ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಹೆಚ್ ಎನ್ ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮಂಚೇನಹಳ್ಳಿ ರಸ್ತೆಯ ಚಿಕ್ಕಮುದ್ದೇನಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಮಂತ್ರಿ ಕೆ ಎಚ್ ಮುನಿಯಪ್ಪ ಪ್ರೀಮಿಯರ್ ಲೀಗ್ ಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಯುವಜನರಲ್ಲಿ ಕ್ರೀಡಾ ಮನೋಭಾವ ಬೆಳೆಸುವ ಇಂತಹ ಕಾರ್ಯಕ್ರಮಗಳು ಅತ್ಯಂತ ಶ್ಲಾಘನೀಯ. ಸೋಲು, ಗೆಲುವು ಸರ್ವೇ ಸಾಮಾನ್ಯ, ಎರಡನ್ನು ಸಮಾನವಾಗಿ ಕಾಣಬೇಕು. ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ತಂಡಗಳಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.
ನಂತರ ತೂಬಗೆರೆ ಹೋಬಳಿಯ ಗ್ರಾಮಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಹಿರೇಮುದ್ದೇನಹಳ್ಳಿ ರಸ್ತೆ ಕಾಮಗಾರಿಗೆ ಅತಿ ಶೀಘ್ರವಾಗಿ ಗುದ್ದಲಿ ಪೂಜೆ ಮಾಡಲಾಗುವುದು ಎಂದು ಭರವಸೆ ನೀಡಿದರು..
ಈ ವೇಳೆ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್, ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ದೇವನಹಳ್ಳಿ ವಿಧಾನ ಸಭಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಗರ್ ಜಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ನರ್ವಿಜ್, ಭೂ ಮಂಜೂರಾತಿ ಕಮಿಟಿ ಸದಸ್ಯ ಶ್ರೀಧರ್, ಕೃಷಿಕ ಸಮಾಜದ ಅಧ್ಯಕ್ಷ ಮುರಳಿ, ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಹೆಚ್ ಎನ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…