Categories: ಕೋಲಾರ

ಕೆಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣ ಕಾಲುವೆಗಳ ದುರಸ್ತಿಗೆ ನಾರಾಯಣಗೌಡ ಒತ್ತಾಯ

ಕೋಲಾರ: ಅವಳಿ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕೆ.ಸಿ ವ್ಯಾಲಿ ಯೋಜನೆಯಡಿ ಹರಿಸುತ್ತಿರುವ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಬೇಕು‌ ನೀರು ಹರಿಯುವ ಕಾಲುವೆಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಈ ಭಾಗದಲ್ಲಿ ಯಾವುದೇ ನದಿ ನಾಲೆಗಳು ಇಲ್ಲದೆ, ಶಾಶ್ವತವಾದ ನೀರಾವರಿ ಯೋಜನೆಗಳಿಲ್ಲದೇ ವಂಚಿತವಾದ ಕಾರಣ ಈ ಭಾಗದ ರೈತರು ಕುಡಿಯುವ ನೀರು ಮತ್ತು ಕೃಷಿ ಬಳಕೆಗಾಗಿ ಸುಮಾರು 1500 ರಿಂದ 2000 ಅಡಿ ಆಳದ ಕೊಳವೆಬಾವಿ‌ ಕೊರೆಸುವ ಅನಿವಾರ್ಯತೆಗೆ ಸಿಲುಕಿದ್ದರು ಇದರಿಂದಲೇ ಅಂತರ್ಜಲ ಮಟ್ಟವು ಪಾತಾಳಕ್ಕೆ ಕುಸಿದಿತ್ತು ಕೆಸಿ ವ್ಯಾಲಿ ಯೋಜನೆಯಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಯೋಜನೆಯನ್ನು ರೂಪಿಸಲಾಗಿತ್ತು ಈ ಯೋಜನೆ ಕುಡಿಯಲು ಹಾಗೂ ಕೃಷಿ ಬೆಳೆಗಳನ್ನು ವಿಷಪೂರಿತಗೊಳಿಸುವುದರ ಜತೆಗೆ ಜನರು ಮತ್ತು ಜಾನುವಾರುಗಳನ್ನು ಮಾರಣಾಂತಿಕ ಕಾಯಿಲೆಗಳಿಗೆ ದೂಡುತ್ತಿದೆ ಕೂಡಲೇ ಮೂರನೇ ಹಂತದ ಶುದ್ದೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಬರಪೀಡಿತ ಜಿಲ್ಲೆಗಳಿಗೆ ಶಾಶ್ವತವಾದ ಶುದ್ಧ ಕುಡಿಯುವ ನೀರು ಒದಗಿಸುವ ಅವೈಜ್ಞಾನಿಕ ಎತ್ತಿನಹೊಳೆ ಯೋಜನೆ ಇಲ್ಲಿಯವರೆಗೂ ನೀಡುವಲ್ಲಿ ವಿಫಲವಾಗಿದೆ.ಕೆಸಿ ವ್ಯಾಲಿ ಬೆಂಗಳೂರು ನಗರದಲ್ಲಿ ಎರಡು ಹಂತದಲ್ಲಿ ಮಾತ್ರ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೆರೆಗಳಿಗೆ ಹರಿಸಿ ಅಂತರ್ಜಲವನ್ನು ಪುನರುಜ್ಜೀವನಗೊಳಿಸುವ ಯೋಜನೆಯಾದರು ಇದು ರೈತರಿಗೆ ಜಾನುವಾರುಗಳಿಗೆ ಸಂಕಟ ಉಂಟುಮಾಡಿದೆ. ಕೆಲವು ಕಡೆಯಲ್ಲಿ ಕುಡಿಯುವ ನೀರನ್ನು ಒದಗಿಸಲು ಕೊರೆಸಿರುವ ಕೊಳವೆಬಾವಿಗಳು ಹೊಂದಿರುವ ಕೆರೆಗಳನ್ನು ಎರಡು ಹಂತದಲ್ಲಿ ಸಂಸ್ಕರಿಸಿದ ತ್ಯಾಜ್ಯ ನೀರನ್ನು ತುಂಬಿಸಿ ಅಂತರ್ಜಲವನ್ನು ಕಲುಷಿತಗೊಳಿಸುವುದಲ್ಲದೆ, ಮೀನುಗಳು ಮತ್ತು ಇತರ ಜಲಚರಗಳ ಸಾವಿಗೆ ಕಾರಣವಾಗಿದೆ. ಕೆರೆಗಳ ಜೀವವೈವಿಧ್ಯ ನಾಶಕ್ಕೆ ಕಾರಣವಾಗಿವೆ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಕೆಸಿ ವ್ಯಾಲಿ ಹರಿಯುವ ಕಾಲುವೆಗಳಲ್ಲಿ ಅನವಶ್ಯಕ ಗಿಡಗಂಟಿಗಳಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ ಇದರ ಜೊತೆಗೆ ಹಸಿರು ಸೊಳ್ಳೆಗಳ ಉತ್ಪತ್ತಿಯಿಂದ ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದ್ದು ಕೂಡಲೇ ಕಾಲುವೆಗಳನ್ನು ದುರಸ್ತಿ ಮಾಡಬೇಕು ಬೆಳೆಗಳಿಗೆ ರೋಗದ ಬಗ್ಗೆ ತಜ್ಞರ ಸಮಿತಿಯಿಂದ ತನಿಖೆ ಮಾಡಿ ಗುಣಮಟ್ಟದ ಔಷಧಗಳನ್ನು ಸರಕಾರ ಮತ್ತು ಜಿಲ್ಲಾಡಳಿತ ಮೂಲಕ ವಿತರಿಸುವ ಕೆಲಸವನ್ನು ಮಾಡಿ ರೈತರ ಬೆಳೆಗಳನ್ನು ಮತ್ತು ಬಡ ರೈತರನ್ನು ರಕ್ಷಣೆ ಮಾಡಬೇಕು ಎಂದು ನಾರಾಯಣಗೌಡರು ಹೇಳಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮುಖಂಡರಾದ ಫಾರೂಕ್ ಪಾಷ, ರತ್ನಮ್ಮ, ಸುನಿತಮ್ಮ, ಗೌರಮ್ಮ, ಶಿವಾರೆಡ್ಡಿ, ಮಂಗಸಂದ್ರ ತಿಮ್ಮಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

21 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago