಗುಣಮಟ್ಟದ ಔಷಧಗಳನ್ನು ಸರಕಾರ ಮತ್ತು ಜಿಲ್ಲಾಡಳಿತ ಮೂಲಕ ವಿತರಿಸುವ ಕೆಲಸವನ್ನು ಮಾಡಿ ರೈತರ ಬೆಳೆಗಳನ್ನು ಮತ್ತು ಬಡ ರೈತರನ್ನು ರಕ್ಷಣೆ ಮಾಡಬೇಕು ಎಂದು ನಾರಾಯಣಗೌಡರು ಹೇಳಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮುಖಂಡರಾದ ಫಾರೂಕ್ ಪಾಷ, ರತ್ನಮ್ಮ, ಸುನಿತಮ್ಮ, ಗೌರಮ್ಮ, ಶಿವಾರೆಡ್ಡಿ, ಮಂಗಸಂದ್ರ ತಿಮ್ಮಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

5 hours ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

6 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

7 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

9 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

10 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

21 hours ago