ದೊಡ್ಡಬಳ್ಳಾಪುರ: ರಾಜ್ಯ ಸಚಿವ ಸಂಪುಟ ಪುನರ್ರಚನೆಯ ಸಂದರ್ಭದಲ್ಲಿ ಮಾದಿಗ ಸಮುದಾಯದ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು ಎಂದು ಮಾದಾರ ಮಹಾಸಭಾ ಮುಖಂಡರು ಆಗ್ರಹಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾದಾರ ಮಹಾಸಭಾ ಮುಖಂಡ ರಾಮಕೃಷ್ಣ, ರಾಜ್ಯದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ 60 ಲಕ್ಷಕ್ಕೂ ಅಧಿಕವಾಗಿದ್ದು, ಇಂತಹ ದೊಡ್ಡ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ನ್ಯಾಯಯುತ ಹಾಗೂ ಬಲಿಷ್ಠ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕು ಎಂದು ಹೇಳಿದರು.
ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಜೊತೆಗೆ, ಆರ್.ಬಿ. ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ಹಾಗೂ ಹೆಚ್. ಆಂಜನೇಯ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವ ಮೂಲಕ ದಲಿತ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಅವಕಾಶ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.
ಮಾದಾರ ಮಹಾಸಭಾ ತಾಲೂಕು ಅಧ್ಯಕ್ಷ ತಳಗವಾರ ನಾಗರಾಜ್ ಮಾತನಾಡಿ, ಕೆ.ಎಚ್. ಮುನಿಯಪ್ಪ ಅವರು ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಅವರಿಗೆ ಡಿಸಿಎಂ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ರಾಜಕೀಯ ಶಕ್ತಿ ತುಂಬಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆಲ್ಲುವಲ್ಲಿ ಮುನಿಯಪ್ಪ ಅವರ ಕೊಡುಗೆ ಮಹತ್ವದ್ದಾಗಿದೆ. ಮಾದಿಗ ಸಮುದಾಯದ ಮತಗಳನ್ನು ಕಾಂಗ್ರೆಸ್ ಪರವಾಗಿ ಕ್ರೋಢೀಕರಿಸಲು ಅವರು ಶ್ರಮಿಸಿದ್ದು, ಅದಕ್ಕೆ ತಕ್ಕ ಗೌರವವಾಗಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಇಲ್ಲಿಯವರೆಗೆ ಮಾದಿಗ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ದೊರೆತಿಲ್ಲ. ಕನಿಷ್ಠ ಈ ಬಾರಿ ಡಿಸಿಎಂ ಸ್ಥಾನ ಹಾಗೂ ಪ್ರಭಾವಿ ಖಾತೆಯನ್ನು ನೀಡಬೇಕು. ಸಮುದಾಯದ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಕಲ್ಪಿಸಬೇಕು. ಎಡಗೈ ಸಮುದಾಯವನ್ನು ನಿರ್ಲಕ್ಷಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಪಕಾರನಹಳ್ಳಿ ಹನುಮಯ್ಯ, ವೆಂಕಟೇಶ್, ಗಂಗರಾಜು, ವೆಂಕಟೇಶ್, ಕೆ.ವಿ. ಮುನಿಯಪ್ಪ, ಹನುಮಂತಯ್ಯ, ಪುರುಷೋತ್ತಮ್, ಲಕ್ಕಪ್ಪ, ಆರ್.ವಿ. ಮಹೇಶ್, ಆರ್.ವಿ. ಶಿವಕುಮಾರ್, ಆರ್.ವಿ. ಮನು, ಶ್ರೀರಾಮ್, ಮಂಜುನಾಥ್, ಮುನಿರಾಜು, ನಾಗರಾಜು, ಚಿಕ್ಕನರಸಪ್ಪ, ಮುನಿರಾಜು, ಟಿ.ಡಿ. ಮುನಿಯಪ್ಪ ಸೇರಿದಂತೆ ಮಾದಾರ ಮಹಾಸಭಾದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…