Categories: ಕೋಲಾರ

ಕೆಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣ ಕಾಲುವೆಗಳ ದುರಸ್ತಿಗೆ ನಾರಾಯಣಗೌಡ ಒತ್ತಾಯ

ಕೋಲಾರ: ಅವಳಿ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕೆ.ಸಿ ವ್ಯಾಲಿ ಯೋಜನೆಯಡಿ ಹರಿಸುತ್ತಿರುವ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಬೇಕು‌ ನೀರು ಹರಿಯುವ ಕಾಲುವೆಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಈ ಭಾಗದಲ್ಲಿ ಯಾವುದೇ ನದಿ ನಾಲೆಗಳು ಇಲ್ಲದೆ, ಶಾಶ್ವತವಾದ ನೀರಾವರಿ ಯೋಜನೆಗಳಿಲ್ಲದೇ ವಂಚಿತವಾದ ಕಾರಣ ಈ ಭಾಗದ ರೈತರು ಕುಡಿಯುವ ನೀರು ಮತ್ತು ಕೃಷಿ ಬಳಕೆಗಾಗಿ ಸುಮಾರು 1500 ರಿಂದ 2000 ಅಡಿ ಆಳದ ಕೊಳವೆಬಾವಿ‌ ಕೊರೆಸುವ ಅನಿವಾರ್ಯತೆಗೆ ಸಿಲುಕಿದ್ದರು ಇದರಿಂದಲೇ ಅಂತರ್ಜಲ ಮಟ್ಟವು ಪಾತಾಳಕ್ಕೆ ಕುಸಿದಿತ್ತು ಕೆಸಿ ವ್ಯಾಲಿ ಯೋಜನೆಯಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಯೋಜನೆಯನ್ನು ರೂಪಿಸಲಾಗಿತ್ತು ಈ ಯೋಜನೆ ಕುಡಿಯಲು ಹಾಗೂ ಕೃಷಿ ಬೆಳೆಗಳನ್ನು ವಿಷಪೂರಿತಗೊಳಿಸುವುದರ ಜತೆಗೆ ಜನರು ಮತ್ತು ಜಾನುವಾರುಗಳನ್ನು ಮಾರಣಾಂತಿಕ ಕಾಯಿಲೆಗಳಿಗೆ ದೂಡುತ್ತಿದೆ ಕೂಡಲೇ ಮೂರನೇ ಹಂತದ ಶುದ್ದೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಬರಪೀಡಿತ ಜಿಲ್ಲೆಗಳಿಗೆ ಶಾಶ್ವತವಾದ ಶುದ್ಧ ಕುಡಿಯುವ ನೀರು ಒದಗಿಸುವ ಅವೈಜ್ಞಾನಿಕ ಎತ್ತಿನಹೊಳೆ ಯೋಜನೆ ಇಲ್ಲಿಯವರೆಗೂ ನೀಡುವಲ್ಲಿ ವಿಫಲವಾಗಿದೆ.ಕೆಸಿ ವ್ಯಾಲಿ ಬೆಂಗಳೂರು ನಗರದಲ್ಲಿ ಎರಡು ಹಂತದಲ್ಲಿ ಮಾತ್ರ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೆರೆಗಳಿಗೆ ಹರಿಸಿ ಅಂತರ್ಜಲವನ್ನು ಪುನರುಜ್ಜೀವನಗೊಳಿಸುವ ಯೋಜನೆಯಾದರು ಇದು ರೈತರಿಗೆ ಜಾನುವಾರುಗಳಿಗೆ ಸಂಕಟ ಉಂಟುಮಾಡಿದೆ. ಕೆಲವು ಕಡೆಯಲ್ಲಿ ಕುಡಿಯುವ ನೀರನ್ನು ಒದಗಿಸಲು ಕೊರೆಸಿರುವ ಕೊಳವೆಬಾವಿಗಳು ಹೊಂದಿರುವ ಕೆರೆಗಳನ್ನು ಎರಡು ಹಂತದಲ್ಲಿ ಸಂಸ್ಕರಿಸಿದ ತ್ಯಾಜ್ಯ ನೀರನ್ನು ತುಂಬಿಸಿ ಅಂತರ್ಜಲವನ್ನು ಕಲುಷಿತಗೊಳಿಸುವುದಲ್ಲದೆ, ಮೀನುಗಳು ಮತ್ತು ಇತರ ಜಲಚರಗಳ ಸಾವಿಗೆ ಕಾರಣವಾಗಿದೆ. ಕೆರೆಗಳ ಜೀವವೈವಿಧ್ಯ ನಾಶಕ್ಕೆ ಕಾರಣವಾಗಿವೆ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಕೆಸಿ ವ್ಯಾಲಿ ಹರಿಯುವ ಕಾಲುವೆಗಳಲ್ಲಿ ಅನವಶ್ಯಕ ಗಿಡಗಂಟಿಗಳಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ ಇದರ ಜೊತೆಗೆ ಹಸಿರು ಸೊಳ್ಳೆಗಳ ಉತ್ಪತ್ತಿಯಿಂದ ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದ್ದು ಕೂಡಲೇ ಕಾಲುವೆಗಳನ್ನು ದುರಸ್ತಿ ಮಾಡಬೇಕು ಬೆಳೆಗಳಿಗೆ ರೋಗದ ಬಗ್ಗೆ ತಜ್ಞರ ಸಮಿತಿಯಿಂದ ತನಿಖೆ ಮಾಡಿ ಗುಣಮಟ್ಟದ ಔಷಧಗಳನ್ನು ಸರಕಾರ ಮತ್ತು ಜಿಲ್ಲಾಡಳಿತ ಮೂಲಕ ವಿತರಿಸುವ ಕೆಲಸವನ್ನು ಮಾಡಿ ರೈತರ ಬೆಳೆಗಳನ್ನು ಮತ್ತು ಬಡ ರೈತರನ್ನು ರಕ್ಷಣೆ ಮಾಡಬೇಕು ಎಂದು ನಾರಾಯಣಗೌಡರು ಹೇಳಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮುಖಂಡರಾದ ಫಾರೂಕ್ ಪಾಷ, ರತ್ನಮ್ಮ, ಸುನಿತಮ್ಮ, ಗೌರಮ್ಮ, ಶಿವಾರೆಡ್ಡಿ, ಮಂಗಸಂದ್ರ ತಿಮ್ಮಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

12 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

13 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

15 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

16 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

21 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

1 day ago