ಬೆಂಗಳೂರು: ಕೆಆರ್ ಪುರಂನ ಶ್ರೀರಾಮ್ ಬ್ಲೂ ಅಪಾರ್ಟ್ಮೆಂಟ್ನಲ್ಲಿ ಮೆಡಿಕವರ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ಇಸಿಜಿ ತಪಾಸಣೆ ಹಾಗೂ ಹೃದ್ರೋಗ ತಜ್ಞರ ಸಲಹೆ ಲಭ್ಯವಿತ್ತು. ಈ ಶಿಬಿರದಲ್ಲಿ ನೂರಾರು ಮಂದಿ ಪಾಲ್ಗೊಂಡು ಪ್ರಯೋಜನ ಪಡೆದರು.
ಮೆಡಿಕವರ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಅಶ್ವಿನ್ ದವರೆ ಈ ಶಿಬಿರದಲ್ಲಿ ಭಾಗವಹಿಸಿ, ಸಾರ್ವಜನಿಕರಿಗೆ ಹೃದಯ ಆರೋಗ್ಯ ಕುರಿತ ಸಲಹೆಗಳನ್ನು ನೀಡಿದರು. ಈ ಶಿಬಿರದ ಉದ್ದೇಶ, ಹೃದಯ ಸಂಬಂಧಿತ ರೋಗಗಳ ತಡೆಯ ಕ್ರಮಗಳು ಹಾಗೂ ಸಮಯೋಚಿತ ತಪಾಸಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.
ಈ ಶಿಬಿರವನ್ನು ಸ್ಥಳೀಯ ನಿವಾಸಿ ಸಂಘದ ಅಧ್ಯಕ್ಷ ರವಿ ವರ್ಮಾ ಹಾಗೂ ಉಪಾಧ್ಯಕ್ಷ ಪಿಯೂಷ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ನಿವಾಸಿಗಳು ಈ ಆರೋಗ್ಯ ಶಿಬಿರದ ಕುರಿತು ಸಂತೋಷ ವ್ಯಕ್ತಪಡಿಸಿದರು ಹಾಗೂ ವೈದ್ಯರ ಸೇವೆಗಳಿಗೆ ಕೃತಜ್ಞತೆ ಸಲ್ಲಿಸಿದರು.
ಇಂತಹ ಆರೋಗ್ಯ ಶಿಬಿರಗಳು ಸಮುದಾಯ ಹಾಗೂ ವೈದ್ಯಕೀಯ ತಜ್ಞರ ನಡುವೆ ಸಂಪರ್ಕ ಕಲ್ಪಿಸಿ, ಆರೋಗ್ಯಕರ ಜೀವನಕ್ಕಾಗಿ ಮಾರ್ಗದರ್ಶನ ನೀಡುವಲ್ಲಿ ಸಹಾಯವಾಗುತ್ತವೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…