Categories: ಕೋಲಾರ

ಕೆಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣ ಕಾಲುವೆಗಳ ದುರಸ್ತಿಗೆ ನಾರಾಯಣಗೌಡ ಒತ್ತಾಯ

ಕೋಲಾರ: ಅವಳಿ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕೆ.ಸಿ ವ್ಯಾಲಿ ಯೋಜನೆಯಡಿ ಹರಿಸುತ್ತಿರುವ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಬೇಕು‌ ನೀರು ಹರಿಯುವ ಕಾಲುವೆಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಈ ಭಾಗದಲ್ಲಿ ಯಾವುದೇ ನದಿ ನಾಲೆಗಳು ಇಲ್ಲದೆ, ಶಾಶ್ವತವಾದ ನೀರಾವರಿ ಯೋಜನೆಗಳಿಲ್ಲದೇ ವಂಚಿತವಾದ ಕಾರಣ ಈ ಭಾಗದ ರೈತರು ಕುಡಿಯುವ ನೀರು ಮತ್ತು ಕೃಷಿ ಬಳಕೆಗಾಗಿ ಸುಮಾರು 1500 ರಿಂದ 2000 ಅಡಿ ಆಳದ ಕೊಳವೆಬಾವಿ‌ ಕೊರೆಸುವ ಅನಿವಾರ್ಯತೆಗೆ ಸಿಲುಕಿದ್ದರು ಇದರಿಂದಲೇ ಅಂತರ್ಜಲ ಮಟ್ಟವು ಪಾತಾಳಕ್ಕೆ ಕುಸಿದಿತ್ತು ಕೆಸಿ ವ್ಯಾಲಿ ಯೋಜನೆಯಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಯೋಜನೆಯನ್ನು ರೂಪಿಸಲಾಗಿತ್ತು ಈ ಯೋಜನೆ ಕುಡಿಯಲು ಹಾಗೂ ಕೃಷಿ ಬೆಳೆಗಳನ್ನು ವಿಷಪೂರಿತಗೊಳಿಸುವುದರ ಜತೆಗೆ ಜನರು ಮತ್ತು ಜಾನುವಾರುಗಳನ್ನು ಮಾರಣಾಂತಿಕ ಕಾಯಿಲೆಗಳಿಗೆ ದೂಡುತ್ತಿದೆ ಕೂಡಲೇ ಮೂರನೇ ಹಂತದ ಶುದ್ದೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಬರಪೀಡಿತ ಜಿಲ್ಲೆಗಳಿಗೆ ಶಾಶ್ವತವಾದ ಶುದ್ಧ ಕುಡಿಯುವ ನೀರು ಒದಗಿಸುವ ಅವೈಜ್ಞಾನಿಕ ಎತ್ತಿನಹೊಳೆ ಯೋಜನೆ ಇಲ್ಲಿಯವರೆಗೂ ನೀಡುವಲ್ಲಿ ವಿಫಲವಾಗಿದೆ.ಕೆಸಿ ವ್ಯಾಲಿ ಬೆಂಗಳೂರು ನಗರದಲ್ಲಿ ಎರಡು ಹಂತದಲ್ಲಿ ಮಾತ್ರ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೆರೆಗಳಿಗೆ ಹರಿಸಿ ಅಂತರ್ಜಲವನ್ನು ಪುನರುಜ್ಜೀವನಗೊಳಿಸುವ ಯೋಜನೆಯಾದರು ಇದು ರೈತರಿಗೆ ಜಾನುವಾರುಗಳಿಗೆ ಸಂಕಟ ಉಂಟುಮಾಡಿದೆ. ಕೆಲವು ಕಡೆಯಲ್ಲಿ ಕುಡಿಯುವ ನೀರನ್ನು ಒದಗಿಸಲು ಕೊರೆಸಿರುವ ಕೊಳವೆಬಾವಿಗಳು ಹೊಂದಿರುವ ಕೆರೆಗಳನ್ನು ಎರಡು ಹಂತದಲ್ಲಿ ಸಂಸ್ಕರಿಸಿದ ತ್ಯಾಜ್ಯ ನೀರನ್ನು ತುಂಬಿಸಿ ಅಂತರ್ಜಲವನ್ನು ಕಲುಷಿತಗೊಳಿಸುವುದಲ್ಲದೆ, ಮೀನುಗಳು ಮತ್ತು ಇತರ ಜಲಚರಗಳ ಸಾವಿಗೆ ಕಾರಣವಾಗಿದೆ. ಕೆರೆಗಳ ಜೀವವೈವಿಧ್ಯ ನಾಶಕ್ಕೆ ಕಾರಣವಾಗಿವೆ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಕೆಸಿ ವ್ಯಾಲಿ ಹರಿಯುವ ಕಾಲುವೆಗಳಲ್ಲಿ ಅನವಶ್ಯಕ ಗಿಡಗಂಟಿಗಳಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ ಇದರ ಜೊತೆಗೆ ಹಸಿರು ಸೊಳ್ಳೆಗಳ ಉತ್ಪತ್ತಿಯಿಂದ ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದ್ದು ಕೂಡಲೇ ಕಾಲುವೆಗಳನ್ನು ದುರಸ್ತಿ ಮಾಡಬೇಕು ಬೆಳೆಗಳಿಗೆ ರೋಗದ ಬಗ್ಗೆ ತಜ್ಞರ ಸಮಿತಿಯಿಂದ ತನಿಖೆ ಮಾಡಿ ಗುಣಮಟ್ಟದ ಔಷಧಗಳನ್ನು ಸರಕಾರ ಮತ್ತು ಜಿಲ್ಲಾಡಳಿತ ಮೂಲಕ ವಿತರಿಸುವ ಕೆಲಸವನ್ನು ಮಾಡಿ ರೈತರ ಬೆಳೆಗಳನ್ನು ಮತ್ತು ಬಡ ರೈತರನ್ನು ರಕ್ಷಣೆ ಮಾಡಬೇಕು ಎಂದು ನಾರಾಯಣಗೌಡರು ಹೇಳಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮುಖಂಡರಾದ ಫಾರೂಕ್ ಪಾಷ, ರತ್ನಮ್ಮ, ಸುನಿತಮ್ಮ, ಗೌರಮ್ಮ, ಶಿವಾರೆಡ್ಡಿ, ಮಂಗಸಂದ್ರ ತಿಮ್ಮಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

8 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

19 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

20 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

21 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

22 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago