Categories: ಕೋಲಾರ

ಕೆಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣ ಕಾಲುವೆಗಳ ದುರಸ್ತಿಗೆ ನಾರಾಯಣಗೌಡ ಒತ್ತಾಯ

ಕೋಲಾರ: ಅವಳಿ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕೆ.ಸಿ ವ್ಯಾಲಿ ಯೋಜನೆಯಡಿ ಹರಿಸುತ್ತಿರುವ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಬೇಕು‌ ನೀರು ಹರಿಯುವ ಕಾಲುವೆಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಈ ಭಾಗದಲ್ಲಿ ಯಾವುದೇ ನದಿ ನಾಲೆಗಳು ಇಲ್ಲದೆ, ಶಾಶ್ವತವಾದ ನೀರಾವರಿ ಯೋಜನೆಗಳಿಲ್ಲದೇ ವಂಚಿತವಾದ ಕಾರಣ ಈ ಭಾಗದ ರೈತರು ಕುಡಿಯುವ ನೀರು ಮತ್ತು ಕೃಷಿ ಬಳಕೆಗಾಗಿ ಸುಮಾರು 1500 ರಿಂದ 2000 ಅಡಿ ಆಳದ ಕೊಳವೆಬಾವಿ‌ ಕೊರೆಸುವ ಅನಿವಾರ್ಯತೆಗೆ ಸಿಲುಕಿದ್ದರು ಇದರಿಂದಲೇ ಅಂತರ್ಜಲ ಮಟ್ಟವು ಪಾತಾಳಕ್ಕೆ ಕುಸಿದಿತ್ತು ಕೆಸಿ ವ್ಯಾಲಿ ಯೋಜನೆಯಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಯೋಜನೆಯನ್ನು ರೂಪಿಸಲಾಗಿತ್ತು ಈ ಯೋಜನೆ ಕುಡಿಯಲು ಹಾಗೂ ಕೃಷಿ ಬೆಳೆಗಳನ್ನು ವಿಷಪೂರಿತಗೊಳಿಸುವುದರ ಜತೆಗೆ ಜನರು ಮತ್ತು ಜಾನುವಾರುಗಳನ್ನು ಮಾರಣಾಂತಿಕ ಕಾಯಿಲೆಗಳಿಗೆ ದೂಡುತ್ತಿದೆ ಕೂಡಲೇ ಮೂರನೇ ಹಂತದ ಶುದ್ದೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಬರಪೀಡಿತ ಜಿಲ್ಲೆಗಳಿಗೆ ಶಾಶ್ವತವಾದ ಶುದ್ಧ ಕುಡಿಯುವ ನೀರು ಒದಗಿಸುವ ಅವೈಜ್ಞಾನಿಕ ಎತ್ತಿನಹೊಳೆ ಯೋಜನೆ ಇಲ್ಲಿಯವರೆಗೂ ನೀಡುವಲ್ಲಿ ವಿಫಲವಾಗಿದೆ.ಕೆಸಿ ವ್ಯಾಲಿ ಬೆಂಗಳೂರು ನಗರದಲ್ಲಿ ಎರಡು ಹಂತದಲ್ಲಿ ಮಾತ್ರ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೆರೆಗಳಿಗೆ ಹರಿಸಿ ಅಂತರ್ಜಲವನ್ನು ಪುನರುಜ್ಜೀವನಗೊಳಿಸುವ ಯೋಜನೆಯಾದರು ಇದು ರೈತರಿಗೆ ಜಾನುವಾರುಗಳಿಗೆ ಸಂಕಟ ಉಂಟುಮಾಡಿದೆ. ಕೆಲವು ಕಡೆಯಲ್ಲಿ ಕುಡಿಯುವ ನೀರನ್ನು ಒದಗಿಸಲು ಕೊರೆಸಿರುವ ಕೊಳವೆಬಾವಿಗಳು ಹೊಂದಿರುವ ಕೆರೆಗಳನ್ನು ಎರಡು ಹಂತದಲ್ಲಿ ಸಂಸ್ಕರಿಸಿದ ತ್ಯಾಜ್ಯ ನೀರನ್ನು ತುಂಬಿಸಿ ಅಂತರ್ಜಲವನ್ನು ಕಲುಷಿತಗೊಳಿಸುವುದಲ್ಲದೆ, ಮೀನುಗಳು ಮತ್ತು ಇತರ ಜಲಚರಗಳ ಸಾವಿಗೆ ಕಾರಣವಾಗಿದೆ. ಕೆರೆಗಳ ಜೀವವೈವಿಧ್ಯ ನಾಶಕ್ಕೆ ಕಾರಣವಾಗಿವೆ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಕೆಸಿ ವ್ಯಾಲಿ ಹರಿಯುವ ಕಾಲುವೆಗಳಲ್ಲಿ ಅನವಶ್ಯಕ ಗಿಡಗಂಟಿಗಳಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ ಇದರ ಜೊತೆಗೆ ಹಸಿರು ಸೊಳ್ಳೆಗಳ ಉತ್ಪತ್ತಿಯಿಂದ ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದ್ದು ಕೂಡಲೇ ಕಾಲುವೆಗಳನ್ನು ದುರಸ್ತಿ ಮಾಡಬೇಕು ಬೆಳೆಗಳಿಗೆ ರೋಗದ ಬಗ್ಗೆ ತಜ್ಞರ ಸಮಿತಿಯಿಂದ ತನಿಖೆ ಮಾಡಿ ಗುಣಮಟ್ಟದ ಔಷಧಗಳನ್ನು ಸರಕಾರ ಮತ್ತು ಜಿಲ್ಲಾಡಳಿತ ಮೂಲಕ ವಿತರಿಸುವ ಕೆಲಸವನ್ನು ಮಾಡಿ ರೈತರ ಬೆಳೆಗಳನ್ನು ಮತ್ತು ಬಡ ರೈತರನ್ನು ರಕ್ಷಣೆ ಮಾಡಬೇಕು ಎಂದು ನಾರಾಯಣಗೌಡರು ಹೇಳಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮುಖಂಡರಾದ ಫಾರೂಕ್ ಪಾಷ, ರತ್ನಮ್ಮ, ಸುನಿತಮ್ಮ, ಗೌರಮ್ಮ, ಶಿವಾರೆಡ್ಡಿ, ಮಂಗಸಂದ್ರ ತಿಮ್ಮಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

4 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

4 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

4 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

5 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

6 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

10 hours ago